AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ಉಗುರು ಕಿತ್ತು ಪತಿಯ ಕೊಲೆ ಮಾಡಿದ ಧರ್ಮಪತ್ನಿ, ಸೋದರನೂ ಭಾಗಿ!

ಚಾಮರಾಜನಗರ: ಹಣಕ್ಕಾಗಿ ಅಣ್ಣನ ಜೊತೆ ಸೇರಿ ಪತಿಯನ್ನೇ ಅಪಹರಿಸಿ ಪತ್ನಿ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಹಣಕಾಸಿನ ವಿಚಾರವಾಗಿ ಪತಿ ಮತ್ತು ಪತ್ನಿ ನಡುವೆ ವೈಷಮ್ಯವಿತ್ತು. ಹೀಗಾಗಿ ಸ್ವಂತ ಅಣ್ಣನೇ ತನ್ನ ತಂಗಿಯ ಗಂಡನನ್ನು ಸಾಯಿಸಲು ಸಾಥ್ ನೀಡಿದ್ದಾನೆ. ಅಣ್ಣನ ಜೊತೆ ಸೇರಿ ರಶ್ಮಿ 2ನೇ ಗಂಡ ಸುಬ್ರಹ್ಮಣ್ಯನನ್ನು ಅಪಹರಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾಳೆ. 5 ದಿನಗಳ ಕಾಲ ಗೃಹಬಂಧನದಲ್ಲಿಟ್ಟು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸುಬ್ರಹ್ಮಣ್ಯ ಉಗುರು ಕಿತ್ತು ರಾಡ್‌ನಿಂದ […]

ಆಸ್ತಿಗಾಗಿ ಉಗುರು ಕಿತ್ತು ಪತಿಯ ಕೊಲೆ ಮಾಡಿದ ಧರ್ಮಪತ್ನಿ, ಸೋದರನೂ ಭಾಗಿ!
ಸಾಧು ಶ್ರೀನಾಥ್​
|

Updated on:Jan 29, 2020 | 12:23 PM

Share

ಚಾಮರಾಜನಗರ: ಹಣಕ್ಕಾಗಿ ಅಣ್ಣನ ಜೊತೆ ಸೇರಿ ಪತಿಯನ್ನೇ ಅಪಹರಿಸಿ ಪತ್ನಿ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಹಣಕಾಸಿನ ವಿಚಾರವಾಗಿ ಪತಿ ಮತ್ತು ಪತ್ನಿ ನಡುವೆ ವೈಷಮ್ಯವಿತ್ತು. ಹೀಗಾಗಿ ಸ್ವಂತ ಅಣ್ಣನೇ ತನ್ನ ತಂಗಿಯ ಗಂಡನನ್ನು ಸಾಯಿಸಲು ಸಾಥ್ ನೀಡಿದ್ದಾನೆ. ಅಣ್ಣನ ಜೊತೆ ಸೇರಿ ರಶ್ಮಿ 2ನೇ ಗಂಡ ಸುಬ್ರಹ್ಮಣ್ಯನನ್ನು ಅಪಹರಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾಳೆ.

5 ದಿನಗಳ ಕಾಲ ಗೃಹಬಂಧನದಲ್ಲಿಟ್ಟು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸುಬ್ರಹ್ಮಣ್ಯ ಉಗುರು ಕಿತ್ತು ರಾಡ್‌ನಿಂದ ಹಲ್ಲೆ ನಡೆಸಿ ಹಿಂಸೆ ನೀಡಿ ಬಳಿಕ ಆತನನ್ನು ಮುಡಿಗುಂಡದ ಮನೆ ಬಳಿ ಬಿಟ್ಟುಹೋಗಿದ್ರು. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುಬ್ರಹ್ಮಣ್ಯ ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯಲ್ಲಿ 3 ದಿನ ಚಿಕಿತ್ಸೆ ಪಡೆದಿದ್ದಾರೆ.

ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಈ ವೇಳೆ ಮೈಸೂರಿನ ವಿಜಯನಗರ ಪೊಲೀಸರ ಎದುರು ಮರಣಪೂರ್ವ ಹೇಳಿಕೆ ನೀಡಿದ್ದಾರೆ. ಬಳಿಕ ಚಿಕಿತ್ಸೆ ಫಲಿಸದೆ ಗಾಯಾಳು ಸುಬ್ರಹ್ಮಣ್ಯ ಮೃತಪಟ್ಟಿದ್ದಾರೆ. ಸದ್ಯ ಘಟನೆ ಸಂಬಂಧ ಮೃತ ಸುಬ್ರಹ್ಮಣ್ಯನ ಪತ್ನಿ ರಶ್ಮಿ, ರಶ್ಮಿ ಸಹೋದರ ರಾಕೇಶ್, ಮುಡಿಗುಂಡದ ಪ್ರದೀಪ್, ರಾಕೇಶ್ ಎಂಬ ನಾಲ್ವರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.

ಜಮೀನು, ಆಸ್ತಿ ಆಸೆಗಾಗಿ ನನ್ನನ್ನೂ ಕೊಲೆ ಮಾಡಲು ಯತ್ನಿಸಿದ್ರು: 6 ತಿಂಗಳ ಹಿಂದೆ ಮೃತ ಸುಬ್ರಹ್ಮಣ್ಯನ ತಂದೆ ನಾಗೇಂದ್ರ ಮೂರ್ತಿ ಅವರ ಮನೆಗೆ ಗೂಂಡಾಗಳ ಜೊತೆ ಹೋದ ರಶ್ಮಿ ನನ್ನ ಗಂಡ ನಿಮ್ಮ ಮನೆಯಲ್ಲಿ 40 ಲಕ್ಷ ಹಣ ಇಟ್ಟಿದ್ದಾನೆ ಅದನ್ನು ಕೊಡಿ ಎಂದು ಬೆದರಿಕೆ ಹಾಕಿ, ನನ್ನನ್ನು ಕಿಡ್ನಾಪ್ ಮಾಡಲು ಯತ್ನಿಸಿದ್ದಳು ಎಂದು ಸುಬ್ರಹ್ಮಣ್ಯನ ತಂದೆ ನಾಗೇಂದ್ರ ಮೂರ್ತಿ ಆರೋಪಿಸಿದ್ದಾರೆ.

ಅಲ್ಲದೆ ರಶ್ಮಿ ತನ್ನ ಗಂಡನ ಬಳಿ ದುಡ್ಡು ಪಡೆದು ದೇಶ ಸುತ್ತುತಿದ್ದಳು. ಹಾಗೂ ಅನೇಕ ರೌಡಿ, ಗೂಂಡಾಗಳು ಇವಳ ಜೊತೆ ಇದ್ದರು. ನನ್ನನ್ನ ಬೆದರಿಸಲು ಮೈಸೂರಿನಿಂದ 30 ಜನ ಗೂಂಡಾಗಳನ್ನು ಕರೆದುಕೊಂಡು ಬಂದಿದ್ದಳು ಎಂದು ತಿಳಿಸಿದ್ದಾರೆ.

Published On - 1:00 pm, Tue, 28 January 20

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ