AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ತಪ್ಪಿ ಖಾಸಗಿ ಬಸ್​ ಪಲ್ಟಿ, ತಪ್ಪಿದ ಭಾರಿ ದುರಂತ

ಚಾಮರಾಜನಗರ: ಕಮರವಾಡಿ ಗೇಟ್ ಬಳಿ ಖಾಸಗಿ ಬಸ್ ಪಲ್ಟಿಯಾಗಿ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಆ್ಯಕ್ಸಲ್ ಬ್ಲೇಡ್ ತುಂಡಾಗಿ ನಿಯಂತ್ರಣ ಕಳೆದುಕೊಂಡ ಬಸ್, ರಸ್ತೆ ಬದಿಗೆ ಉರುಳಿಬಿದ್ದು ಅಪಘಾತ ಸಂಭವಿಸಿದೆ. ಸಂತೇಮರಳಿಯಿಂದ ಮೈಸೂರಿಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. 40ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಬಸ್​ನಲ್ಲಿದ್ದ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 12 ಮಂದಿ ಗಾಯಳುಗಳನ್ನ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಬಂಧ ಸಂತೇಮರಳ್ಳಿ ಪೊಲೀಸ್ […]

ನಿಯಂತ್ರಣ ತಪ್ಪಿ ಖಾಸಗಿ ಬಸ್​ ಪಲ್ಟಿ, ತಪ್ಪಿದ ಭಾರಿ ದುರಂತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 26, 2019 | 7:33 PM

Share

ಚಾಮರಾಜನಗರ: ಕಮರವಾಡಿ ಗೇಟ್ ಬಳಿ ಖಾಸಗಿ ಬಸ್ ಪಲ್ಟಿಯಾಗಿ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಆ್ಯಕ್ಸಲ್ ಬ್ಲೇಡ್ ತುಂಡಾಗಿ ನಿಯಂತ್ರಣ ಕಳೆದುಕೊಂಡ ಬಸ್, ರಸ್ತೆ ಬದಿಗೆ ಉರುಳಿಬಿದ್ದು ಅಪಘಾತ ಸಂಭವಿಸಿದೆ.

ಸಂತೇಮರಳಿಯಿಂದ ಮೈಸೂರಿಗೆ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. 40ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಬಸ್​ನಲ್ಲಿದ್ದ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 12 ಮಂದಿ ಗಾಯಳುಗಳನ್ನ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸಂಬಂಧ ಸಂತೇಮರಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು