AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆಮಹದೇಶ್ವರ ಬೆಟ್ಟದಲ್ಲಿ ಹಂದಿ ಕಾಟ: ತಮಿಳುನಾಡು ಮೂಲದ ಭಕ್ತನ ಮೇಲೆ ದಾಳಿ

Male Mahadeshwara Betta: ಆಹಾರಕ್ಕಾಗಿ ಮನುಷ್ಯರ ಮೇಲೆ ಹಂದಿಗಳು ದಾಳಿ ನಡೆಸಿದ್ದು ತಮಿಳುನಾಡು ಮೂಲದ ಭಕ್ತನಿಗೆ ಗಂಭೀರ ಗಾಯಗಳಾಗಿವೆ.

ಮಲೆಮಹದೇಶ್ವರ ಬೆಟ್ಟದಲ್ಲಿ ಹಂದಿ ಕಾಟ: ತಮಿಳುನಾಡು ಮೂಲದ ಭಕ್ತನ ಮೇಲೆ ದಾಳಿ
ಹಂದಿ
TV9 Web
| Updated By: ಆಯೇಷಾ ಬಾನು|

Updated on: Feb 06, 2023 | 2:37 PM

Share

ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಮಲೆಮಹದೇಶ್ವರ ಬೆಟ್ಟದಲ್ಲಿ ಹಂದಿ ಕಾಟ ಶುರುವಾಗಿದೆ. ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬರುವ ಭಕ್ತರು ರಾತ್ರಿ ವಿಶ್ರಾಂತಿಗಾಗಿ ಮಲಗಿದ್ದಾಗ ಹಂದಿ ದಾಳಿ ನಡೆಸಿದೆ. ಆಹಾರಕ್ಕಾಗಿ ಮನುಷ್ಯರ ಮೇಲೆ ಹಂದಿಗಳು ದಾಳಿ ನಡೆಸಿದ್ದು ತಮಿಳುನಾಡು ಮೂಲದ ಭಕ್ತನಿಗೆ ಗಂಭೀರ ಗಾಯಗಳಾಗಿವೆ. ಘಟನೆ ಸಂಬಂಧ ಭಕ್ತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಫೆಬ್ರವರಿ 18ರಂದು ಮಹಾ ಶಿವರಾತ್ರಿ ಹಬ್ಬ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆ ಮೂಲಕ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಹೀಗಿರುವಾಗ ಪಾದಯಾತ್ರೆ ಮೂಲಕ ಬರುವ ಭಕ್ತರು ಅಲ್ಲಲ್ಲಿ ವಿಶ್ರಾಂತಿ ಪಡೆಯುವುದು ಸಾಮಾನ್ಯ. ಅದರಂತೆ ತಮಿಳುನಾಡು ಮೂಲಕ ಕೆಲ ಭಕ್ತರು ವಿಶ್ರಾಂತಿಗಾಗಿ ರಾತ್ರಿ ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದಲ್ಲಿ ಮಲಗಿದ್ದು ಅವರ ಮೇಲೆ ಹಂದಿಗಳು ದಾಳಿ ನಡೆಸಿವೆ. ಪಾದಯಾತ್ರೆ ಮೂಲಕ ಬರುವವರಿಗೆ ದಾರಿ ಮಧ್ಯೆ ಛತ್ರ ಮತ್ತಿತರ ವ್ಯವಸ್ಥೆಗಳು ಇಲ್ಲದಿರುವುದು ಕೂಡ ಘಟನೆಗೆ ಕಾರಣವಾಗಿದೆ ಎಂದು ಕೆಲ ಭಕ್ತರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಮೃತಪಟ್ಟನೆಂದು ದೇಹವನ್ನು ಸಮಾಧಿ ಮಾಡಿ ಒಂದು ದಿನದ ಬಳಿಕ ಪ್ರತ್ಯಕ್ಷವಾದ ಆಟೋ ಚಾಲಕ

ಇನ್ನು ಹಂದಿ ದಾಳಿಗೆ ತಮಿಳಿನಾಡು ಮೂಲದ ಭಕ್ತರೊಬ್ಬರು ಗಾಯಗೊಂಡಿದ್ದಾರೆ. ಕಳೆದ ವರ್ಷ ಕೂಡ ಇದೇ ರೀತಿ ಹಂದಿಗಳು ನಾಲ್ಕು ವರ್ಷದ ಬಾಲಕಿಯನ್ನು ತಿವಿದು ಗಾಯಗೊಳಿಸಿದ್ದವು. ಹಂದಿಗಳು ಮನುಷ್ಯರ ಮೇಲೆ ದಾಳಿ ಮಾಡುವುದು ಮಾತ್ರವಲ್ಲದೆ, ಅವರ ಬಳಿ ಇರುವ ಆಹಾರ ಮತ್ತಿತರ ವಸ್ತುಗಳನ್ನು ಎಳೆದು ಹಾಳು ಮಾಡುತ್ತಿವೆ. ಸಮಸ್ಯೆಯ ಗಂಭೀರತೆ ಅರಿವಿದ್ದರೂ ಹಂದಿ ಉಪಟಳ ತಡೆಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಭಕ್ತರು ಮತ್ತು ಊರಿನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್