AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಚಾಮರಾಜನಗರ ಜನತೆಗೆ ಎದುರಾಗಲಿದೆ KSRTC ಬಸ್ ಸಮಸ್ಯೆ, ಕಾರಣವೇನು?

ಬುಧವಾರ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ಘಟಕ ಒಂದರಿಂದಲೇ ನೂರಾರು ಕೆಎಸ್​ಆರ್​ಟಿಸಿ ಬಸ್​ಗಳನ್ನು ಬುಕ್​ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಹಾಗಿದ್ದರೇ ಯಾವ ಯಾವ ಡಿಪೋ ಬಸ್​ಗಳನ್ನು ಬುಕ್​ ಮಾಡಲಾಗಿದೆ. ಇಲ್ಲಿದೆ ಓದಿ

ಪ್ರಯಾಣಿಕರ ಗಮನಕ್ಕೆ: ಚಾಮರಾಜನಗರ ಜನತೆಗೆ ಎದುರಾಗಲಿದೆ KSRTC ಬಸ್ ಸಮಸ್ಯೆ, ಕಾರಣವೇನು?
ಚಾಮರಾಜನಗರ ಕೆಸ್​ಆರ್​ಟಿಸಿ ಬಸ್​ ನಿಲ್ದಾಣ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on: Aug 29, 2023 | 3:17 PM

Share

ಚಾಮರಾಜನಗರ: ಪ್ರಯಾಣಿಕರು ನಾಳೆ (ಆ.30) ರಂದು ಜಿಲ್ಲೆಯಿಂದ ದೂರದ ಊರಿಗೆ ಪ್ರಯಾಣ ಬೆಳಸುವ ಪ್ಲಾನ್ ಮಾಡುವ ಮುನ್ನ ಒಂದು ಬಾರಿ ಬಸ್​ಗಳ ಸೌಲಭ್ಯದ ಬಗ್ಗೆ ತಿಳಿದುಕೊಳ್ಳುವುದು ಉತ್ತಮ. ಏಕೆಂದರೆ ನಾಳೆಯ ನಿಮ್ಮ ಪ್ರಯಾಣಕ್ಕೆ ಕೆ.ಎಸ್.ಆರ್.ಟಿ.ಸಿ (KSRTC) ಬಸ್​​ಗಳ ಕೊರತೆ ಎದುರಾಗುವ ಸಾಧ್ಯತೆ ಇದೆ. ಹಾಗೇ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು (Students) ಕೂಡ ಬಸ್ ಕೊರತೆಯಿಂದ ಪರದಾಡುವಂತಾಗಬಹದು. ಹೌದು ಬುಧವಾರ ಮೈಸೂರಿನಲ್ಲಿ (Mysore) ಗೃಹಲಕ್ಷ್ಮಿ (Gruha Lakshmi) ಯೋಜನೆಗೆ ಚಾಲನೆ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾ ಘಟಕ ಒಂದರಿಂದಲೇ ಬರೋಬ್ಬರಿ 310 ಬಸ್​ಗಳನ್ನು ಬುಕ್​ ಮಾಡಲಾಗಿದೆ. ಈ 310 ಬಸ್​ಗಳಲ್ಲಿ ಯೋಜನೆಯ ಅರ್ಹ ಪಲಾನುಭವಿ ಮಹಿಳೆಯರನ್ನು ಮೈಸೂರಿಗೆ ಕರೆದೊಯ್ಯಲು 260 ಬಸ್​​ಗಳನ್ನು ಬುಕ್​​​​ ಮಾಡಲಾಗಿದೆ.

ಇನ್ನುಳಿದ 50 ಬಸ್​​ಗಳಲ್ಲಿ ಕೆಎಸ್​ಆರ್​​ಪಿ ತುಕುಡಿ, ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿಗಳನ್ನು ಕರೆದುಕೊಂಡು ಹೋಗಲಾಗುತ್ತದೆ. ಕೆಎಸ್​ಆರ್​​​ಟಿಸಿಯ ಚಾಮರಾಜನಗರ ಜಿಲ್ಲಾ ಘಟಕದಲ್ಲಿ ಕೇವಲ 507 ಬಸ್​ಗಳಿದ್ದು, ಈ ಪೈಕಿ 310 ಕೆಎಸ್​ಆರ್​ಟಿಸಿ ಬಸ್​ಗಳು ಗೃಹಲಕ್ಷ್ಮೀ ಕಾರ್ಯಕ್ರಮಕ್ಕೆ ತೆರಳಲಿವೆ.

ಇದನ್ನೂ ಓದಿ: ಚಾಮರಾಜನಗರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಬಿದ್ದು ಮಹಿಳೆ ಸಾವು

ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೆಗಾಲ ಹಾಗೂ ನಂಜನಗೂಡು ಘಟಕದಿಂದ ಬಸ್​ಗಳು ತೆರಳಲಿದ್ದು, ಸಾರ್ವಜನಿಕರ ಸಂಚಾರಕ್ಕೆ ಕೇವಲ 190 ಬಸ್​ಗಳು ಮಾತ್ರ ಲಭ್ಯವಿರುತ್ತವೆ. ನಾಳೆ ಸಂಚಾರಕ್ಕೆ ಬಸ್ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾಮರಾಜನಗರ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣಗಳಲ್ಲಿ “ಬುಧವಾರ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ” ಮೈಕ್​ನಲ್ಲಿ ಸಾರಿಗೆ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ಈ ಕುರಿತು ಕೆ.ಎಸ್.ಆರ್.ಟಿ.ಸಿ ಡಿಸಿ ಅಶೋಕ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​