AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ; ಇಂದು ಸಫಾರಿ ನಿರ್ಬಂಧ

ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಸೇವೆ ಹಾಗೂ ಸಾಧನೆ ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆ ಇಂದು ಸಫಾರಿ ಬಂದ್ ಮಾಡಲಾಗುತ್ತದೆ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್‌ಕುಮಾರ್ ಮಾಹಿತಿ ನೀಡಿದ್ದಾರೆ.

ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ; ಇಂದು ಸಫಾರಿ ನಿರ್ಬಂಧ
ಬಂಡೀಪುರ ಸಫಾರಿ
ಸೂರಜ್ ಪ್ರಸಾದ್ ಎಸ್.ಎನ್
| Edited By: ಆಯೇಷಾ ಬಾನು|

Updated on: Sep 20, 2023 | 6:57 AM

Share

ಚಾಮರಾಜನಗರ, ಸೆ.20: ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ ಹಿನ್ನೆಲೆ ಇಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ಸಫಾರಿ ನಿರ್ಬಂಧ ಹೇರಲಾಗಿದೆ(Bandipur Tiger Reserve And National Park). ಹುಲಿ ಸಂರಕ್ಷಿತ ಪ್ರದೇಶ ಹಾಗೂ ಸಫಾರಿ ಕೇಂದ್ರವಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೆ.20 ರಂದು ಅಂದರೆ ಬುಧವಾರದಂದು ಸಫಾರಿ(Safari) ಬಂದ್ ಮಾಡಲಾಗುತ್ತದೆ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್‌ಕುಮಾರ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಇಂದು ಬಂಡೀಪುರ ಸಫಾರಿಗೆ ಹೋಗಲು ಪ್ಲಾನ್ ಮಾಡಿಕೊಂಡಿದ್ದರೆ ಅದನ್ನು ಕ್ಯಾನ್ಸಲ್ ಮಾಡಿ ಮುಂದೂಡಿ. ಇಲ್ಲದಿದ್ದರೆ ಸಫಾರಿ ಮಾಡಲಾಗದೆ ವಾಪಾಸ್ ಬರಬೇಕಾಗುತ್ತೆ.

ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಸೇವೆ ಹಾಗೂ ಸಾಧನೆ ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆಯನ್ನು ಮಾಡಲಾಗುತ್ತಿದೆ. ಬೆಳಿಗ್ಗೆ 11:30ಕ್ಕೆ ಮೇಲುಕಾಮನಹಳ್ಳಿಯ ಸಫಾರಿ ಕೇಂದ್ರದಲ್ಲಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: ಬಂಡೀಪುರ ಅಭಯಾರಣ್ಯದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದ ಅತಿ ಉದ್ದನೆಯ ದಂತ ಹೊಂದಿರುವ ಗಜರಾಜ!

ಬಂಡೀಪುರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಕಾಯಂ ಅಧಿಕಾರಿ ಹಾಗೂ ಸಿಬ್ಬಂದಿ ಕುಟುಂಬ ಸದಸ್ಯರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದ್ದು, ವಿಶೇಷ ಸಾಧನೆ ಮಾಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಬಹುಮಾನ ವಿತರಣೆ ಮಾಡಲಾಗುತ್ತೆ. ಅವರನ್ನು ಸನ್ಮಾನಿಸಲಾಗುತ್ತದೆ. ಇನ್ನು ಸನ್ಮಾನ ಹಾಗೂ ಬಹುಮಾನ ವಿತರಣೆ ಜೊತೆಗೆ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಬುಧವಾರ ಸಫಾರಿ ರದ್ದುಗೊಳಿಸಲಾಗಿದೆ ಎಂದು ಬಂಡೀಪುರ ಹುಲಿಯೋಜನೆ ನಿರ್ದೇಶಕ ಪಿ.ರಮೇಶಕುಮಾರ್ ಮಾಹಿತಿ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್