AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮಲೆ ಮಹದೇಶ್ವರ ಬೆಟ್ಟ ಮದ್ಯ ಮುಕ್ತ: ಇದು ಸಿಎಂ ಸಿದ್ದರಾಮಯ್ಯ ಕೊಡುಗೆ

ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಈ ಕುರಿತು ಚಾಮರಾಜನಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ವಿಚಾರವನ್ನ ಪ್ರಸ್ತಾಪಿಸಿದ್ದರು. ಅಬಕಾರಿ ಇಲಾಖೆಯ ಸಿಬ್ಬಂದಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ರು. ಈಗ ಅಬಕಾರಿ ಇಲಾಖೆ ಸ್ಪೆಷಲ್ ಡ್ರೈವ್ ಅಭಿಯಾನದ ಮೂಲಕ ಮದ್ಯ ಮುಕ್ತ ಮಹದೇಶ್ವರ ಬೆಟ್ಟವನ್ನಾಗಿಸಲು ಮುಂದಾಗಿದ್ದಾರೆ.

ಇನ್ನು ಮಲೆ ಮಹದೇಶ್ವರ ಬೆಟ್ಟ ಮದ್ಯ ಮುಕ್ತ: ಇದು ಸಿಎಂ ಸಿದ್ದರಾಮಯ್ಯ ಕೊಡುಗೆ
ಇನ್ನು ಮಲೆ ಮಹದೇಶ್ವರ ಬೆಟ್ಟ ಮದ್ಯ ಮುಕ್ತ: ಸಿಎಂ ಸಿದ್ದರಾಮಯ್ಯ ಆರ್ಡರ್​​​
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Feb 03, 2024 | 12:29 PM

Share

ತನ್ನ ಪವಾಡದಿಂದಲೇ ಹೆಸುರುವಾಸಿಯಾಗಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಈಗ ಮದ್ಯದ ಘಾಟು ಹೆಚ್ಚಾಗಿ ಸದ್ದು ಮಾಡ್ತಾ ಇದೆ. ಸ್ವತಃ ಸಿಎಂ ಸಿದ್ದರಾಮಯ್ಯ ಮಾದಪ್ಪನ ಸನ್ನಿಧಾನಕ್ಕೆ ಬಂದಾಗ ಈ ಕುರಿತು ಚರ್ಚೆ ನಡೆಸಿ ಅಬಕಾರಿ ಇಲಾಖೆಗೆ ಖಡಕ್ ವಾರ್ನಿಂಗ್ ನೀಡಿದ್ದರು. ಯಾವಾಗ ಸ್ವತಃ ಸಿಎಂ ಎಚ್ಚರಿಕೆ ನೀಡಿದ್ರೊ ಈಗ ಅಬಕಾರಿ ಇಲಾಖೆ ಫುಲ್ ಆಕ್ಟಿವ್ ಆಗಿದ್ದು ಮದ್ಯ ಮುಕ್ತ ಮಹದೇಶ್ವರ ಬೆಟ್ಟ ಮಾಡ್ಲಿಕ್ಕೆ ಮುಂದಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ.

ಮಲೆ ಮಹದೇಶ್ವರ ಬೆಟ್ಟ ಈ ಹೆಸ್ರು ಕೇಳಿದ್ರೆ ಸಾಕು.. ಶಿವನ ಭಕ್ತರು ಭಕ್ತಿ ಪರವಶವಾಗಿ ಬಿಡ್ತಾರೆ. ತನ್ನದೆ ಪವಾಡದಿಂದ ರಾಜ್ಯ ಹೊರ ರಾಜ್ಯದಿಂದ ಅಪಾರ ಭಕ್ತಗಣವನ್ನ ಹೊಂದಿರುವ ಈ ಪುಣ್ಯ ಕ್ಷೇತ್ರಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮಾದಪ್ಪನ ಕೃಪೆಗೆ ಪಾತ್ರರಾಗುತ್ತಾರೆ. ಇಂತಹ ಪವಿತ್ರ ಸ್ಥಳದಲ್ಲಿ ಈಗ ಮದ್ಯದ ಘಾಟು ಹೆಚ್ಚಾಗುತ್ತಿದೆ.

ಪ್ರವಾಸಿಗರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಮೂಲಕ ಸ್ಥಳೀಯವಾಗಿ ಕೆಲ ಅಂಗಡಿ ವ್ಯಾಪಾರಸ್ಥರು ಅಕ್ರಮವಾಗಿ ಹಣ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಈ ಕುರಿತು ಚಾಮರಾಜನಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ವಿಚಾರವನ್ನ ಪ್ರಸ್ತಾಪಿಸಿದ್ದರು. ಅಬಕಾರಿ ಇಲಾಖೆಯ ಸಿಬ್ಬಂದಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ರು. ಈಗ ಅಬಕಾರಿ ಇಲಾಖೆ ಸ್ಪೆಷಲ್ ಡ್ರೈವ್ ಅಭಿಯಾನದ ಮೂಲಕ ಮದ್ಯ ಮುಕ್ತ ಮಹದೇಶ್ವರ ಬೆಟ್ಟವನ್ನಾಗಿಸಲು ಮುಂದಾಗಿದ್ದಾರೆ.

Also Read: ಗ್ರಾಮಸ್ಥರೆಲ್ಲ ಸೇರಿ ದಲಿತ ಯುವಕನಿಗೆ ದೇವಸ್ಥಾನದಲ್ಲಿ ಜಾತ್ಯತೀತವಾಗಿ ಅದ್ದೂರಿ ಮದುವೆ ಮಾಡಿಸಿದರು! ಏನಿದರ ವಿಶೇಷ?

ಸಿಎಂ ಖಡಕ್ ವಾರ್ನಿಂಗ್ ಕೊಟ್ಟ ಬೆನ್ನಲ್ಲೇ ಈಗ ಎಚ್ಚೆತ್ತ ಅಬಕಾರಿ ಇಲಾಖೆ ವಿಶೇಷ ತಂಡವನ್ನ ಮಾಡಿಕೊಂಡು ಸ್ಪೆಷಲ್ ಡ್ರೈವ್ ಮಾಡ್ತಾಯಿದೆ. ಅಕ್ರಮವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಕೇಸ್ ಬುಕ್ ಮಾಡುವ ಮೂಲಕ ಬಿಸಿ ಮುಟ್ಟಿಸಿದೆ. ಜೊತೆಗೆ ಮದ್ಯ ಮಾರಾಟಗಾರರ ಸಂಘದವರ ಜತೆ ಸಭೆ ನಡೆಸಿ ಯಾವುದೇ ಕಾರಣಕ್ಕೂ ಮಲೆ ಮಹದೇಶ್ವರ ಬೆಟ್ಟದ ಅಂಗಡಿ ಮಾಲೀಕರಿಗೆ ಲಿಕ್ಕರ್ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯ ಸರಬರಾಜು ಆಗದಂತೆ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ ಮದ್ಯ ಮುಕ್ತ ಮಹದೇಶ್ವರ ಬೆಟ್ಟವನ್ನಾಗಿ ಮಾರ್ಪಡಿಸಲು ಅಬಕಾರಿ ಇಲಾಖೆ ಮುಂದಾಗಿದ್ದು ಅಬಕಾರಿ ಇಲಾಖೆಯ ಈ ಕಾರ್ಯ ವೈಖರಿ ಎಷ್ಟರ ಮಟ್ಟಿಗೆ ಮುಂಬರುವ ದಿನಗಳಲ್ಲಿ ಪ್ರಭಾವ ಬೀರುವುದೋ ಕಾದು ನೋಡ್ಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ