Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಚಾಮರಾಜನಗರ ಜನತೆಗೆ ಎದುರಾಗಲಿದೆ KSRTC ಬಸ್ ಸಮಸ್ಯೆ, ಕಾರಣವೇನು?

ಬುಧವಾರ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ಘಟಕ ಒಂದರಿಂದಲೇ ನೂರಾರು ಕೆಎಸ್​ಆರ್​ಟಿಸಿ ಬಸ್​ಗಳನ್ನು ಬುಕ್​ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಹಾಗಿದ್ದರೇ ಯಾವ ಯಾವ ಡಿಪೋ ಬಸ್​ಗಳನ್ನು ಬುಕ್​ ಮಾಡಲಾಗಿದೆ. ಇಲ್ಲಿದೆ ಓದಿ

ಪ್ರಯಾಣಿಕರ ಗಮನಕ್ಕೆ: ಚಾಮರಾಜನಗರ ಜನತೆಗೆ ಎದುರಾಗಲಿದೆ KSRTC ಬಸ್ ಸಮಸ್ಯೆ, ಕಾರಣವೇನು?
ಚಾಮರಾಜನಗರ ಕೆಸ್​ಆರ್​ಟಿಸಿ ಬಸ್​ ನಿಲ್ದಾಣ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ವಿವೇಕ ಬಿರಾದಾರ

Updated on: Aug 29, 2023 | 3:17 PM

ಚಾಮರಾಜನಗರ: ಪ್ರಯಾಣಿಕರು ನಾಳೆ (ಆ.30) ರಂದು ಜಿಲ್ಲೆಯಿಂದ ದೂರದ ಊರಿಗೆ ಪ್ರಯಾಣ ಬೆಳಸುವ ಪ್ಲಾನ್ ಮಾಡುವ ಮುನ್ನ ಒಂದು ಬಾರಿ ಬಸ್​ಗಳ ಸೌಲಭ್ಯದ ಬಗ್ಗೆ ತಿಳಿದುಕೊಳ್ಳುವುದು ಉತ್ತಮ. ಏಕೆಂದರೆ ನಾಳೆಯ ನಿಮ್ಮ ಪ್ರಯಾಣಕ್ಕೆ ಕೆ.ಎಸ್.ಆರ್.ಟಿ.ಸಿ (KSRTC) ಬಸ್​​ಗಳ ಕೊರತೆ ಎದುರಾಗುವ ಸಾಧ್ಯತೆ ಇದೆ. ಹಾಗೇ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು (Students) ಕೂಡ ಬಸ್ ಕೊರತೆಯಿಂದ ಪರದಾಡುವಂತಾಗಬಹದು. ಹೌದು ಬುಧವಾರ ಮೈಸೂರಿನಲ್ಲಿ (Mysore) ಗೃಹಲಕ್ಷ್ಮಿ (Gruha Lakshmi) ಯೋಜನೆಗೆ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ಘಟಕ ಒಂದರಿಂದಲೇ ಬರೋಬ್ಬರಿ 310 ಬಸ್​ಗಳನ್ನು ಬುಕ್​ ಮಾಡಲಾಗಿದೆ. ಈ 310 ಬಸ್​ಗಳಲ್ಲಿ ಯೋಜನೆಯ ಅರ್ಹ ಪಲಾನುಭವಿ ಮಹಿಳೆಯರನ್ನು ಮೈಸೂರಿಗೆ ಕರೆದೊಯ್ಯಲು 260 ಬಸ್​​ಗಳನ್ನು ಬುಕ್​​​​ ಮಾಡಲಾಗಿದೆ.

ಇನ್ನುಳಿದ 50 ಬಸ್​​ಗಳಲ್ಲಿ ಕೆಎಸ್​ಆರ್​​ಪಿ ತುಕುಡಿ, ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲಾಗುತ್ತದೆ. ಕೆಎಸ್​ಆರ್​​​ಟಿಸಿಯ ಚಾಮರಾಜನಗರ ಜಿಲ್ಲಾ ಘಟಕದಲ್ಲಿ ಕೇವಲ 507 ಬಸ್​ಗಳಿದ್ದು, ಈ ಪೈಕಿ 310 ಕೆಎಸ್​ಆರ್​ಟಿಸಿ ಬಸ್​ಗಳು ಗೃಹಲಕ್ಷ್ಮೀ ಕಾರ್ಯಕ್ರಮಕ್ಕೆ ತೆರಳಲಿವೆ.

ಇದನ್ನೂ ಓದಿ: ಚಾಮರಾಜನಗರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಬಿದ್ದು ಮಹಿಳೆ ಸಾವು

ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೆಗಾಲ ಹಾಗೂ ನಂಜನಗೂಡು ಘಟಕದಿಂದ ಬಸ್​ಗಳು ತೆರಳಲಿದ್ದು, ಸಾರ್ವಜನಿಕರ ಸಂಚಾರಕ್ಕೆ ಕೇವಲ 190 ಬಸ್​ಗಳು ಮಾತ್ರ ಲಭ್ಯವಿರುತ್ತವೆ. ನಾಳೆ ಸಂಚಾರಕ್ಕೆ ಬಸ್ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾಮರಾಜನಗರ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣಗಳಲ್ಲಿ “ಬುಧವಾರ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ” ಮೈಕ್​ನಲ್ಲಿ ಸಾರಿಗೆ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಈ ಕುರಿತು ಕೆ.ಎಸ್.ಆರ್.ಟಿ.ಸಿ ಡಿಸಿ ಅಶೋಕ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ