AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ಉಗುರು ಕಿತ್ತು ಪತಿಯ ಕೊಲೆ ಮಾಡಿದ ಧರ್ಮಪತ್ನಿ, ಸೋದರನೂ ಭಾಗಿ!

ಚಾಮರಾಜನಗರ: ಹಣಕ್ಕಾಗಿ ಅಣ್ಣನ ಜೊತೆ ಸೇರಿ ಪತಿಯನ್ನೇ ಅಪಹರಿಸಿ ಪತ್ನಿ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಹಣಕಾಸಿನ ವಿಚಾರವಾಗಿ ಪತಿ ಮತ್ತು ಪತ್ನಿ ನಡುವೆ ವೈಷಮ್ಯವಿತ್ತು. ಹೀಗಾಗಿ ಸ್ವಂತ ಅಣ್ಣನೇ ತನ್ನ ತಂಗಿಯ ಗಂಡನನ್ನು ಸಾಯಿಸಲು ಸಾಥ್ ನೀಡಿದ್ದಾನೆ. ಅಣ್ಣನ ಜೊತೆ ಸೇರಿ ರಶ್ಮಿ 2ನೇ ಗಂಡ ಸುಬ್ರಹ್ಮಣ್ಯನನ್ನು ಅಪಹರಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾಳೆ. 5 ದಿನಗಳ ಕಾಲ ಗೃಹಬಂಧನದಲ್ಲಿಟ್ಟು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸುಬ್ರಹ್ಮಣ್ಯ ಉಗುರು ಕಿತ್ತು ರಾಡ್‌ನಿಂದ […]

ಆಸ್ತಿಗಾಗಿ ಉಗುರು ಕಿತ್ತು ಪತಿಯ ಕೊಲೆ ಮಾಡಿದ ಧರ್ಮಪತ್ನಿ, ಸೋದರನೂ ಭಾಗಿ!
ಸಾಧು ಶ್ರೀನಾಥ್​
|

Updated on:Jan 29, 2020 | 12:23 PM

Share

ಚಾಮರಾಜನಗರ: ಹಣಕ್ಕಾಗಿ ಅಣ್ಣನ ಜೊತೆ ಸೇರಿ ಪತಿಯನ್ನೇ ಅಪಹರಿಸಿ ಪತ್ನಿ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಹಣಕಾಸಿನ ವಿಚಾರವಾಗಿ ಪತಿ ಮತ್ತು ಪತ್ನಿ ನಡುವೆ ವೈಷಮ್ಯವಿತ್ತು. ಹೀಗಾಗಿ ಸ್ವಂತ ಅಣ್ಣನೇ ತನ್ನ ತಂಗಿಯ ಗಂಡನನ್ನು ಸಾಯಿಸಲು ಸಾಥ್ ನೀಡಿದ್ದಾನೆ. ಅಣ್ಣನ ಜೊತೆ ಸೇರಿ ರಶ್ಮಿ 2ನೇ ಗಂಡ ಸುಬ್ರಹ್ಮಣ್ಯನನ್ನು ಅಪಹರಿಸಿ ಹಣಕ್ಕಾಗಿ ಕಿರುಕುಳ ನೀಡಿದ್ದಾಳೆ.

5 ದಿನಗಳ ಕಾಲ ಗೃಹಬಂಧನದಲ್ಲಿಟ್ಟು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸುಬ್ರಹ್ಮಣ್ಯ ಉಗುರು ಕಿತ್ತು ರಾಡ್‌ನಿಂದ ಹಲ್ಲೆ ನಡೆಸಿ ಹಿಂಸೆ ನೀಡಿ ಬಳಿಕ ಆತನನ್ನು ಮುಡಿಗುಂಡದ ಮನೆ ಬಳಿ ಬಿಟ್ಟುಹೋಗಿದ್ರು. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುಬ್ರಹ್ಮಣ್ಯ ಕೊಳ್ಳೇಗಾಲದ ಖಾಸಗಿ ಆಸ್ಪತ್ರೆಯಲ್ಲಿ 3 ದಿನ ಚಿಕಿತ್ಸೆ ಪಡೆದಿದ್ದಾರೆ.

ಬಳಿಕ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಈ ವೇಳೆ ಮೈಸೂರಿನ ವಿಜಯನಗರ ಪೊಲೀಸರ ಎದುರು ಮರಣಪೂರ್ವ ಹೇಳಿಕೆ ನೀಡಿದ್ದಾರೆ. ಬಳಿಕ ಚಿಕಿತ್ಸೆ ಫಲಿಸದೆ ಗಾಯಾಳು ಸುಬ್ರಹ್ಮಣ್ಯ ಮೃತಪಟ್ಟಿದ್ದಾರೆ. ಸದ್ಯ ಘಟನೆ ಸಂಬಂಧ ಮೃತ ಸುಬ್ರಹ್ಮಣ್ಯನ ಪತ್ನಿ ರಶ್ಮಿ, ರಶ್ಮಿ ಸಹೋದರ ರಾಕೇಶ್, ಮುಡಿಗುಂಡದ ಪ್ರದೀಪ್, ರಾಕೇಶ್ ಎಂಬ ನಾಲ್ವರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.

ಜಮೀನು, ಆಸ್ತಿ ಆಸೆಗಾಗಿ ನನ್ನನ್ನೂ ಕೊಲೆ ಮಾಡಲು ಯತ್ನಿಸಿದ್ರು: 6 ತಿಂಗಳ ಹಿಂದೆ ಮೃತ ಸುಬ್ರಹ್ಮಣ್ಯನ ತಂದೆ ನಾಗೇಂದ್ರ ಮೂರ್ತಿ ಅವರ ಮನೆಗೆ ಗೂಂಡಾಗಳ ಜೊತೆ ಹೋದ ರಶ್ಮಿ ನನ್ನ ಗಂಡ ನಿಮ್ಮ ಮನೆಯಲ್ಲಿ 40 ಲಕ್ಷ ಹಣ ಇಟ್ಟಿದ್ದಾನೆ ಅದನ್ನು ಕೊಡಿ ಎಂದು ಬೆದರಿಕೆ ಹಾಕಿ, ನನ್ನನ್ನು ಕಿಡ್ನಾಪ್ ಮಾಡಲು ಯತ್ನಿಸಿದ್ದಳು ಎಂದು ಸುಬ್ರಹ್ಮಣ್ಯನ ತಂದೆ ನಾಗೇಂದ್ರ ಮೂರ್ತಿ ಆರೋಪಿಸಿದ್ದಾರೆ.

ಅಲ್ಲದೆ ರಶ್ಮಿ ತನ್ನ ಗಂಡನ ಬಳಿ ದುಡ್ಡು ಪಡೆದು ದೇಶ ಸುತ್ತುತಿದ್ದಳು. ಹಾಗೂ ಅನೇಕ ರೌಡಿ, ಗೂಂಡಾಗಳು ಇವಳ ಜೊತೆ ಇದ್ದರು. ನನ್ನನ್ನ ಬೆದರಿಸಲು ಮೈಸೂರಿನಿಂದ 30 ಜನ ಗೂಂಡಾಗಳನ್ನು ಕರೆದುಕೊಂಡು ಬಂದಿದ್ದಳು ಎಂದು ತಿಳಿಸಿದ್ದಾರೆ.

Published On - 1:00 pm, Tue, 28 January 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ