AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆಮಹದೇಶ್ವರ ಬೆಟ್ಟ: ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದರೂ ಮಾದಪ್ಪನ ಭಕ್ತರ ಬಳಕೆಗೆ ಸಿಗದ ವಜ್ರಮಲೆ ಭವನ

ಮಾದಪ್ಪನ ಭಕ್ತರು ಕೋಟ್ಯಂತರ ಸಂಖ್ಯೆಯಲ್ಲಿದ್ದಾರೆ. ಹಬ್ಬ ಹರಿದಿನ ಅಮವಾಸ್ಯೆ ಬಂದರೆ ಮಲೆ ಮಹದೇಶ್ವರ ಬೆಟ್ಟಲ್ಲಿ ಕಾಲಿಡಲು ಸ್ಥಳ ಇರುವುದಿಲ್ಲ, ಇತ್ತ ತಂಗುವುದಕ್ಕೂ ಸ್ಥಳವಿರುವುದಿಲ್ಲ. ಈ ಸಮಸ್ಯೆ ಬಗೆಹರಿಸಲು ಪ್ರಾಧಿಕಾರ ಮುಂದಾಗಿದ್ದು, 376 ಕೊಠಡಿಯ ವಜ್ರ ಮಲೆ ಕಟ್ಟಡ ಉದ್ಘಾಟನೆಯಾಗಿದೆ. ಆದರೂ ಪ್ರಯೋಜನಕ್ಕೆ ಬಾರದಂತಾಗಿದೆ. ಪ್ರಾಧಿಕಾರದ ವಿಳಂಬ ನಡೆಗೆ ಭಕ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮಲೆಮಹದೇಶ್ವರ ಬೆಟ್ಟ: ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದರೂ ಮಾದಪ್ಪನ ಭಕ್ತರ ಬಳಕೆಗೆ ಸಿಗದ ವಜ್ರಮಲೆ ಭವನ
ವಜ್ರಮಲೆ ಭವನ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 11, 2025 | 7:21 AM

Share

ಚಾಮರಾಜನಗರ, ಆಗಸ್ಟ್ 11: ಮಲೆ ಮಾದಪ್ಪನಿಗೆ (MM Hills) ಭಕ್ತ ವೃಂದ ಅಪಾರ. ರಾಜ್ಯ ಅಷ್ಟೇ ಅಲ್ಲದೆ ಹೊರ ರಾಜ್ಯದಿಂದಲೂ ಮಾದಪ್ಪನ ದರ್ಶನ ಪಡೆಯಲು ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಹೀಗೆ ಬರುವ ಭಕ್ತವೃಂದಕ್ಕೆ ಮೂಲಭೂತ ಸೌಕರ್ಯ ನೀಡುವುದು ಪ್ರಾಧಿಕಾರದ ಆದ್ಯ ಕರ್ತವ್ಯ. ಹಾಗಾಗಿ ದೂರದ ಊರಿನಿಂದ ಬರುವ ಭಕ್ತರು ವಿಶ್ರಮಿಸಲು ಕೊಠಡಿಗಳ ಕೊರತೆ ಇರುವ ಕಾರಣ 5 ಮಹಡಿಯ 376 ಕೊಠಡಿಗಳ ‘ವಜ್ರಮಲೆ ಭವನ (Vajramale Bhavan)’ ನಿರ್ಮಾಣ ಮಾಡಲಾಗಿತ್ತು. ಇದನ್ನ ಏಪ್ರಿಲ್ ತಿಂಗಳಲ್ಲಿ ನಡೆದ ಕ್ಯಾಬಿನೆಟ್ ಮೀಟಿಂಗ್ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ (Siddaramaiah) ಉದ್ಘಾಟನೆಯನ್ನೂ ಮಾಡಿದ್ದರು. ಆದರೂ ಭಕ್ತರ ಬಳಕೆಗೆ ನೀಡದೇ ಇರುವುದು ಆಕ್ರೋಶಕ್ಕೆ ಗುರಿಯಾಗಿದೆ.

ಈ ನೂತನ ವಜ್ರಮಲೆ ಭವನದಲ್ಲಿ ಬರೋಬ್ಬರಿ 8 ವಿವಿಐಪಿ ಕೊಠಡಿಗಳಿದ್ದು ಕೇವಲ ಈ ಕೊಠಡಿಗಳಿಗೆ ಮಾತ್ರ ಎಸಿ ಸೇರಿದಂತೆ ಮಂಚ ಸೋಫಾ ಹಾಗೂ ಎಲ್ಲಾ ರೀತಿಯ ವ್ಯವಸ್ಥೆ ಅಳವಡಿಸಲಾಗಿದೆ. ಇನ್ನುಳಿದ ಸಾಮಾನ್ಯ ಕೊಠಡಿಗಳಿಗೆ ಇನ್ನೂ ಪೀಠೋಪಕರಣಗಳನ್ನು ಅಳವಡಿಸಲಾಗಿಲ್ಲ.

ಎಷ್ಟೊ ಮಂದಿ ಭಕ್ತರು ದೂರದ ಊರಿನಿಂದ ಬಂದು ವಾಸ್ಥವ್ಯ ಸಿಗದೆ ಕೊನೆಗೆ ಖಾಸಗಿ ಲಾಡ್ಜ್​ಗಳಲ್ಲಿ ಹೆಚ್ಚಿನ ಹಣ ಕೊಟ್ಟು ತಂಗುವಂತಹ ಅನಿವಾರ್ಯತೆ ಎದುರಾಗಿದೆ. ಕೈಯಲ್ಲೇ ಬೆಣ್ಣೆ ಇಟ್ಟುಕೊಂಡು ತುಪ್ಪಕ್ಕಾಗಿ ಊರೆಲ್ಲ ತಿರುಗಿದರು ಎನ್ನುವಂತಾಗಿದೆ ಎಂದು ಭಕ್ತ ಮಹದೇವ ಕಣ್ಣನ್ ಎಂಬವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
ಇಂದಿನಿಂದ ವಿಧಾನಸಭೆ ಅಧಿವೇಶನ: ಸರ್ಕಾರದ ವಿರುದ್ಧ ಸಮರಕ್ಕೆ ವಿಪಕ್ಷಗಳ ತಂತ್ರ
Image
ಪೀಠಾಧಿಪತಿಯ ಮೊಬೈಲ್​ನಲ್ಲಿತ್ತು ಕಾಮಪುರಾಣ, ಮದ್ಯ-ಮಾಂಸದ ಫೊಟೋಸ್!
Image
ಮಹಮ್ಮದ್ ನಿಸಾರ್ ನಿಜಲಿಂಗ ಸ್ವಾಮೀಜಿಯಾಗಿದ್ಹೇಗೆ? ಸ್ಫೋಟಕ ಮಾಹಿತಿ ಬಹಿರಂಗ
Image
ವಿರಕ್ತ ಮಠಕ್ಕೆ ಮುಸ್ಲಿಂ ವ್ಯಕ್ತಿ ಪೀಠಾಧಿಪತಿ: ಸ್ವಾಗತಿಸಿದ ವಚನಾನಂದ ಶ್ರೀ

ಇದನ್ನೂ ಓದಿ: ಪೀಠಾಧಿಪತಿಯ ಮೊಬೈಲ್​ನಲ್ಲಿತ್ತು ಕಾಮಪುರಾಣ, ಮದ್ಯ-ಮಾಂಸದ ಫೊಟೋಸ್! ಬಗೆದಷ್ಟು ಬಯಲಾಗುತ್ತಿದೆ ರಹಸ್ಯ

ಒಟ್ಟಿನಲ್ಲಿ, ಆರಂಭ ಶೂರತ್ವದಂತೆ ಕೆಲಸ ಕಾರ್ಯ ಆರಂಭಿಸಿ ಬಳಿಕ ಯಾರಿಗೂ ಪ್ರಯೋಜನಕ್ಕೆ ಬಾರದೆ ಇರುವ ರೀತಿ ಮಾಡಿದ ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ರಘು ನಡೆ ಈಗ ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು