ಅರಣ್ಯ ಗಡಿನಾಡು ಚಾಮರಾಜನಗರದಲ್ಲಿ ಮಹಿಳಾ ಅಧಿಕಾರಿವೃಂದದಿಂದ ವಿನೂತನವಾಗಿ ಅರಣ್ಯ ಹುತಾತ್ಮರ ದಿನಾಚರಣೆ

National Forest Martyrs Day: ನ್ಯಾಯಾಧೀಶೆ ಭಾರತಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಬಿ.ಆರ್.ಟಿ ದೀಪಾ ಕಾಂಟ್ರಾಕ್ಟರ್ ಭಾಗಿಯಾಗಿದ್ದು ವಿಶೇಷವಾಗಿತ್ತು. ಮಹಿಳಾ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಹುತಾತ್ಮರ ದಿನಾಚರಣೆ ಸಂದರ್ಭ ವಿಶೇಷ ಸಂದೇಶ ನೀಡಿದರು. ನ್ಯಾಯಾಧೀಶರು, ಜಿಲ್ಲಾಧಿಕಾರಿ, ಎಸ್.ಪಿ ಹಾಗೂ ಡಿಸಿಎಫ್ ಕೂಡ ಮಹಿಳೆಯರೆ ಎಂಬುದು ಗಮನಾರ್ಹ.

ಅರಣ್ಯ ಗಡಿನಾಡು ಚಾಮರಾಜನಗರದಲ್ಲಿ ಮಹಿಳಾ ಅಧಿಕಾರಿವೃಂದದಿಂದ ವಿನೂತನವಾಗಿ ಅರಣ್ಯ  ಹುತಾತ್ಮರ ದಿನಾಚರಣೆ
ಅರಣ್ಯ ಗಡಿನಾಡು ಚಾಮರಾಜನಗರದಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ
Edited By: ಸಾಧು ಶ್ರೀನಾಥ್​

Updated on: Sep 11, 2023 | 10:47 AM

ಚಾಮರಾಜನಗರ, ಸೆಪ್ಟೆಂಬರ್​ 11: ಅರಣ್ಯ ಗಡಿ ನಾಡು ಚಾಮರಾಜನಗರದಲ್ಲಿ ಇಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ (National Forest Martyrs Day) ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲೆಯ ಉನ್ನತ ಅಧಿಕಾರಿವೃಂದ ವಿನೂತನವಾಗಿ ಹುತಾತ್ಮರ ದಿನಾಚರಣೆ ಆಚರಿಸಿದರು. ಸೇವೆ ಸಲ್ಲಿಸುವ ವೇಳೆ ಮೃತಪಟ್ಟ ಅಧಿಕಾರಿಗಳ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಾರ್ಯಕ್ರಮದ ವೇದಿಕೆ ಮೇಲೆ ಮಹಿಳಾ ಅಧಿಕಾರಿಗಳು (Women Officers) ವಿಶೇಷವಾಗಿ ಭಾಗಿಯಾಗಿದ್ದರು. ಚಾಮರಾಜನಗರದ ಫಾರೆಸ್ಟ್ ನರ್ಸರಿ ಮೈದಾನದಲ್ಲಿ (Karnataka Forest Department) ಕಾರ್ಯಕ್ರಮ ನಡೆಯಿತು.

ನ್ಯಾಯಾಧೀಶೆ ಭಾರತಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಬಿ.ಆರ್.ಟಿ ದೀಪಾ ಕಾಂಟ್ರಾಕ್ಟರ್ ಭಾಗಿಯಾಗಿದ್ದು ವಿಶೇಷವಾಗಿತ್ತು. ಮಹಿಳಾ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಹುತಾತ್ಮರ ದಿನಾಚರಣೆ ಸಂದರ್ಭ ವಿಶೇಷ ಸಂದೇಶ ನೀಡಿದರು. ನ್ಯಾಯಾಧೀಶರು, ಜಿಲ್ಲಾಧಿಕಾರಿ, ಎಸ್.ಪಿ ಹಾಗೂ ಡಿಸಿಎಫ್ ಕೂಡ ಮಹಿಳೆಯರೆ ಎಂಬುದು ಗಮನಾರ್ಹ.

Also Read: ಮಂಗಳೂರಿನ ಮೋತಿ ಮಹಲ್ ಹೋಟೆಲ್​ ಸ್ವಿಮ್ಮಿಂಗ್ ಪೂಲ್​ನಲ್ಲಿ ಕೇರಳ ಬ್ಯಾಂಕ್‌ ಅಧಿಕಾರಿ ಮೃತದೇಹ ಪತ್ತೆ

ಚಾಮರಾಜನಗರ ಜಿಲ್ಲೆ ಮಹಿಳಾ ಸಾಕ್ಷರತೆಯಲ್ಲಿ ಹಿಂದುಳಿದಿದೆ ಎಂಬ ಮಾತಿದೆ. ನಾವು ಕೂಡ ಮಹಿಳೆಯರು, ನಾವು ಕಲಿತು ಉನ್ನತ ಸ್ಥಾನಕ್ಕೆ ಏರಿದ್ದೇವೆ. ಅದೇ ರೀತಿ ಹೆಣ್ಮಕ್ಕಳಿಗೂ ಸೂಕ್ತ ವಿದ್ಯಾಭ್ಯಾಸ ಸಿಗಬೇಕು ಅವರು ಕೂಡ ಎಲ್ಲರಂತೆ ಕಲಿಯಬೇಕು. ಮಹಿಳೆಯರು ಕೂಡ ಸಮಾನರು ಎಂಬ ಸಂದೇಶ ಸಾರಬೇಕು ಎಂದು ಕರೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us