AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಮಲೆ ಮಹದೇಶ್ವರ ಬೆಟ್ಟ ಮದ್ಯ ಮುಕ್ತ: ಇದು ಸಿಎಂ ಸಿದ್ದರಾಮಯ್ಯ ಕೊಡುಗೆ

ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಈ ಕುರಿತು ಚಾಮರಾಜನಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ವಿಚಾರವನ್ನ ಪ್ರಸ್ತಾಪಿಸಿದ್ದರು. ಅಬಕಾರಿ ಇಲಾಖೆಯ ಸಿಬ್ಬಂದಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ರು. ಈಗ ಅಬಕಾರಿ ಇಲಾಖೆ ಸ್ಪೆಷಲ್ ಡ್ರೈವ್ ಅಭಿಯಾನದ ಮೂಲಕ ಮದ್ಯ ಮುಕ್ತ ಮಹದೇಶ್ವರ ಬೆಟ್ಟವನ್ನಾಗಿಸಲು ಮುಂದಾಗಿದ್ದಾರೆ.

ಇನ್ನು ಮಲೆ ಮಹದೇಶ್ವರ ಬೆಟ್ಟ ಮದ್ಯ ಮುಕ್ತ: ಇದು ಸಿಎಂ ಸಿದ್ದರಾಮಯ್ಯ ಕೊಡುಗೆ
ಇನ್ನು ಮಲೆ ಮಹದೇಶ್ವರ ಬೆಟ್ಟ ಮದ್ಯ ಮುಕ್ತ: ಸಿಎಂ ಸಿದ್ದರಾಮಯ್ಯ ಆರ್ಡರ್​​​
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Feb 03, 2024 | 12:29 PM

Share

ತನ್ನ ಪವಾಡದಿಂದಲೇ ಹೆಸುರುವಾಸಿಯಾಗಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಈಗ ಮದ್ಯದ ಘಾಟು ಹೆಚ್ಚಾಗಿ ಸದ್ದು ಮಾಡ್ತಾ ಇದೆ. ಸ್ವತಃ ಸಿಎಂ ಸಿದ್ದರಾಮಯ್ಯ ಮಾದಪ್ಪನ ಸನ್ನಿಧಾನಕ್ಕೆ ಬಂದಾಗ ಈ ಕುರಿತು ಚರ್ಚೆ ನಡೆಸಿ ಅಬಕಾರಿ ಇಲಾಖೆಗೆ ಖಡಕ್ ವಾರ್ನಿಂಗ್ ನೀಡಿದ್ದರು. ಯಾವಾಗ ಸ್ವತಃ ಸಿಎಂ ಎಚ್ಚರಿಕೆ ನೀಡಿದ್ರೊ ಈಗ ಅಬಕಾರಿ ಇಲಾಖೆ ಫುಲ್ ಆಕ್ಟಿವ್ ಆಗಿದ್ದು ಮದ್ಯ ಮುಕ್ತ ಮಹದೇಶ್ವರ ಬೆಟ್ಟ ಮಾಡ್ಲಿಕ್ಕೆ ಮುಂದಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ.

ಮಲೆ ಮಹದೇಶ್ವರ ಬೆಟ್ಟ ಈ ಹೆಸ್ರು ಕೇಳಿದ್ರೆ ಸಾಕು.. ಶಿವನ ಭಕ್ತರು ಭಕ್ತಿ ಪರವಶವಾಗಿ ಬಿಡ್ತಾರೆ. ತನ್ನದೆ ಪವಾಡದಿಂದ ರಾಜ್ಯ ಹೊರ ರಾಜ್ಯದಿಂದ ಅಪಾರ ಭಕ್ತಗಣವನ್ನ ಹೊಂದಿರುವ ಈ ಪುಣ್ಯ ಕ್ಷೇತ್ರಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮಾದಪ್ಪನ ಕೃಪೆಗೆ ಪಾತ್ರರಾಗುತ್ತಾರೆ. ಇಂತಹ ಪವಿತ್ರ ಸ್ಥಳದಲ್ಲಿ ಈಗ ಮದ್ಯದ ಘಾಟು ಹೆಚ್ಚಾಗುತ್ತಿದೆ.

ಪ್ರವಾಸಿಗರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಮೂಲಕ ಸ್ಥಳೀಯವಾಗಿ ಕೆಲ ಅಂಗಡಿ ವ್ಯಾಪಾರಸ್ಥರು ಅಕ್ರಮವಾಗಿ ಹಣ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಈ ಕುರಿತು ಚಾಮರಾಜನಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ವಿಚಾರವನ್ನ ಪ್ರಸ್ತಾಪಿಸಿದ್ದರು. ಅಬಕಾರಿ ಇಲಾಖೆಯ ಸಿಬ್ಬಂದಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ರು. ಈಗ ಅಬಕಾರಿ ಇಲಾಖೆ ಸ್ಪೆಷಲ್ ಡ್ರೈವ್ ಅಭಿಯಾನದ ಮೂಲಕ ಮದ್ಯ ಮುಕ್ತ ಮಹದೇಶ್ವರ ಬೆಟ್ಟವನ್ನಾಗಿಸಲು ಮುಂದಾಗಿದ್ದಾರೆ.

Also Read: ಗ್ರಾಮಸ್ಥರೆಲ್ಲ ಸೇರಿ ದಲಿತ ಯುವಕನಿಗೆ ದೇವಸ್ಥಾನದಲ್ಲಿ ಜಾತ್ಯತೀತವಾಗಿ ಅದ್ದೂರಿ ಮದುವೆ ಮಾಡಿಸಿದರು! ಏನಿದರ ವಿಶೇಷ?

ಸಿಎಂ ಖಡಕ್ ವಾರ್ನಿಂಗ್ ಕೊಟ್ಟ ಬೆನ್ನಲ್ಲೇ ಈಗ ಎಚ್ಚೆತ್ತ ಅಬಕಾರಿ ಇಲಾಖೆ ವಿಶೇಷ ತಂಡವನ್ನ ಮಾಡಿಕೊಂಡು ಸ್ಪೆಷಲ್ ಡ್ರೈವ್ ಮಾಡ್ತಾಯಿದೆ. ಅಕ್ರಮವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಕೇಸ್ ಬುಕ್ ಮಾಡುವ ಮೂಲಕ ಬಿಸಿ ಮುಟ್ಟಿಸಿದೆ. ಜೊತೆಗೆ ಮದ್ಯ ಮಾರಾಟಗಾರರ ಸಂಘದವರ ಜತೆ ಸಭೆ ನಡೆಸಿ ಯಾವುದೇ ಕಾರಣಕ್ಕೂ ಮಲೆ ಮಹದೇಶ್ವರ ಬೆಟ್ಟದ ಅಂಗಡಿ ಮಾಲೀಕರಿಗೆ ಲಿಕ್ಕರ್ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಇದರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮದ್ಯ ಸರಬರಾಜು ಆಗದಂತೆ ಎಚ್ಚರಿಕೆ ನೀಡಿದ್ದಾರೆ.

ಒಟ್ಟಾರೆ ಮದ್ಯ ಮುಕ್ತ ಮಹದೇಶ್ವರ ಬೆಟ್ಟವನ್ನಾಗಿ ಮಾರ್ಪಡಿಸಲು ಅಬಕಾರಿ ಇಲಾಖೆ ಮುಂದಾಗಿದ್ದು ಅಬಕಾರಿ ಇಲಾಖೆಯ ಈ ಕಾರ್ಯ ವೈಖರಿ ಎಷ್ಟರ ಮಟ್ಟಿಗೆ ಮುಂಬರುವ ದಿನಗಳಲ್ಲಿ ಪ್ರಭಾವ ಬೀರುವುದೋ ಕಾದು ನೋಡ್ಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ