ಚಾಮರಾಜನಗರದಲ್ಲಿ ಈ ಬಾರಿ ಅದ್ದೂರಿ ದಸರಾ ಮಹೋತ್ಸವ: ಏನೇನು ವಿಶೇಷತೆ? ಇಲ್ಲಿದೆ ಮಾಹಿತಿ

ಚಾಮರಾಜನಗರದಲ್ಲಿ ಕಳೆದ ವರ್ಷ ಬರಗಾಲ ಆವರಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ದಸರಾ ಮಹೋತ್ಸವವನ್ನು ಸರಳವಾಗಿ ಆಯೋಜಿಸಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಿಸಲು ಜಿಲ್ಲಾಡಳಿತ ಸಿದ್ದತೆ ಮಾಡಿಕೊಳ್ಳುತ್ತಿದೆ. ಹಾಗಿದ್ದರೆ ಈ ಬಾರಿ ಚಲುವ ಚಾಮರಾಜನಗರ ದಸರಾ ಮಹೋತ್ಸವ ಕಾರ್ಯಕ್ರಮ ಯಾವ ರೀತಿ ಇರುತ್ತೆ? ಏನೆಲ್ಲಾ ವಿಶೇಷತೆಗಳನ್ನು ಒಳಗೊಂಡಿರುತ್ತೆ? ಇಲ್ಲಿದೆ ಓದಿ.

ಚಾಮರಾಜನಗರದಲ್ಲಿ ಈ ಬಾರಿ ಅದ್ದೂರಿ ದಸರಾ ಮಹೋತ್ಸವ: ಏನೇನು ವಿಶೇಷತೆ? ಇಲ್ಲಿದೆ ಮಾಹಿತಿ
ಚಾಮರಾಜನಗರ ದಸರಾ ಸಭೆ
Edited By: ವಿವೇಕ ಬಿರಾದಾರ

Updated on: Sep 24, 2024 | 12:24 PM

ಚಾಮರಾಜನಗರ, ಸೆಪ್ಟೆಂಬರ್​ 24: ನವರಾತ್ರಿ ವೈಭವಕ್ಕೆ ಕೇವಲ ಬೆರಳೆಣಿಕೆ ದಿನಗಳಷ್ಟೇ ಬಾಕಿಯಿದೆ. ಕಳೆದ ವರ್ಷ ಬರಗಾಲದ ನಿಮಿತ್ತ ಸಪ್ಪೆಯಾಗಿದ್ದ ನಾಡಹಬ್ಬ ದಸರಾ (Dasara) ಈ ಭಾರಿ ಅದ್ದೂರಿಯಾಗಿ ನಡೆಯಲಿದೆ. ಅಕ್ಟೋಬರ್​ 7, 8 ಮತ್ತು 9 ಮೂರು ದಿನಗಳ ಕಾಲ ಚಾಮರಾಜನಗರ ದಸರಾ ಮಹೋತ್ಸವ ನಡೆಯಲಿದೆ. ಜಾನಪದ ಕಲೆಗಳ ತವರೂರಾದ ಚಾಮರಾಜನಗರದಲ್ಲಿ (Chamarajanagar) ಈ ಬಾರಿ ಬರೋಬ್ಬರಿ ಎರಡು ಕೋಟಿ ವೆಚ್ಛದಲ್ಲಿ ದಸರಾ ಹಬ್ಭವನ್ನು ಆಚರಿಸಲು ಚಾಮರಾಜನಗರ ಜಿಲ್ಲಾಡಳಿತ ಮುಂದಾಗಿದೆ. ಈ ಬಾರಿ ಭುವನೇಶ್ವರಿ ವೃತ್ತದಿಂದ ರಾಮಸಮುದ್ರದವರೆಗೂ ಬರೋಬ್ಬರಿ 15 ಲಕ್ಷ ವೆಚ್ಚದಲ್ಲಿ ಕಲರ್ ಫುಲ್ ಲೈಟಿಂಗ್ ಮಾಡಲಾಗಿದೆ. ಈ ಬಾರಿ ಗಜಪಡೆಯನ್ನು ಕರೆತಂದು ಮೈಸೂರು ದಸರಾ ಜಂಬೂ ಸವಾರಿ ಮಾದರಿಯಲ್ಲೇ ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ಜಿಲ್ಲಾಡಳಿತ ತಯಾರಿ ನಡೆಸಿದೆ.

ಚಾಮರಾಜನಗರ ಜಾನಪದ ಕಲೆಗಳ ತವರೂರು. ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು 60 ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿಲಿವೆ. ಈ ಬಾರಿ ಯುವ ದಸರಾಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇನ್ನು 1980 ರಲ್ಲಿ ಕೊನೆಗೊಂಡ ಜನನ ಮಂಟಪದ ಚಾಮರಾಜೇಶ್ವರ ದರ್ಬಾರ್ ಕಾರ್ಯಕ್ರಮ ಈ ಬಾರಿ ಮತ್ತೆ ಚಾಮರಾಜೇಶ್ವರ ದರ್ಬಾರ್ಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಇದರ ಜೊತೆಗೆ ರೈತ ದಸರಾ, ಮಹಿಳಾ ದಸರಾ ಕಾರ್ಯಕ್ರಮಗಳು ಸಹ ಕಣ್ಮನ ಸೆಳೆಯಲಿದೆ.

ಇದನ್ನೂ ಓದಿ: ಮೈಸೂರು ದಸರಾ ಗೋಲ್ಡ್​ ಕಾರ್ಡ್ ವ್ಯವಸ್ಥೆ: ದರ ಎಷ್ಟು, ಖರೀದಿ ಹೇಗೆ? ಇದರ ಲಾಭವೇನು?

ಈ ಬಾರಿಯ ದಸರಾಕ್ಕೆ ವರನಟ ಡಾ.ರಾಜ್ ಕುಮಾರ್ ಅವರ ಪುತ್ರ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರನ್ನು ಕಾರ್ಯಕ್ರಮಕ್ಕೆ ಕರೆತರಲು ನಿರ್ಧರಿಸಲಾಗಿದೆ. ಶಿವರಾಜ್ ಕುಮಾರ್ ಅವರನ್ನು ಚಲುವ ಚಾಮರಾಜನಗರ ಬ್ರಾಂಡ್ ಅಂಬಾಸಿಡರ್ ಆಗಿ ಘೋಷಣೆ ಮಾಡುವ ಸಾದ್ಯತೆ ಕೂಡ ಇದೆ. ಒಟ್ಟಾರೆ ಈ ಬಾರಿ ಚಲುವ ಚಾಮರಾಜನಗರ ದಸರಾ ಮಹೋತ್ಸವ 2024 ಅದ್ದೂರಿಯಾಗಿ ಆಚರಿಸಲು ಮುಂದಾಗಿದ್ದು ಚಾಮರಾಜನಗರ ಜನತೆಯ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us