AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ; ಇಂದು ಸಫಾರಿ ನಿರ್ಬಂಧ

ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಸೇವೆ ಹಾಗೂ ಸಾಧನೆ ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆ ಇಂದು ಸಫಾರಿ ಬಂದ್ ಮಾಡಲಾಗುತ್ತದೆ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್‌ಕುಮಾರ್ ಮಾಹಿತಿ ನೀಡಿದ್ದಾರೆ.

ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ; ಇಂದು ಸಫಾರಿ ನಿರ್ಬಂಧ
ಬಂಡೀಪುರ ಸಫಾರಿ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಆಯೇಷಾ ಬಾನು

Updated on: Sep 20, 2023 | 6:57 AM

ಚಾಮರಾಜನಗರ, ಸೆ.20: ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ ಹಿನ್ನೆಲೆ ಇಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ಸಫಾರಿ ನಿರ್ಬಂಧ ಹೇರಲಾಗಿದೆ(Bandipur Tiger Reserve And National Park). ಹುಲಿ ಸಂರಕ್ಷಿತ ಪ್ರದೇಶ ಹಾಗೂ ಸಫಾರಿ ಕೇಂದ್ರವಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೆ.20 ರಂದು ಅಂದರೆ ಬುಧವಾರದಂದು ಸಫಾರಿ(Safari) ಬಂದ್ ಮಾಡಲಾಗುತ್ತದೆ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್‌ಕುಮಾರ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಇಂದು ಬಂಡೀಪುರ ಸಫಾರಿಗೆ ಹೋಗಲು ಪ್ಲಾನ್ ಮಾಡಿಕೊಂಡಿದ್ದರೆ ಅದನ್ನು ಕ್ಯಾನ್ಸಲ್ ಮಾಡಿ ಮುಂದೂಡಿ. ಇಲ್ಲದಿದ್ದರೆ ಸಫಾರಿ ಮಾಡಲಾಗದೆ ವಾಪಾಸ್ ಬರಬೇಕಾಗುತ್ತೆ.

ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಸೇವೆ ಹಾಗೂ ಸಾಧನೆ ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆಯನ್ನು ಮಾಡಲಾಗುತ್ತಿದೆ. ಬೆಳಿಗ್ಗೆ 11:30ಕ್ಕೆ ಮೇಲುಕಾಮನಹಳ್ಳಿಯ ಸಫಾರಿ ಕೇಂದ್ರದಲ್ಲಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: ಬಂಡೀಪುರ ಅಭಯಾರಣ್ಯದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದ ಅತಿ ಉದ್ದನೆಯ ದಂತ ಹೊಂದಿರುವ ಗಜರಾಜ!

ಬಂಡೀಪುರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಕಾಯಂ ಅಧಿಕಾರಿ ಹಾಗೂ ಸಿಬ್ಬಂದಿ ಕುಟುಂಬ ಸದಸ್ಯರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದ್ದು, ವಿಶೇಷ ಸಾಧನೆ ಮಾಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಬಹುಮಾನ ವಿತರಣೆ ಮಾಡಲಾಗುತ್ತೆ. ಅವರನ್ನು ಸನ್ಮಾನಿಸಲಾಗುತ್ತದೆ. ಇನ್ನು ಸನ್ಮಾನ ಹಾಗೂ ಬಹುಮಾನ ವಿತರಣೆ ಜೊತೆಗೆ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಬುಧವಾರ ಸಫಾರಿ ರದ್ದುಗೊಳಿಸಲಾಗಿದೆ ಎಂದು ಬಂಡೀಪುರ ಹುಲಿಯೋಜನೆ ನಿರ್ದೇಶಕ ಪಿ.ರಮೇಶಕುಮಾರ್ ಮಾಹಿತಿ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ