AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

30 ವರ್ಷ ಹಿಂದೆ ತಾನೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ 85 ವರ್ಷದ ವೃದ್ಧನ ಅಂತ್ಯಸಂಸ್ಕಾರ ನೆರವೇರಿತು!

ಮೃತ 85 ವರ್ಷದ ಪುಟ್ಟನಂಜಪ್ಪಗೆ ಮೂವರು ಮಕ್ಕಳಿದ್ದರು. ಮಕ್ಕಳಿಗೆ ತೊಂದರೆಯಾಗಬಾರದೆಂದು ತಮ್ಮ ಅಂತ್ಯಸಂಸ್ಕಾರ, ತಿಥಿ ಕಾರ್ಯಕ್ಕೆಂದು 1 ಲಕ್ಷ ರೂ ಹಣ ಮೀಸಲಿಟ್ಟಿದ್ದರು.

30 ವರ್ಷ ಹಿಂದೆ ತಾನೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ 85 ವರ್ಷದ ವೃದ್ಧನ ಅಂತ್ಯಸಂಸ್ಕಾರ ನೆರವೇರಿತು!
30 ವರ್ಷ ಹಿಂದೆ ತಾನೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ 85 ವರ್ಷದ ವೃದ್ಧನ ಅಂತ್ಯಸಂಸ್ಕಾರ ನೆರವೇರಿತು!
TV9 Web
| Edited By: |

Updated on:Jul 25, 2022 | 5:43 PM

Share

ಚಾಮರಾಜನಗರ: ಚಾಮರಾಜನಗರ (chamarajanagar) ತಾಲೂಕಿನ ನಂಜೇದೇವನಪುರದಲ್ಲಿ ತಾನೇ ನಿರ್ಮಿಸಿಕೊಂಡಿದ್ದ ಸಮಾಧಿಯಲ್ಲಿ ವೃದ್ಧರೊಬ್ಬರ (old man) ಅಂತ್ಯಸಂಸ್ಕಾರ (last rites) ನೆರವೇರಿಸಲಾಯಿತು! ಇಂದು ನಿಧನರಾದ 85 ವರ್ಷದ ಪುಟ್ಟನಂಜಪ್ಪ ಅವರು 30 ವರ್ಷಗಳ ಹಿಂದೆಯೇ ತಮ್ಮ ಸಮಾಧಿ ನಿರ್ಮಿಸಿಕೊಂಡಿದ್ದರು. ಸಿಮೆಂಟ್‌ನಿಂದ ಸಮಾಧಿ ನಿರ್ಮಿಸಿ, ಮರಳು ತುಂಬಲಾಗಿತ್ತು. ಇಂದು ಮರಳು ತೆಗೆದು, ಸಮಾಧಿಯಲ್ಲಿ (grave) ಪುಟ್ಟನಂಜಪ್ಪ ಅಂತ್ಯಸಂಸ್ಕಾರ ಮಾಡಲಾಯಿತು.

ಮೃತ 85 ವರ್ಷದ ಪುಟ್ಟನಂಜಪ್ಪಗೆ ಮೂವರು ಮಕ್ಕಳಿದ್ದರು. ಮಕ್ಕಳಿಗೆ ತೊಂದರೆಯಾಗಬಾರದೆಂದು ತಮ್ಮ ಅಂತ್ಯಸಂಸ್ಕಾರ, ತಿಥಿ ಕಾರ್ಯಕ್ಕೆಂದು 1 ಲಕ್ಷ ರೂ ಹಣ ಮೀಸಲಿಟ್ಟಿದ್ದರು. ಅಂತ್ಯಸಂಸ್ಕಾರಕ್ಕೆ ಬೇಕಾದ ಪೂಜಾ ಸಾಮಗ್ರಿ ಸಹ ತೆಗೆದಿಟ್ಟಿದ್ದರು.

ಸಮಾಧಿಯಿರುವ ಜಾಗದ ಕಡೆ ಈ 30 ವರ್ಷಗಳಲ್ಲಿ ಓಡಾಡುವಾಗ…

ವ್ಯಕ್ತಿಯೊಬ್ಬರು 30 ವರ್ಷದ ಹಿಂದೆಯೇ ತಮ್ಮ ಸಮಾಧಿ ನಿರ್ಮಿಸಿಕೊಂಡಿದ್ದರು ಎಂಬುದು ನಿಜಕ್ಕೂ ಸೋಜಿಗದ ವಿಷಯ. ಕುತೂಹಲಕಾರಿ ಸಂಗತಿ. ಜೊತೆಗೆ ಆತಂಕಕಾರಿಯೂ ಹೌದು. 30 ವರ್ಷದ ಹಿಂದೆ ತಮ್ಮದೇ ಸಮಾಧಿ ಹೀಗಿರಲಿ ಎಂದು ನಿರ್ಮಿಸಿಕೊಂಡಾಗ ಅವರ ಮನಸ್ಥಿತಿ ಹೇಗಿತ್ತು. ಸಮಾಧಿ ನಿರ್ಮಾಣವಾದ ಮಾರನೆಯ ದಿನವೇ ಅವರು ಮೃತಪಟ್ಟಿದ್ದರೆ ಅದೊಂದು ರೀತಿ. ಆದರೆ 3 ದಶಕಗಳ ಸುದೀರ್ಘ ಕಾಲ ಅವರು ತಮ್ಮದೇ ಸಮಾಧಿಯನ್ನು ನೋಡಿ ನೋಡಿ ಹೇಗೆ ಜೀವನ ದೂಡುತ್ತಿದ್ದರು. ಅದಿನ್ನೆಂಥಹಾ ಅಭಾವ ವೈರಾಗ್ಯ ಅವರನ್ನ ಕಾಡಿರಬಹುದು. ಜೊತೆಗೆ ತಮ್ಮ ಸಮಾಧಿಯಿರುವ ಜಾಗದ ಕಡೆ ಈ 30 ವರ್ಷಗಳಲ್ಲಿ ಓಡಾಡುವಾಗ ಪುಟ್ಟನಂಜಪ್ಪ ಅವರಲ್ಲಿ ಅದಿನ್ನೆಂಥಾ ಭಾವ ಮೂಡಿರಬಹುದು… ಅಲ್ಲವಾ!?

Published On - 5:35 pm, Mon, 25 July 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ