AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ; ಇಂದು ಸಫಾರಿ ನಿರ್ಬಂಧ

ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಸೇವೆ ಹಾಗೂ ಸಾಧನೆ ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆ ಇಂದು ಸಫಾರಿ ಬಂದ್ ಮಾಡಲಾಗುತ್ತದೆ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್‌ಕುಮಾರ್ ಮಾಹಿತಿ ನೀಡಿದ್ದಾರೆ.

ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ; ಇಂದು ಸಫಾರಿ ನಿರ್ಬಂಧ
ಬಂಡೀಪುರ ಸಫಾರಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Sep 20, 2023 | 6:57 AM

Share

ಚಾಮರಾಜನಗರ, ಸೆ.20: ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆ ಹಿನ್ನೆಲೆ ಇಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ಸಫಾರಿ ನಿರ್ಬಂಧ ಹೇರಲಾಗಿದೆ(Bandipur Tiger Reserve And National Park). ಹುಲಿ ಸಂರಕ್ಷಿತ ಪ್ರದೇಶ ಹಾಗೂ ಸಫಾರಿ ಕೇಂದ್ರವಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಸೆ.20 ರಂದು ಅಂದರೆ ಬುಧವಾರದಂದು ಸಫಾರಿ(Safari) ಬಂದ್ ಮಾಡಲಾಗುತ್ತದೆ ಎಂದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್‌ಕುಮಾರ್ ಮಾಹಿತಿ ನೀಡಿದ್ದಾರೆ. ಹೀಗಾಗಿ ಇಂದು ಬಂಡೀಪುರ ಸಫಾರಿಗೆ ಹೋಗಲು ಪ್ಲಾನ್ ಮಾಡಿಕೊಂಡಿದ್ದರೆ ಅದನ್ನು ಕ್ಯಾನ್ಸಲ್ ಮಾಡಿ ಮುಂದೂಡಿ. ಇಲ್ಲದಿದ್ದರೆ ಸಫಾರಿ ಮಾಡಲಾಗದೆ ವಾಪಾಸ್ ಬರಬೇಕಾಗುತ್ತೆ.

ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಸೇವೆ ಹಾಗೂ ಸಾಧನೆ ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆಯನ್ನು ಮಾಡಲಾಗುತ್ತಿದೆ. ಬೆಳಿಗ್ಗೆ 11:30ಕ್ಕೆ ಮೇಲುಕಾಮನಹಳ್ಳಿಯ ಸಫಾರಿ ಕೇಂದ್ರದಲ್ಲಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ.

ಇದನ್ನೂ ಓದಿ: ಬಂಡೀಪುರ ಅಭಯಾರಣ್ಯದಲ್ಲಿ ಪ್ರವಾಸಿಗರಿಗೆ ದರ್ಶನ ಭಾಗ್ಯ ನೀಡಿದ ಅತಿ ಉದ್ದನೆಯ ದಂತ ಹೊಂದಿರುವ ಗಜರಾಜ!

ಬಂಡೀಪುರ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಕಾಯಂ ಅಧಿಕಾರಿ ಹಾಗೂ ಸಿಬ್ಬಂದಿ ಕುಟುಂಬ ಸದಸ್ಯರೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಲಾಗಿದ್ದು, ವಿಶೇಷ ಸಾಧನೆ ಮಾಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗೆ ಬಹುಮಾನ ವಿತರಣೆ ಮಾಡಲಾಗುತ್ತೆ. ಅವರನ್ನು ಸನ್ಮಾನಿಸಲಾಗುತ್ತದೆ. ಇನ್ನು ಸನ್ಮಾನ ಹಾಗೂ ಬಹುಮಾನ ವಿತರಣೆ ಜೊತೆಗೆ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಬುಧವಾರ ಸಫಾರಿ ರದ್ದುಗೊಳಿಸಲಾಗಿದೆ ಎಂದು ಬಂಡೀಪುರ ಹುಲಿಯೋಜನೆ ನಿರ್ದೇಶಕ ಪಿ.ರಮೇಶಕುಮಾರ್ ಮಾಹಿತಿ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ