AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ; ಇಂದು ಸಫಾರಿ ನಿರ್ಬಂಧ

ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಸೇವೆ ಹಾಗೂ ಸಾಧನೆ ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆ ಇಂದು ಸಫಾರಿ ಬಂದ್ ಮಾಡಲಾಗುತ್ತದೆ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್‌ಕುಮಾರ್ ಮಾಹಿತಿ ನೀಡಿದ್ದಾರೆ.

ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ; ಇಂದು ಸಫಾರಿ ನಿರ್ಬಂಧ
ಬಂಡೀಪುರ ಸಫಾರಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Sep 20, 2023 | 6:57 AM

Share

ಚಾಮರಾಜನಗರ, ಸೆ.20: ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ ಹಿನ್ನೆಲೆ ಇಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ಸಫಾರಿ ನಿರ್ಬಂಧ ಹೇರಲಾಗಿದೆ(Bandipur Tiger Reserve And National Park). ಹುಲಿ ಸಂರಕ್ಷಿತ ಪ್ರದೇಶ ಹಾಗೂ ಸಫಾರಿ ಕೇಂದ್ರವಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೆ.20 ರಂದು ಅಂದರೆ ಬುಧವಾರದಂದು ಸಫಾರಿ(Safari) ಬಂದ್ ಮಾಡಲಾಗುತ್ತದೆ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್‌ಕುಮಾರ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಇಂದು ಬಂಡೀಪುರ ಸಫಾರಿಗೆ ಹೋಗಲು ಪ್ಲಾನ್ ಮಾಡಿಕೊಂಡಿದ್ದರೆ ಅದನ್ನು ಕ್ಯಾನ್ಸಲ್ ಮಾಡಿ ಮುಂದೂಡಿ. ಇಲ್ಲದಿದ್ದರೆ ಸಫಾರಿ ಮಾಡಲಾಗದೆ ವಾಪಾಸ್ ಬರಬೇಕಾಗುತ್ತೆ.

ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಸೇವೆ ಹಾಗೂ ಸಾಧನೆ ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆಯನ್ನು ಮಾಡಲಾಗುತ್ತಿದೆ. ಬೆಳಿಗ್ಗೆ 11:30ಕ್ಕೆ ಮೇಲುಕಾಮನಹಳ್ಳಿಯ ಸಫಾರಿ ಕೇಂದ್ರದಲ್ಲಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: ಬಂಡೀಪುರ ಅಭಯಾರಣ್ಯದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದ ಅತಿ ಉದ್ದನೆಯ ದಂತ ಹೊಂದಿರುವ ಗಜರಾಜ!

ಬಂಡೀಪುರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಕಾಯಂ ಅಧಿಕಾರಿ ಹಾಗೂ ಸಿಬ್ಬಂದಿ ಕುಟುಂಬ ಸದಸ್ಯರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದ್ದು, ವಿಶೇಷ ಸಾಧನೆ ಮಾಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಬಹುಮಾನ ವಿತರಣೆ ಮಾಡಲಾಗುತ್ತೆ. ಅವರನ್ನು ಸನ್ಮಾನಿಸಲಾಗುತ್ತದೆ. ಇನ್ನು ಸನ್ಮಾನ ಹಾಗೂ ಬಹುಮಾನ ವಿತರಣೆ ಜೊತೆಗೆ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಬುಧವಾರ ಸಫಾರಿ ರದ್ದುಗೊಳಿಸಲಾಗಿದೆ ಎಂದು ಬಂಡೀಪುರ ಹುಲಿಯೋಜನೆ ನಿರ್ದೇಶಕ ಪಿ.ರಮೇಶಕುಮಾರ್ ಮಾಹಿತಿ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​