AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿ ಈ ಬಾರಿ ಅದ್ದೂರಿ ದಸರಾ ಮಹೋತ್ಸವ: ಏನೇನು ವಿಶೇಷತೆ? ಇಲ್ಲಿದೆ ಮಾಹಿತಿ

ಚಾಮರಾಜನಗರದಲ್ಲಿ ಕಳೆದ ವರ್ಷ ಬರಗಾಲ ಆವರಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ದಸರಾ ಮಹೋತ್ಸವವನ್ನು ಸರಳವಾಗಿ ಆಯೋಜಿಸಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಿಸಲು ಜಿಲ್ಲಾಡಳಿತ ಸಿದ್ದತೆ ಮಾಡಿಕೊಳ್ಳುತ್ತಿದೆ. ಹಾಗಿದ್ದರೆ ಈ ಬಾರಿ ಚಲುವ ಚಾಮರಾಜನಗರ ದಸರಾ ಮಹೋತ್ಸವ ಕಾರ್ಯಕ್ರಮ ಯಾವ ರೀತಿ ಇರುತ್ತೆ? ಏನೆಲ್ಲಾ ವಿಶೇಷತೆಗಳನ್ನು ಒಳಗೊಂಡಿರುತ್ತೆ? ಇಲ್ಲಿದೆ ಓದಿ.

ಚಾಮರಾಜನಗರದಲ್ಲಿ ಈ ಬಾರಿ ಅದ್ದೂರಿ ದಸರಾ ಮಹೋತ್ಸವ: ಏನೇನು ವಿಶೇಷತೆ? ಇಲ್ಲಿದೆ ಮಾಹಿತಿ
ಚಾಮರಾಜನಗರ ದಸರಾ ಸಭೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Sep 24, 2024 | 12:24 PM

Share

ಚಾಮರಾಜನಗರ, ಸೆಪ್ಟೆಂಬರ್​ 24: ನವರಾತ್ರಿ ವೈಭವಕ್ಕೆ ಕೇವಲ ಬೆರಳೆಣಿಕೆ ದಿನಗಳಷ್ಟೇ ಬಾಕಿಯಿದೆ. ಕಳೆದ ವರ್ಷ ಬರಗಾಲದ ನಿಮಿತ್ತ ಸಪ್ಪೆಯಾಗಿದ್ದ ನಾಡಹಬ್ಬ ದಸರಾ (Dasara) ಈ ಭಾರಿ ಅದ್ದೂರಿಯಾಗಿ ನಡೆಯಲಿದೆ. ಅಕ್ಟೋಬರ್​ 7, 8 ಮತ್ತು 9 ಮೂರು ದಿನಗಳ ಕಾಲ ಚಾಮರಾಜನಗರ ದಸರಾ ಮಹೋತ್ಸವ ನಡೆಯಲಿದೆ. ಜಾನಪದ ಕಲೆಗಳ ತವರೂರಾದ ಚಾಮರಾಜನಗರದಲ್ಲಿ (Chamarajanagar) ಈ ಬಾರಿ ಬರೋಬ್ಬರಿ ಎರಡು ಕೋಟಿ ವೆಚ್ಛದಲ್ಲಿ ದಸರಾ ಹಬ್ಭವನ್ನು ಆಚರಿಸಲು ಚಾಮರಾಜನಗರ ಜಿಲ್ಲಾಡಳಿತ ಮುಂದಾಗಿದೆ. ಈ ಬಾರಿ ಭುವನೇಶ್ವರಿ ವೃತ್ತದಿಂದ ರಾಮಸಮುದ್ರದವರೆಗೂ ಬರೋಬ್ಬರಿ 15 ಲಕ್ಷ ವೆಚ್ಚದಲ್ಲಿ ಕಲರ್ ಫುಲ್ ಲೈಟಿಂಗ್ ಮಾಡಲಾಗಿದೆ. ಈ ಬಾರಿ ಗಜಪಡೆಯನ್ನು ಕರೆತಂದು ಮೈಸೂರು ದಸರಾ ಜಂಬೂ ಸವಾರಿ ಮಾದರಿಯಲ್ಲೇ ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ಜಿಲ್ಲಾಡಳಿತ ತಯಾರಿ ನಡೆಸಿದೆ.

ಚಾಮರಾಜನಗರ ಜಾನಪದ ಕಲೆಗಳ ತವರೂರು. ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು 60 ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿಲಿವೆ. ಈ ಬಾರಿ ಯುವ ದಸರಾಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇನ್ನು 1980 ರಲ್ಲಿ ಕೊನೆಗೊಂಡ ಜನನ ಮಂಟಪದ ಚಾಮರಾಜೇಶ್ವರ ದರ್ಬಾರ್ ಕಾರ್ಯಕ್ರಮ ಈ ಬಾರಿ ಮತ್ತೆ ಚಾಮರಾಜೇಶ್ವರ ದರ್ಬಾರ್ಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಇದರ ಜೊತೆಗೆ ರೈತ ದಸರಾ, ಮಹಿಳಾ ದಸರಾ ಕಾರ್ಯಕ್ರಮಗಳು ಸಹ ಕಣ್ಮನ ಸೆಳೆಯಲಿದೆ.

ಇದನ್ನೂ ಓದಿ: ಮೈಸೂರು ದಸರಾ ಗೋಲ್ಡ್​ ಕಾರ್ಡ್ ವ್ಯವಸ್ಥೆ: ದರ ಎಷ್ಟು, ಖರೀದಿ ಹೇಗೆ? ಇದರ ಲಾಭವೇನು?

ಈ ಬಾರಿಯ ದಸರಾಕ್ಕೆ ವರನಟ ಡಾ.ರಾಜ್ ಕುಮಾರ್ ಅವರ ಪುತ್ರ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರನ್ನು ಕಾರ್ಯಕ್ರಮಕ್ಕೆ ಕರೆತರಲು ನಿರ್ಧರಿಸಲಾಗಿದೆ. ಶಿವರಾಜ್ ಕುಮಾರ್ ಅವರನ್ನು ಚಲುವ ಚಾಮರಾಜನಗರ ಬ್ರಾಂಡ್ ಅಂಬಾಸಿಡರ್ ಆಗಿ ಘೋಷಣೆ ಮಾಡುವ ಸಾದ್ಯತೆ ಕೂಡ ಇದೆ. ಒಟ್ಟಾರೆ ಈ ಬಾರಿ ಚಲುವ ಚಾಮರಾಜನಗರ ದಸರಾ ಮಹೋತ್ಸವ 2024 ಅದ್ದೂರಿಯಾಗಿ ಆಚರಿಸಲು ಮುಂದಾಗಿದ್ದು ಚಾಮರಾಜನಗರ ಜನತೆಯ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ