ಇದೇ ಸರ್ಕಾರ ಭದ್ರವಿದ್ರೆ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ, BJP ಪರ ಮಹೇಶ್ ಬ್ಯಾಟಿಂಗ್

ಬೆಳಗಾವಿ: ರಾಜ್ಯದಲ್ಲಿ ಸದ್ಯ ಬಿಜೆಪಿ ಸರ್ಕಾರವಿದೆ. ಮುಂದೆಯೂ ಬಿಜೆಪಿ ಸರ್ಕಾರ ಸುಭದ್ರವಾಗಿರಲು ಬೇಕಾಗುವಷ್ಟು ಶಾಸಕರನ್ನ ರಾಜ್ಯದ ಜನ ಗೆಲ್ಲಿಸಿಕೊಡಬೇಕು ಎಂದು ಬಿಎಸ್​ಪಿಯಿಂದ ಉಚ್ಚಾಟಿತ ಶಾಸಕ ಎನ್. ಮಹೇಶ್ ಬಿಜೆಪಿ ಪರ ಬ್ಯಾಟಿಂಗ್ ನಡೆಸಿದ್ದಾರೆ. ಈಗ ಬಿಜೆಪಿ ಸರ್ಕಾರ ಇರೋದ್ರಿಂದ ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಬೇಕು. ನಾಳೆ ಸರ್ಕಾರ ಬಿದ್ದು ಹೋಗಿ ಚುನಾವಣೆಗೆ ಹೋದ್ರೆ ನಮ್ಮ ಪರಿಸ್ಥಿತಿ ಏನು? ನನ್ನಂತೆ 90 ಶಾಸಕರು ಮೊದಲ ಬಾರಿ ಗೆದ್ದಿದ್ದಾರೆ. ಈಗ ಯಾರಿಗೂ ಮಧ್ಯಂತರ ಚುನಾವಣೆ ಬೇಕಾಗಿಲ್ಲ. ಇನ್ನು ಮೂರೂವರೆ ವರ್ಷ ಸುಭದ್ರ […]

ಇದೇ ಸರ್ಕಾರ ಭದ್ರವಿದ್ರೆ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ, BJP ಪರ ಮಹೇಶ್ ಬ್ಯಾಟಿಂಗ್
ಸಾಧು ಶ್ರೀನಾಥ್​

Updated on: Dec 02, 2019 | 2:57 PM

ಬೆಳಗಾವಿ: ರಾಜ್ಯದಲ್ಲಿ ಸದ್ಯ ಬಿಜೆಪಿ ಸರ್ಕಾರವಿದೆ. ಮುಂದೆಯೂ ಬಿಜೆಪಿ ಸರ್ಕಾರ ಸುಭದ್ರವಾಗಿರಲು ಬೇಕಾಗುವಷ್ಟು ಶಾಸಕರನ್ನ ರಾಜ್ಯದ ಜನ ಗೆಲ್ಲಿಸಿಕೊಡಬೇಕು ಎಂದು ಬಿಎಸ್​ಪಿಯಿಂದ ಉಚ್ಚಾಟಿತ ಶಾಸಕ ಎನ್. ಮಹೇಶ್ ಬಿಜೆಪಿ ಪರ ಬ್ಯಾಟಿಂಗ್ ನಡೆಸಿದ್ದಾರೆ.

ಈಗ ಬಿಜೆಪಿ ಸರ್ಕಾರ ಇರೋದ್ರಿಂದ ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಬೇಕು. ನಾಳೆ ಸರ್ಕಾರ ಬಿದ್ದು ಹೋಗಿ ಚುನಾವಣೆಗೆ ಹೋದ್ರೆ ನಮ್ಮ ಪರಿಸ್ಥಿತಿ ಏನು? ನನ್ನಂತೆ 90 ಶಾಸಕರು ಮೊದಲ ಬಾರಿ ಗೆದ್ದಿದ್ದಾರೆ. ಈಗ ಯಾರಿಗೂ ಮಧ್ಯಂತರ ಚುನಾವಣೆ ಬೇಕಾಗಿಲ್ಲ. ಇನ್ನು ಮೂರೂವರೆ ವರ್ಷ ಸುಭದ್ರ ಸರ್ಕಾರ ಬೇಕೆಂಬುದು 90 ಶಾಸಕರ ನಿರೀಕ್ಷೆಯಾಗಿದೆ. ನಾನು 20 ವರ್ಷದ ಶ್ರಮದ ನಂತರ ಗೆದ್ದು ಬಂದಿದ್ದೇನೆ. ಮೂರೂವರೆ ವರ್ಷ ಇದೇ ಬಿಜೆಪಿ ಸರ್ಕಾರ ಇದ್ರೆ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಕೊಳ್ಳೇಗಾಲದಲ್ಲಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ.

Published On - 2:49 pm, Mon, 2 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us