AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷ ಹಿಂದೆ ತಾನೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ 85 ವರ್ಷದ ವೃದ್ಧನ ಅಂತ್ಯಸಂಸ್ಕಾರ ನೆರವೇರಿತು!

ಮೃತ 85 ವರ್ಷದ ಪುಟ್ಟನಂಜಪ್ಪಗೆ ಮೂವರು ಮಕ್ಕಳಿದ್ದರು. ಮಕ್ಕಳಿಗೆ ತೊಂದರೆಯಾಗಬಾರದೆಂದು ತಮ್ಮ ಅಂತ್ಯಸಂಸ್ಕಾರ, ತಿಥಿ ಕಾರ್ಯಕ್ಕೆಂದು 1 ಲಕ್ಷ ರೂ ಹಣ ಮೀಸಲಿಟ್ಟಿದ್ದರು.

30 ವರ್ಷ ಹಿಂದೆ ತಾನೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ 85 ವರ್ಷದ ವೃದ್ಧನ ಅಂತ್ಯಸಂಸ್ಕಾರ ನೆರವೇರಿತು!
30 ವರ್ಷ ಹಿಂದೆ ತಾನೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ 85 ವರ್ಷದ ವೃದ್ಧನ ಅಂತ್ಯಸಂಸ್ಕಾರ ನೆರವೇರಿತು!
TV9 Web
| Edited By: |

Updated on:Jul 25, 2022 | 5:43 PM

Share

ಚಾಮರಾಜನಗರ: ಚಾಮರಾಜನಗರ (chamarajanagar) ತಾಲೂಕಿನ ನಂಜೇದೇವನಪುರದಲ್ಲಿ ತಾನೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ ವೃದ್ಧರೊಬ್ಬರ (old man) ಅಂತ್ಯಸಂಸ್ಕಾರ (last rites) ನೆರವೇರಿಸಲಾಯಿತು! ಇಂದು ನಿಧನರಾದ 85 ವರ್ಷದ ಪುಟ್ಟನಂಜಪ್ಪ ಅವರು 30 ವರ್ಷಗಳ ಹಿಂದೆಯೇ ತಮ್ಮ ಸಮಾಧಿ ನಿರ್ಮಿಸಿಕೊಂಡಿದ್ದರು. ಸಿಮೆಂಟ್‌ನಿಂದ ಸಮಾಧಿ ನಿರ್ಮಿಸಿ, ಮರಳು ತುಂಬಲಾಗಿತ್ತು. ಇಂದು ಮರಳು ತೆಗೆದು, ಸಮಾಧಿಯಲ್ಲಿ (grave) ಪುಟ್ಟನಂಜಪ್ಪ ಅಂತ್ಯಸಂಸ್ಕಾರ ಮಾಡಲಾಯಿತು.

ಮೃತ 85 ವರ್ಷದ ಪುಟ್ಟನಂಜಪ್ಪಗೆ ಮೂವರು ಮಕ್ಕಳಿದ್ದರು. ಮಕ್ಕಳಿಗೆ ತೊಂದರೆಯಾಗಬಾರದೆಂದು ತಮ್ಮ ಅಂತ್ಯಸಂಸ್ಕಾರ, ತಿಥಿ ಕಾರ್ಯಕ್ಕೆಂದು 1 ಲಕ್ಷ ರೂ ಹಣ ಮೀಸಲಿಟ್ಟಿದ್ದರು. ಅಂತ್ಯಸಂಸ್ಕಾರಕ್ಕೆ ಬೇಕಾದ ಪೂಜಾ ಸಾಮಗ್ರಿ ಸಹ ತೆಗೆದಿಟ್ಟಿದ್ದರು.

ಸಮಾಧಿಯಿರುವ ಜಾಗದ ಕಡೆ ಈ 30 ವರ್ಷಗಳಲ್ಲಿ ಓಡಾಡುವಾಗ…

ವ್ಯಕ್ತಿಯೊಬ್ಬರು 30 ವರ್ಷದ ಹಿಂದೆಯೇ ತಮ್ಮ ಸಮಾಧಿ ನಿರ್ಮಿಸಿಕೊಂಡಿದ್ದರು ಎಂಬುದು ನಿಜಕ್ಕೂ ಸೋಜಿಗದ ವಿಷಯ. ಕುತೂಹಲಕಾರಿ ಸಂಗತಿ. ಜೊತೆಗೆ ಆತಂಕಕಾರಿಯೂ ಹೌದು. 30 ವರ್ಷದ ಹಿಂದೆ ತಮ್ಮದೇ ಸಮಾಧಿ ಹೀಗಿರಲಿ ಎಂದು ನಿರ್ಮಿಸಿಕೊಂಡಾಗ ಅವರ ಮನಸ್ಥಿತಿ ಹೇಗಿತ್ತು. ಸಮಾಧಿ ನಿರ್ಮಾಣವಾದ ಮಾರನೆಯ ದಿನವೇ ಅವರು ಮೃತಪಟ್ಟಿದ್ದರೆ ಅದೊಂದು ರೀತಿ. ಆದರೆ 3 ದಶಕಗಳ ಸುದೀರ್ಘ ಕಾಲ ಅವರು ತಮ್ಮದೇ ಸಮಾಧಿಯನ್ನು ನೋಡಿ ನೋಡಿ ಹೇಗೆ ಜೀವನ ದೂಡುತ್ತಿದ್ದರು. ಅದಿನ್ನೆಂಥಹಾ ಅಭಾವ ವೈರಾಗ್ಯ ಅವರನ್ನ ಕಾಡಿರಬಹುದು. ಜೊತೆಗೆ ತಮ್ಮ ಸಮಾಧಿಯಿರುವ ಜಾಗದ ಕಡೆ ಈ 30 ವರ್ಷಗಳಲ್ಲಿ ಓಡಾಡುವಾಗ ಪುಟ್ಟನಂಜಪ್ಪ ಅವರಲ್ಲಿ ಅದಿನ್ನೆಂಥಾ ಭಾವ ಮೂಡಿರಬಹುದು… ಅಲ್ಲವಾ!?

Published On - 5:35 pm, Mon, 25 July 22

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!