AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ಉಗುರು ಕಿತ್ತು ಪತಿಯ ಕೊಲೆ ಮಾಡಿದ ಧರ್ಮಪತ್ನಿ, ಸೋದರನೂ ಭಾಗಿ!

ಚಾಮರಾಜನಗರ: ಹಣಕ್ಕಾಗಿ ಅಣ್ಣನ ಜೊತೆ ಸೇರಿ ಪತಿಯನ್ನೇ ಅಪಹರಿಸಿ ಪತ್ನಿ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಹಣಕಾಸಿನ ವಿಚಾರವಾಗಿ ಪತಿ ಮತ್ತು ಪತ್ನಿ ನಡುವೆ ವೈಷಮ್ಯವಿತ್ತು. ಹೀಗಾಗಿ ಸ್ವಂತ ಅಣ್ಣನೇ ತನ್ನ ತಂಗಿಯ ಗಂಡನನ್ನು ಸಾಯಿಸಲು ಸಾಥ್ ನೀಡಿದ್ದಾನೆ. ಅಣ್ಣನ ಜೊತೆ ಸೇರಿ ರಶ್ಮಿ 2ನೇ ಗಂಡ ಸುಬ್ರಹ್ಮಣ್ಯನನ್ನು ಅಪಹರಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾಳೆ. 5 ದಿನಗಳ ಕಾಲ ಗೃಹಬಂಧನದಲ್ಲಿಟ್ಟು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸುಬ್ರಹ್ಮಣ್ಯ ಉಗುರು ಕಿತ್ತು ರಾಡ್‌ನಿಂದ […]

ಆಸ್ತಿಗಾಗಿ ಉಗುರು ಕಿತ್ತು ಪತಿಯ ಕೊಲೆ ಮಾಡಿದ ಧರ್ಮಪತ್ನಿ, ಸೋದರನೂ ಭಾಗಿ!
ಸಾಧು ಶ್ರೀನಾಥ್​
|

Updated on:Jan 29, 2020 | 12:23 PM

Share

ಚಾಮರಾಜನಗರ: ಹಣಕ್ಕಾಗಿ ಅಣ್ಣನ ಜೊತೆ ಸೇರಿ ಪತಿಯನ್ನೇ ಅಪಹರಿಸಿ ಪತ್ನಿ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಹಣಕಾಸಿನ ವಿಚಾರವಾಗಿ ಪತಿ ಮತ್ತು ಪತ್ನಿ ನಡುವೆ ವೈಷಮ್ಯವಿತ್ತು. ಹೀಗಾಗಿ ಸ್ವಂತ ಅಣ್ಣನೇ ತನ್ನ ತಂಗಿಯ ಗಂಡನನ್ನು ಸಾಯಿಸಲು ಸಾಥ್ ನೀಡಿದ್ದಾನೆ. ಅಣ್ಣನ ಜೊತೆ ಸೇರಿ ರಶ್ಮಿ 2ನೇ ಗಂಡ ಸುಬ್ರಹ್ಮಣ್ಯನನ್ನು ಅಪಹರಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾಳೆ.

5 ದಿನಗಳ ಕಾಲ ಗೃಹಬಂಧನದಲ್ಲಿಟ್ಟು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸುಬ್ರಹ್ಮಣ್ಯ ಉಗುರು ಕಿತ್ತು ರಾಡ್‌ನಿಂದ ಹಲ್ಲೆ ನಡೆಸಿ ಹಿಂಸೆ ನೀಡಿ ಬಳಿಕ ಆತನನ್ನು ಮುಡಿಗುಂಡದ ಮನೆ ಬಳಿ ಬಿಟ್ಟುಹೋಗಿದ್ರು. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುಬ್ರಹ್ಮಣ್ಯ ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯಲ್ಲಿ 3 ದಿನ ಚಿಕಿತ್ಸೆ ಪಡೆದಿದ್ದಾರೆ.

ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಈ ವೇಳೆ ಮೈಸೂರಿನ ವಿಜಯನಗರ ಪೊಲೀಸರ ಎದುರು ಮರಣಪೂರ್ವ ಹೇಳಿಕೆ ನೀಡಿದ್ದಾರೆ. ಬಳಿಕ ಚಿಕಿತ್ಸೆ ಫಲಿಸದೆ ಗಾಯಾಳು ಸುಬ್ರಹ್ಮಣ್ಯ ಮೃತಪಟ್ಟಿದ್ದಾರೆ. ಸದ್ಯ ಘಟನೆ ಸಂಬಂಧ ಮೃತ ಸುಬ್ರಹ್ಮಣ್ಯನ ಪತ್ನಿ ರಶ್ಮಿ, ರಶ್ಮಿ ಸಹೋದರ ರಾಕೇಶ್, ಮುಡಿಗುಂಡದ ಪ್ರದೀಪ್, ರಾಕೇಶ್ ಎಂಬ ನಾಲ್ವರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.

ಜಮೀನು, ಆಸ್ತಿ ಆಸೆಗಾಗಿ ನನ್ನನ್ನೂ ಕೊಲೆ ಮಾಡಲು ಯತ್ನಿಸಿದ್ರು: 6 ತಿಂಗಳ ಹಿಂದೆ ಮೃತ ಸುಬ್ರಹ್ಮಣ್ಯನ ತಂದೆ ನಾಗೇಂದ್ರ ಮೂರ್ತಿ ಅವರ ಮನೆಗೆ ಗೂಂಡಾಗಳ ಜೊತೆ ಹೋದ ರಶ್ಮಿ ನನ್ನ ಗಂಡ ನಿಮ್ಮ ಮನೆಯಲ್ಲಿ 40 ಲಕ್ಷ ಹಣ ಇಟ್ಟಿದ್ದಾನೆ ಅದನ್ನು ಕೊಡಿ ಎಂದು ಬೆದರಿಕೆ ಹಾಕಿ, ನನ್ನನ್ನು ಕಿಡ್ನಾಪ್ ಮಾಡಲು ಯತ್ನಿಸಿದ್ದಳು ಎಂದು ಸುಬ್ರಹ್ಮಣ್ಯನ ತಂದೆ ನಾಗೇಂದ್ರ ಮೂರ್ತಿ ಆರೋಪಿಸಿದ್ದಾರೆ.

ಅಲ್ಲದೆ ರಶ್ಮಿ ತನ್ನ ಗಂಡನ ಬಳಿ ದುಡ್ಡು ಪಡೆದು ದೇಶ ಸುತ್ತುತಿದ್ದಳು. ಹಾಗೂ ಅನೇಕ ರೌಡಿ, ಗೂಂಡಾಗಳು ಇವಳ ಜೊತೆ ಇದ್ದರು. ನನ್ನನ್ನ ಬೆದರಿಸಲು ಮೈಸೂರಿನಿಂದ 30 ಜನ ಗೂಂಡಾಗಳನ್ನು ಕರೆದುಕೊಂಡು ಬಂದಿದ್ದಳು ಎಂದು ತಿಳಿಸಿದ್ದಾರೆ.

Published On - 1:00 pm, Tue, 28 January 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ