AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಪುರ ಠಾಣೆ ಮೇಲೆ ದಾಳಿ ಪ್ರಕರಣ: ವೀರಪ್ಪನ್ ಗ್ಯಾಂಗ್ ಸದಸ್ಯೆಯಾಗಿದ್ದ ಸ್ಟೆಲ್ಲಾ ಮೇರಿಗೆ ಕ್ಲೀನ್​ಚಿಟ್

ರಾಮಾಪುರ ಪೊಲೀಸ್ ಠಾಣೆ ಮೇಲೆ ದಾಳಿ ಆರೋಪಿಯಾಗಿದ್ದ ಸ್ಟೆಲ್ಲಾ ಮೇರಿಗೆ ಚಾಮರಾಜನಗರ ಬಾಲ ನ್ಯಾಯ ಮಂಡಳಿ ಕ್ಲೀನ್​ಚಿಟ್ ನೀಡಿದೆ. 2020ರ ಫೆಬ್ರವರಿಯಲ್ಲಿ ಸ್ಟೆಲ್ಲಾ ಮೇರಿಯನ್ನು ಟಾಡಾ, ಶಸ್ತ್ರಾಸ್ತ್ರ ಕಾಯ್ದೆ, ಸ್ಫೋಟಕ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಯಡಿ ಬಂಧಿಸಲಾಗಿತ್ತು. ಮಾನವ ಹಕ್ಕುಗಳ ಸಂಘಟನೆಗಳು ಸ್ಟೆಲ್ಲಾ ಮೇರಿ ಬಂಧನ ಪ್ರಶ್ನಿಸಿದ್ದವು.

ರಾಮಾಪುರ ಠಾಣೆ ಮೇಲೆ ದಾಳಿ ಪ್ರಕರಣ: ವೀರಪ್ಪನ್ ಗ್ಯಾಂಗ್ ಸದಸ್ಯೆಯಾಗಿದ್ದ ಸ್ಟೆಲ್ಲಾ ಮೇರಿಗೆ ಕ್ಲೀನ್​ಚಿಟ್
ರಾಮಾಪುರ ಠಾಣೆ ಮೇಲೆ ದಾಳಿ ಪ್ರಕರಣ: ವೀರಪ್ಪನ್ ಗ್ಯಾಂಗ್ ಸದಸ್ಯೆಯಾಗಿದ್ದ ಸ್ಟೆಲ್ಲಾ ಮೇರಿಗೆ ಕ್ಲೀನ್​ಚಿಟ್
ಸೂರಜ್ ಪ್ರಸಾದ್ ಎಸ್.ಎನ್
| Edited By: Rakesh Nayak Manchi|

Updated on: Mar 05, 2024 | 5:08 PM

Share

ಚಾಮರಾಜನಗರ, ಮಾ.5: ರಾಮಾಪುರ ಪೊಲೀಸ್ ಠಾಣೆ ಮೇಲೆ ದಾಳಿ ಆರೋಪಿಯಾಗಿದ್ದ ಸ್ಟೆಲ್ಲಾ ಮೇರಿಗೆ ಚಾಮರಾಜನಗರ (Chamarajanagar) ಬಾಲ ನ್ಯಾಯ ಮಂಡಳಿ ಕ್ಲೀನ್​ಚಿಟ್ ನೀಡಿದೆ. ಪಾಲಾರ್ ಬಾಂಬ್ ಸ್ಫೋಟದ ಆರೋಪಿಯೂ ಆಗಿದ್ದ ಸ್ಟೆಲ್ಲಾ ಮೇರಿಯನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿ ಬಾಲ ನ್ಯಾಯಮಂಡಳಿ ಆದೇಶ ಹೊರಡಿಸಿದೆ.

ಠಾಣೆ ಮೇಲಿನ ದಾಳಿ ಪ್ರಕರಣ ಸಂಬಂಧ 2020ರ ಫೆಬ್ರವರಿಯಲ್ಲಿ ಸ್ಟೆಲ್ಲಾ ಮೇರಿಯನ್ನು ಬಂಧಿಸಲಾಗಿತ್ತು. ಟಾಡಾ, ಶಸ್ತ್ರಾಸ್ತ್ರ ಕಾಯ್ದೆ, ಸ್ಫೋಟಕ ಕಾಯ್ದೆ ಸೇರಿದಂತೆ ವಿವಿಧ ಆರೋಪಗಳಡಿ ಸ್ಟೆಲ್ಲಾ ಮೇರಿಯನ್ನು ಪೊಲೀಸರು ಬಂಧಿಸಿದ್ದರು. ಮೇರಿ ಬಂಧನವನ್ನು ಮಾನವ ಹಕ್ಕುಗಳ ಸಂಘಟನೆಗಳು ಪ್ರಶ್ನಿಸಿದ್ದವು.

ಈ ಪ್ರಕರಣವನ್ನು ಚಾಮರಾಜನಗರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಲ ನ್ಯಾಯಮಂಡಳಿಗೆ ವಹಿಸಿತ್ತು. ಪಾಲಾರ್ ಬಾಂಬ್ ಸ್ಫೋಟ ಮತ್ತು ರಾಮಾಪುರ ಪೊಲೀಸ್ ಠಾಣೆ ಮೇಲೆ ದಾಳಿ ನಡೆದಾಗ ಸ್ಟೆಲ್ಲಾ ಮೇರಿ ಅಪ್ರಾಪ್ತೆಯಾಗಿದ್ದಳು ಎಂದು ಮಾನವ ಹಕ್ಕುಗಳ ಸಂಘಟನೆ ವಾದ ಮಾಡಿತ್ತು.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್​​ಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್

ಸ್ಟೆಲ್ಲಾ ಮೇರಿಯನ್ನು ವೀರಪ್ಪನ್ ಸಹಚರ ಸುಂಡವಲಿಯಾರ್ ಅಪಹರಿಸಿ ಮದುವೆಯಾಗಿದ್ದ. ಈತ ಪೊಲೀಸ್ ಎನ್​ಕೌಂಟರ್‌ನಲ್ಲಿ ಬಲಿಯಾಗಿದ್ದ ಎಂದು ವಾದಿಸಲಾಗಿದೆ. ಸ್ಟೆಲ್ಲಾಮೇರಿಯನ್ನು ವೀರಪ್ಪನ್ ಸಹಚರ ಸುಂಡವಲಿಯಾರ್ (ಪೊಲೀಸ್ ಎನ್​‌ಕೌಂಟರ್‌ನಲ್ಲಿ ಬಲಿಯಾಗಿದ್ದಾನೆ) ಎಂಬಾತ ಅಪಹರಿಸಿ ಮದುವೆಯಾಗಿದ್ದ ಎಂದು ವಾದಿಸಲಾಗಿದೆ. ವಾದ ಪುರಸ್ಕರಿಸಿದ ಬಾಲ ನ್ಯಾಯ ಮಂಡಳಿ, ಸ್ಟೆಲ್ಲಾ ಮೇರಿಯನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ