ಚಾಮರಾಜನಗರ: ರಾಮಪುರ ಆನೆ ಶಿಬಿರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ

ಆನೆಗಳ ಸಂಖ್ಯೆಯಲ್ಲಿ ಬಂಡಿಪುರಕ್ಕೆ ಮೊದಲ ಸ್ಥಾನ ಬಂದ ಬೆನ್ನಲ್ಲೆ ಈ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತಷ್ಟು ಪ್ರವಾಸಿಗರನ್ನ ಸೆಳೆಯಲು ಅರಣ್ಯಾಧಿಕಾರಿಗಳು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಅದರಂತೆ, ರಾಮಪುರ ಆನೆ ಬಿಡಾರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ ನಡೆಸುತ್ತಿದ್ದಾರೆ.

ಚಾಮರಾಜನಗರ: ರಾಮಪುರ ಆನೆ ಶಿಬಿರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ
ರಾಮಪುರ ಆನೆ ಬಿಡಾರದಲ್ಲಿ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆImage Credit source: starofmysore
Follow us
| Updated By: Rakesh Nayak Manchi

Updated on:Aug 22, 2023 | 3:02 PM

ಚಾಮರಾಜನಗರ, ಆಗಸ್ಟ್ 22: ಆನೆಗಳ ಸಂಖ್ಯೆಯಲ್ಲಿ ಬಂಡಿಪುರಕ್ಕೆ ಮೊದಲ ಸ್ಥಾನ ಬಂದ ಬೆನ್ನಲ್ಲೆ ಅರಣ್ಯ ಇಲಾಖೆ ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಹೌದು, ಬಂಡಿಪುರಕ್ಕೆ (Bandipur) ಮತ್ತಷ್ಟು ಪ್ರವಾಸಿಗರನ್ನ ಸೆಳೆಯಲು ಗುಂಡ್ಲುಪೇಟೆ ತಾಲೂಕಿನಲ್ಲಿರುವ ರಾಮಪುರ ಆನೆ ಬಿಡಾರದಲ್ಲಿ (Rampura Elephant Camp) ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ ನಡೆಸಲಾಗುತ್ತಿದೆ. ಈ ಕುರಿತು ಬಂಡಿಪುರ ಸಿಎಫ್ ರಮೇಶ್ ಕುಮಾರ್ ಅವರು ಪಿಸಿಸಿಎಫ್​​ಗೆ ವರದಿ ಸಲ್ಲಿಸಿದ್ದಾರೆ.

ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಯಾದರೆ ಪ್ರವಾಸಿಗರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾದ್ಯತೆ ಇದೆ. ಈಗಾಗಲೇ ಪ್ರತಿ ತಿಂಗಳು ಸಫಾರಿಯಿಂದಲೇ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿರುವ ಹಿನ್ನೆಲೆ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಯಾದರೆ ಬಂಡಿಪುರಕ್ಕೆ ಮತ್ತಷ್ಟು ಆದಾಯ ಹರಿದು ಬರಲಿರಲಿದೆ ಎಂಬುದು ಅಧಿಕಾರಿಗಳ ಪ್ಲಾನ್.

ಇದನ್ನೂ ಓದಿ: ಚಾಮರಾಜನಗರ: ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ ಹಿಡಿದ ಕೂಂಬಿಂಗ್ ಕಿಂಗ್ ಬಲರಾಮ ತಂಡ

ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಜೊತೆಗೆ ಆನೆಗಳಿಗೆ ತರಬೇತಿ ನೀಡುವುದನ್ನ ಕಣ್ತುಂಬಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಬಂಡಿಪುರದಲ್ಲಿ ಸಫಾರಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರೇ ಮನಸೋತಿದ್ದರು. ಬರೋಬ್ಬರಿ 2 ಗಂಟೆಗಳ ಕಾಲ ಸಫಾರಿ ಮಾಡಿದ್ದರು. ಮೋದಿ ಸಫಾರಿ ಬಳಿಕ ರಾಜ್ಯದ ಇತರೆ ಜಿಲ್ಲೆಗಳಿಂದ ಅಲ್ಲದೆ, ಹೊರ ರಾಜ್ಯ, ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Tue, 22 August 23

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ