AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಜ್ಜಾಲ-ಚಾಮರಾಜನಗರ ರೈಲ್ವೆ ಕಾರಿಡಾರ್​ಗೆ ಮರುಜೀವ; ದಶಕಗಳ ಕನಸು ಈಡೇರುವ ಭಾಗ್ಯ ಸನ್ನಿಹ

ಕಳೆದ ಎರಡುವರೆ ದಶಕಗಳಿಂದಲೂ ಒಂದಲ್ಲ ಒಂದು ಕಾರಣದಿಂದ ನೆನಗುದಿಗೆ ಬೀಳುತ್ತಿರುವ ಚಾಮರಾಜನಗರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾಮರಾಜನಗರ-ಹೆಜ್ಜಾಲ ರೈಲು ಮಾರ್ಗದ ಯೋಜನೆಗೆ ಇದೀಗ ಮರುಜೀವ ಬರತೊಡಗಿದೆ. ಜುಲೈ.23 ರಿಂದ ಆರಂಭವಾಗಲಿರುವ ಲೋಕಸಭಾ ಅಧಿವೇಶನದಲ್ಲಿ ಮಂಡನೆಯಾಗುವ ಕೇಂದ್ರ ಬಜೆಟ್​ನಲ್ಲಿ ಈ ಯೋಜನೆಯ ಅನುಷ್ಠಾನಕ್ಕೆ ಹಸಿರು ನಿಶಾನೆ ದೊರೆಯುವ ಆಶಾ ಭಾವನೆ ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ.

ಹೆಜ್ಜಾಲ-ಚಾಮರಾಜನಗರ ರೈಲ್ವೆ ಕಾರಿಡಾರ್​ಗೆ ಮರುಜೀವ; ದಶಕಗಳ ಕನಸು ಈಡೇರುವ ಭಾಗ್ಯ ಸನ್ನಿಹ
ಹೆಜ್ಜಾಲ-ಚಾಮರಾಜನಗರ ರೈಲ್ವೆ ಕಾರಿಡಾರ್​ಗೆ ಮರುಜೀವ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 17, 2024 | 6:42 PM

Share

ಚಾಮರಾಜನಗರ, ಜು.17: ಗಡಿ ಜಿಲ್ಲೆ ಚಾಮರಾಜನಗರ(Chamarajanagara)ದಿಂದ ನೆರೆಯ ತಮಿಳುನಾಡಿನ ಮೆಟ್ಟುಪಾಳ್ಯಂಗೆ ರೈಲು ಮಾರ್ಗ ಹಲವು ದಶಕಗಳ ಕನಸಾಗಿತ್ತು. ಆದರೆ, ಈ ರೈಲು ಮಾರ್ಗದಿಂದ ಸಾಕಷ್ಟು ಅರಣ್ಯನಾಶವಾಗಲಿದೆ, ವನ್ಯಜೀವಿಗಳಿಗೆ ಕಂಟಕವಾಗಲಿದೆ ಎಂಬ ಕಾರಣದಿಂದ ಅದು ರದ್ದಾಯಿತು. ಆದರೆ, ಅದರ ಬದಲು ಅಂದಿನ ಪ್ರದಾನಿ ಎಚ್.ಡಿ.ದೇವೇಗೌಡ(HD Deve Gowda) ಅವರು ಚಾಮರಾಜನಗರದಿಂದ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಕೊಳ್ಳೇಗಾಲ, ಮಳವಳ್ಳಿ, ಕನಕಪುರ ಮಾರ್ಗದ ಚಾಮರಾಜನಗರ ಹೆಜ್ಜಾಲ ರೈಲು ಯೋಜನೆಯನ್ನು ಘೋಷಿಸಿದ್ದರು. ಆದರೆ, ಈ ಯೋಜನೆಯು ಸಹ ನೆನಗುದಿಗೆ ಬೀಳುತ್ತಲೆ ಬಂದಿದ್ದು, ಇದೀಗ ಮರುಜೀವ ಬಂದಿದೆ.

ದಶಕಗಳ ಕನಸು ಈಡೇರುವ ಭಾಗ್ಯ ಸನ್ನಿಹ

ಕಳೆದ ವರ್ಷ ರೈಲ್ವೆ ಇಲಾಖೆ ತನ್ನ ಹೊಸ ರೈಲು ಮಾರ್ಗಗಳಿಗೆ ಒಪ್ಪಿಗೆ ಸೂಚಿಸಿರುವ ಪಟ್ಟಿಯಲ್ಲಿ ಚಾಮರಾಜನಗರ ಹೆಜ್ಜಾಲ ಮಾರ್ಗವೂ ಇದೆ. 141 ಕಿಲೋ ಮೀಟರ್ ಅಂತರವಿರುವ ಈ ಮಾರ್ಗದ ನಕ್ಷೆಯನ್ನು ಸಹ ರೈಲ್ವೆ ಇಲಾಖೆ ತನ್ನ ವೆಬ್​​ಸೈಟ್​ನಲ್ಲಿ ಪ್ರಕಟಿಸಿತ್ತು. ಇತ್ತೀಚೆಗೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರು ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ರೈಲು ಯೋಜನೆಯನ್ನು ಪ್ರಾರಂಭಿಸುವಂತೆ ಮನವಿ ಮಾಡಿದ್ದಾರೆ. ಇದರ ಜೊತೆಗೆ ವಿ.ಸೋಮಣ್ಣ ಅವರು ರೈಲ್ವೆ ಖಾತೆ ರಾಜ್ಯ ಸಚಿವರೂ ಆಗಿರುವುದರಿಂದ ಕೇಂದ್ರದ ಬಜೆಟ್​ನಲ್ಲಿ ಈ ರೈಲು ಯೋಜನೆಗೆ ಹಸಿರುನಿಶಾನೆ ದೊರೆಯಬಹುದೆಂದು ಸಾರ್ವಜನಿಕರಲ್ಲಿ ಆಶಾಭಾವನೆ ಮೂಡಿಸಿದೆ.

ಇದನ್ನೂ ಓದಿ:ಬೆಂಗಳೂರು ಉಪನಗರ ರೈಲ್ವೆ ಯೋಜನೆ: 699 ಮರ ಕಡಿಯುವುದಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಈ ರೈಲು ಮಾರ್ಗದ ಅನುಷ್ಠಾನಕ್ಕೆ 1700 ಎಕರೆ ಭೂಮಿ ಅಗತ್ಯವಾಗಿದ್ದು, ರೈಲ್ವೇ ಇಲಾಖೆ 2016ರಲ್ಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ರಾಜ್ಯ ಸರ್ಕಾರವೇ ಭೂಸ್ವಾಧೀನ ಪಡಿಸಿಕೊಟ್ಟು, ಇದಕ್ಕಾಗಿ ಬೇಕಾಗುವ 1500 ಕೋಟಿ ರೂ. ಅನುದಾನವನ್ನು ಸಹ ಭರಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡುವುದಾಗಿ ಕೊಳ್ಳೇಗಾಲ ಸೇರಿದಂತೆ ಚಾಮರಾಜನಗರ ಜಿಲ್ಲಾ ಶಾಸಕರ ಮಾತಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳು ಒಂದಾದ ಮೇಲೆ ಒಂದರಂತೆ ತಲೆ ಎತ್ತುತ್ತಿವೆ. ಜೊತೆಗೆ ಕೈಗಾರಿಕಾ ಪ್ರದೇಶವೂ ವಿಸ್ತರಣೆಯಾಗುತ್ತಿದೆ. ಚಾಮರಾಜನಗರ-ಹೆಜ್ಜಾಲ ರೈಲು ಮಾರ್ಗ ಅನುಷ್ಠಾನಗೊಂಡಲ್ಲಿ ಚಾಮರಾಜನಗರವು ರಾಜಧಾನಿ ಬೆಂಗಳೂರಿಗೆ ಇನ್ನಷ್ಟು ಹತ್ತಿರವಾಗಲಿದೆ. ಕೈಗಾರಿಕೆಗಳ ಅಭಿವೃದ್ಧಿಗೂ ಇದು ಸಹಕಾರಿಯಾಗಲಿದೆ. ಜೊತೆಗೆ ಕೊಳ್ಳೇಗಾಲ, ಮಳವಳ್ಳಿ, ಕನಕಪುರ ಜನತೆಗೂ ಇದರಿಂದ ಅನುಕೂಲವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ