AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಚಾಮರಾಜನಗರ ಜನತೆಗೆ ಎದುರಾಗಲಿದೆ KSRTC ಬಸ್ ಸಮಸ್ಯೆ, ಕಾರಣವೇನು?

ಬುಧವಾರ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ಘಟಕ ಒಂದರಿಂದಲೇ ನೂರಾರು ಕೆಎಸ್​ಆರ್​ಟಿಸಿ ಬಸ್​ಗಳನ್ನು ಬುಕ್​ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಹಾಗಿದ್ದರೇ ಯಾವ ಯಾವ ಡಿಪೋ ಬಸ್​ಗಳನ್ನು ಬುಕ್​ ಮಾಡಲಾಗಿದೆ. ಇಲ್ಲಿದೆ ಓದಿ

ಪ್ರಯಾಣಿಕರ ಗಮನಕ್ಕೆ: ಚಾಮರಾಜನಗರ ಜನತೆಗೆ ಎದುರಾಗಲಿದೆ KSRTC ಬಸ್ ಸಮಸ್ಯೆ, ಕಾರಣವೇನು?
ಚಾಮರಾಜನಗರ ಕೆಸ್​ಆರ್​ಟಿಸಿ ಬಸ್​ ನಿಲ್ದಾಣ
ಸೂರಜ್​, ಮಹಾವೀರ್​ ಉತ್ತುರೆ
| Edited By: ವಿವೇಕ ಬಿರಾದಾರ|

Updated on: Aug 29, 2023 | 3:17 PM

Share

ಚಾಮರಾಜನಗರ: ಪ್ರಯಾಣಿಕರು ನಾಳೆ (ಆ.30) ರಂದು ಜಿಲ್ಲೆಯಿಂದ ದೂರದ ಊರಿಗೆ ಪ್ರಯಾಣ ಬೆಳಸುವ ಪ್ಲಾನ್ ಮಾಡುವ ಮುನ್ನ ಒಂದು ಬಾರಿ ಬಸ್​ಗಳ ಸೌಲಭ್ಯದ ಬಗ್ಗೆ ತಿಳಿದುಕೊಳ್ಳುವುದು ಉತ್ತಮ. ಏಕೆಂದರೆ ನಾಳೆಯ ನಿಮ್ಮ ಪ್ರಯಾಣಕ್ಕೆ ಕೆ.ಎಸ್.ಆರ್.ಟಿ.ಸಿ (KSRTC) ಬಸ್​​ಗಳ ಕೊರತೆ ಎದುರಾಗುವ ಸಾಧ್ಯತೆ ಇದೆ. ಹಾಗೇ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು (Students) ಕೂಡ ಬಸ್ ಕೊರತೆಯಿಂದ ಪರದಾಡುವಂತಾಗಬಹದು. ಹೌದು ಬುಧವಾರ ಮೈಸೂರಿನಲ್ಲಿ (Mysore) ಗೃಹಲಕ್ಷ್ಮಿ (Gruha Lakshmi) ಯೋಜನೆಗೆ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ಘಟಕ ಒಂದರಿಂದಲೇ ಬರೋಬ್ಬರಿ 310 ಬಸ್​ಗಳನ್ನು ಬುಕ್​ ಮಾಡಲಾಗಿದೆ. ಈ 310 ಬಸ್​ಗಳಲ್ಲಿ ಯೋಜನೆಯ ಅರ್ಹ ಪಲಾನುಭವಿ ಮಹಿಳೆಯರನ್ನು ಮೈಸೂರಿಗೆ ಕರೆದೊಯ್ಯಲು 260 ಬಸ್​​ಗಳನ್ನು ಬುಕ್​​​​ ಮಾಡಲಾಗಿದೆ.

ಇನ್ನುಳಿದ 50 ಬಸ್​​ಗಳಲ್ಲಿ ಕೆಎಸ್​ಆರ್​​ಪಿ ತುಕುಡಿ, ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲಾಗುತ್ತದೆ. ಕೆಎಸ್​ಆರ್​​​ಟಿಸಿಯ ಚಾಮರಾಜನಗರ ಜಿಲ್ಲಾ ಘಟಕದಲ್ಲಿ ಕೇವಲ 507 ಬಸ್​ಗಳಿದ್ದು, ಈ ಪೈಕಿ 310 ಕೆಎಸ್​ಆರ್​ಟಿಸಿ ಬಸ್​ಗಳು ಗೃಹಲಕ್ಷ್ಮೀ ಕಾರ್ಯಕ್ರಮಕ್ಕೆ ತೆರಳಲಿವೆ.

ಇದನ್ನೂ ಓದಿ: ಚಾಮರಾಜನಗರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಬಿದ್ದು ಮಹಿಳೆ ಸಾವು

ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೆಗಾಲ ಹಾಗೂ ನಂಜನಗೂಡು ಘಟಕದಿಂದ ಬಸ್​ಗಳು ತೆರಳಲಿದ್ದು, ಸಾರ್ವಜನಿಕರ ಸಂಚಾರಕ್ಕೆ ಕೇವಲ 190 ಬಸ್​ಗಳು ಮಾತ್ರ ಲಭ್ಯವಿರುತ್ತವೆ. ನಾಳೆ ಸಂಚಾರಕ್ಕೆ ಬಸ್ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾಮರಾಜನಗರ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣಗಳಲ್ಲಿ “ಬುಧವಾರ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ” ಮೈಕ್​ನಲ್ಲಿ ಸಾರಿಗೆ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಈ ಕುರಿತು ಕೆ.ಎಸ್.ಆರ್.ಟಿ.ಸಿ ಡಿಸಿ ಅಶೋಕ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ