ಸರ್ಕಾರಿ ಶಾಲೆಗಳ‌ ದುರಸ್ತಿಗೆ ಖಾಸಗಿ ನೆರವು! ಪ್ರಯೋಗಕ್ಕೆ ಮುಂದಾದ ಚಾಮರಾಜನಗರ ಡಿಸಿ ಶಿಲ್ಪಾನಾಗ್

ಜಿಲ್ಲೆಯಲ್ಲಿ ಶತಮಾನ ಪೂರೈಸಿದ ಹಾಗೂ ಶಿಥಿಲಾವಸ್ಥೆಯಲ್ಲಿರುವ ಶಾಲೆ ಹಾಗೂ ಕೊಠಡಿಗಳ ದುರಸ್ತಿಗೆ ಖಾಸಗಿ ಪ್ರಯೋಜಕತ್ವದಲ್ಲಿ ‌ಮಾಡುವ ಪ್ರಯೋಗಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಸದ್ಯ ಈ ಯೋಜನೆಗೆ ಚಾಮರಾಜನಗರದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಸರ್ಕಾರಿ ಶಾಲೆಗಳ‌ ದುರಸ್ತಿಗೆ ಖಾಸಗಿ ನೆರವು! ಪ್ರಯೋಗಕ್ಕೆ ಮುಂದಾದ ಚಾಮರಾಜನಗರ ಡಿಸಿ ಶಿಲ್ಪಾನಾಗ್
ಚಾಮರಾಜನಗರ ಸರ್ಕಾರಿ ಪ್ರಾಥಮಿಕ ಶಾಲೆ
Edited By:

Updated on: Nov 21, 2023 | 10:03 PM

ಚಾಮರಾಜನಗರ, ನವೆಂಬರ್ 21: ಗಡಿ ಜಿಲ್ಲೆ ಚಾಮರಾಜನಗರದಲ್ಲಿ (Chamarajanagar) ಸರ್ಕಾರಿ ಶಾಲೆಗಳ (Government Schools) ದುಸ್ಥಿತಿ ಒಂದೆರಡಲ್ಲ. ಈ ನಡುವೆ ಜಿಲ್ಲೆಯಲ್ಲಿ 10 ಕ್ಕೂ ಹೆಚ್ಚು ಶತಮಾನ ಪೂರೈಸಿದ ಸರ್ಕಾರಿ ಶಾಲೆಗಳಿವೆ. ಅದಷ್ಟೇ ಅಲ್ಲದೆ ಸಾವಿರಕ್ಕೂ ಹೆಚ್ಚು ಶಾಲಾ ಕೊಠಡಿಗಳ ದುರಸ್ತಿ ನಡೆಯಬೇಕಿದೆ. ಖಾಸಗಿಯವರ ನೆರವಿನ ಮೂಲಕ ಶಾಲೆಗಳ‌ ದುರಸ್ತಿ ಮಾಡುವ ವಿನೂತನ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲೆಯಲ್ಲಿ ಶತಮಾನ ಪೂರೈಸಿದ ಹಾಗೂ ಶಿಥಿಲಾವಸ್ಥೆಯಲ್ಲಿರುವ ಶಾಲೆ ಹಾಗೂ ಕೊಠಡಿಗಳ ದುರಸ್ತಿಗೆ ಖಾಸಗಿ ಪ್ರಯೋಜಕತ್ವದಲ್ಲಿ ‌ಮಾಡುವ ಪ್ರಯೋಗಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಸದ್ಯ ಈ ಯೋಜನೆಗೆ ಚಾಮರಾಜನಗರದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದೀಗ ಈ ಶಾಲೆಯ ಅಭಿವೃದ್ಧಿಗೆ ಖಾಸಗಿ ಸಂಸ್ಥೆಯೊಂದು ಮುಂದೆ ಬಂದಿದೆ. ಇಂಟೆಕ್ ಸಂಸ್ಥೆಯ ಅಧಿಕಾರಿಗಳು ಈ ಶಾಲೆಯ ದುರಸ್ತಿಗೆ ಈಗಾಗ್ಲೇ ಪ್ಲ್ಯಾನ್ ಸಿದ್ದಪಡಿಸಿದ್ದಾರೆ. ಈ ಶಾಲೆಗೆ ಈಗಾಗ್ಲೇ 118 ವರ್ಷ ಪೂರೈಸಿದೆ.ಶಾಲೆಯ ಪಾರಂಪರಿಕತೆ ಉಳಿಸಿಕೊಳ್ಳುವ ಜೊತೆಗೆ ಹಳೆಯ ಮಾದರಿಯಲ್ಲಿ ಶಾಲೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ದುರಸ್ತಿ ಕಾರ್ಯಕ್ಕೆ ಸಿದ್ದತೆ ನಡೆದಿದೆ.ಖಾಸಗಿ ಸಂಸ್ಥೆಗಳ ಸಿಎಸ್ಆರ್ ನಿಧಿ ಮೂಲಕ ಹಣ ತೊಡಗಿಸಲು ಚಿಂತನೆ ನಡೆದಿದೆ.

ಇನ್ನೂ ಈ ಶಾಲೆಯ ದುರಸ್ತಿ ಖಾಸಗಿ ನೆರವಿನ ಮೂಲಕ ಯಶಸ್ವಿಯಾದ್ರೆ ಜಿಲ್ಲೆಯಲ್ಲಿರುವ ಎಲ್ಲಾ ಶತಮಾನ ಪೂರೈಸಿರುವ ಶಾಲೆಗಳ ಜೊತೆಗೆ ಜಿಲ್ಲೆಯಲ್ಲಿ ಎಷ್ಟು ಶಾಲೆಗಳ ಕೊಠಡಿ ದುರಸ್ತಿ ಅಗತ್ಯವಿದೆಯೋ ಅಷ್ಟು ಕಟ್ಟಡಗಳನ್ನು ದುರಸ್ತಿ ಮಾಡುವ ಚಿಂತನೆ ಕೂಡ ಜಿಲ್ಲಾಡಳಿತ ಮುಂದಿದೆ.ಜಿಲ್ಲೆಯಲ್ಲೂ ಕೂಡ ಸಾಕಷ್ಟು ಸಂಖ್ಯೆಯಲ್ಲಿ ಗ್ರಾನೈಟ್ ಕಾರ್ಖಾನೆ ಹಾಗೂ ಕೈಗಾರಿಕೆಗಳಿದೆ.ಇವರೆಲ್ಲರ ಜೊತೆಗೆ ಶೀಘ್ರದಲ್ಲೇ ಸಭೆ ನಡೆಸಿ ಜಿಲ್ಲೆಯ ಆರೋಗ್ಯ, ಶಿಕ್ಷಣ,ಆಸ್ಪತ್ರೆ ದುರಸ್ತಿಗೆ ಅಗತ್ಯವಿರುವ ಕಡೆ ಖಾಸಗೀಯವರ ಸಿಎಸ್ಆರ್ ನಿಧಿ ಮೂಲಕ ಸಾಮಾಜಿಕ ಕಾರ್ಯಕ್ಕೆ ಬಳಸಿಕೊಂಡು ಜಿಲ್ಲೆಯ ಶಾಲೆಗಳ ಕಟ್ಟಡ ದುರಸ್ತಿಗೆ ಮುಂದಾಗ್ತಿವಿ ಅಂತಾರೆ ಡಿಸಿ ಶಿಲ್ಪಾನಾಗ್.

ಇದನ್ನೂ ಓದಿ: ರಾಜಧಾನಿ ಬೆಂಗಳೂರಿನ ಜನರೇ ನೀವು ಕಾವೇರಿ ನೀರನ್ನ ಕುಡಿಯುತ್ತಿದ್ದೀರಾ? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಒಟ್ನಲ್ಲಿ ಸರ್ಕಾರಿ ಶಾಲೆಯ ಮಕ್ಕಳು ಗುಣಮಟ್ಟದ ಶಿಕ್ಷಣ ಕೊರತೆಯಿಂದ ಖಾಸಗಿ ಶಾಲೆಗಳತ್ತ ಮುಖ ಮಾಡ್ತಿದ್ದಾರೆ. ಜಿಲ್ಲೆಯಲ್ಲಿ ವಿಧ್ಯಾರ್ಥಿಗಳ ಶೂನ್ಯ ದಾಖಲಾತಿಯಿಂದ 14 ಶಾಲೆ ಮುಚ್ಚಿದೆ. ಇದನ್ನೆಲ್ಲಾ ಅರಿತು ಶಾಲೆಯ ಕಟ್ಟಡ ದುರಸ್ತಿ ಜೊತೆಗೆ ಗುಣಮಟ್ಟದ ಶಿಕ್ಷಣ ಕೊಡುವತ್ತ ಗಮನಹರಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us