ನೆರೆಪೀಡಿತ ಪ್ರದೇಶಗಳ ರೈತರಿಗೆ ಶಾಸಕ ಮಹೇಶ್ ಸಾಂತ್ವನ

ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಬಿಟ್ಟಿರುವುದರಿಂದ ಕಾವೇರಿ ಪಾತ್ರದ ಕೊಳ್ಳೇಗಾಲ ತಾಲೂಕಿನ ದಾಸನಪುರ, ಹಂಪಾಪುರ, ಮುಳ್ಳೂರು, ಹಳೆಅಣಗಳ್ಳಿ ಸೇರಿದಂತೆ ಹಲವು ಗ್ರಾಮಗಳ ಜಮೀನು ನುಗ್ಗಿದ್ದು, ಶಾಸಕ ಎನ್ ಮಹೇಶ್ ಈ ಪ್ರದೇಶಗಳಿಗೆ ಭೇಡಿ ನೀಡಿ ಆತಂಕದಲ್ಲಿರುವ ರೈತರನ್ನು ಸಂತೈಸಿದರು. ಜಲಾಶಯಗಳಿಂದ ಬಿಟ್ಟಿರುವ ನೀರು ಹಲವಾರು ಕಡೆ ಜಮೀನುಗಳಿಗೆ ನುಗ್ಗಿದೆ. ಅಪಾರ ಪ್ರಮಾಣದ ಬೆಳೆಹಾನಿಯಿಂದಾಗಿ ತೀರಾ ಸಂಕಷ್ಟದಲ್ಲಿರುವ ರೈತರಿಗೆ ನೆರವಿನ ಭರವಸೆ ನೀಡಿದರು. ಇಲ್ಲಿ ಸ್ಮರಿಸಬಹುದಾದ ಅಂಶವೆಂದರೆ, ಕಳೆದ ವರ್ಷವೂ ಈ ಗ್ರಾಮಗಳು […]

ನೆರೆಪೀಡಿತ ಪ್ರದೇಶಗಳ ರೈತರಿಗೆ ಶಾಸಕ ಮಹೇಶ್ ಸಾಂತ್ವನ
ಅರುಣ್​ ಕುಮಾರ್​ ಬೆಳ್ಳಿ

Updated on: Aug 10, 2020 | 4:45 PM

ಕಬಿನಿ ಮತ್ತು ಕೆಆರ್ ಎಸ್ ಜಲಾಶಯಗಳಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಬಿಟ್ಟಿರುವುದರಿಂದ ಕಾವೇರಿ ಪಾತ್ರದ ಕೊಳ್ಳೇಗಾಲ ತಾಲೂಕಿನ ದಾಸನಪುರ, ಹಂಪಾಪುರ, ಮುಳ್ಳೂರು, ಹಳೆಅಣಗಳ್ಳಿ ಸೇರಿದಂತೆ ಹಲವು ಗ್ರಾಮಗಳ ಜಮೀನು ನುಗ್ಗಿದ್ದು, ಶಾಸಕ ಎನ್ ಮಹೇಶ್ ಈ ಪ್ರದೇಶಗಳಿಗೆ ಭೇಡಿ ನೀಡಿ ಆತಂಕದಲ್ಲಿರುವ ರೈತರನ್ನು ಸಂತೈಸಿದರು.

ಜಲಾಶಯಗಳಿಂದ ಬಿಟ್ಟಿರುವ ನೀರು ಹಲವಾರು ಕಡೆ ಜಮೀನುಗಳಿಗೆ ನುಗ್ಗಿದೆ. ಅಪಾರ ಪ್ರಮಾಣದ ಬೆಳೆಹಾನಿಯಿಂದಾಗಿ ತೀರಾ ಸಂಕಷ್ಟದಲ್ಲಿರುವ ರೈತರಿಗೆ ನೆರವಿನ ಭರವಸೆ ನೀಡಿದರು. ಇಲ್ಲಿ ಸ್ಮರಿಸಬಹುದಾದ ಅಂಶವೆಂದರೆ, ಕಳೆದ ವರ್ಷವೂ ಈ ಗ್ರಾಮಗಳು ಪ್ರವಾಹಕ್ಕೀಡಾಗಿ, ರೈತರು ಬಸವಳಿದಿದ್ದರು.

ರೈತರೊಂದಿಗೆ ಮಾತಾಡಿದ ನಂತರ ಸಚಿವ ಮಹೇಶ್, ಅಧಿಕಾರಿಗಳೊಂದಿಗೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿದರು.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us