AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ವಿರುದ್ದ ವಿವಾದಾತ್ಮಕ ಹೇಳಿಕೆ: ಗೂಳಿಹಟ್ಟಿ ಶೇಖರ್ ಹೇಳುತ್ತಿರುವುದು ಸುಳ್ಳು: ಮಾಜಿ ಸಚಿವ ಎನ್​ ಮಹೇಶ್

ಹೊಸದುರ್ಗದ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಆಡಿಯೋ ಹೇಳಿಕೆಯಲ್ಲಿ ‘ತಮಗೆ ಜಾತಿ ಕಾರಣಕ್ಕೆ ನಾಗಪುರದ ಡಾ. ಹೆಡಗೇವಾರ್ ಸ್ಮಾರಕ ಕಟ್ಟಡದಲ್ಲಿ ಪ್ರವೇಶ ನಿರಾಕರಿಸಲಾಯಿತು' ಎಂದು ಆರೋಪಿಸಿದ್ದಾರೆ. ಈ ವಿಚಾರವಾಗಿ ಚಾಮರಾಜನಗರದಲ್ಲಿ ಮಾತನಾಡಿರುವ ಮಾಜಿ ಸಚಿವ ಎನ್.ಮಹೇಶ್, ಗೂಳಿಹಟ್ಟಿ ಶೇಖರ್​ ಆರೋಪ ತಳ್ಳಿಹಾಕಿದ್ದು, ಸುಳ್ಳು ಹೇಳುತ್ತಿದ್ದಾರೆ ಎಂದಿದ್ದಾರೆ.

RSS ವಿರುದ್ದ ವಿವಾದಾತ್ಮಕ ಹೇಳಿಕೆ: ಗೂಳಿಹಟ್ಟಿ ಶೇಖರ್ ಹೇಳುತ್ತಿರುವುದು ಸುಳ್ಳು: ಮಾಜಿ ಸಚಿವ ಎನ್​ ಮಹೇಶ್
ಮಾಜಿ ಸಚಿವ ಎನ್.ಮಹೇಶ್
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Dec 07, 2023 | 5:04 PM

Share

ಚಾಮರಾಜನಗರ, ಡಿಸೆಂಬರ್​ 07: ನಾಗ್ಪರದ ಹೆಡಗೆವಾರ್​ ಕಚೇರಿಗೆ ಪ್ರವೇಶ ನೀಡದ ಆರೋಪ ವಿಚಾರವಾಗಿ ಗೂಳಿಹಟ್ಟಿ ಶೇಖರ್​ ಆರೋಪವನ್ನು ಮಾಜಿ ಸಚಿವ ಎನ್.ಮಹೇಶ್ ತಳ್ಳಿಹಾಕಿದ್ದಾರೆ. ಗೂಳಿಹಟ್ಟಿ ಶೇಖರ್ (Goolihatti Shekhar) ಹೇಳುತ್ತಿರುವುದು ಸುಳ್ಳು. 10 ತಿಂಗಳ ಹಿಂದೆ ನಡೆದ ಘಟನೆ ಈಗ್ಯಾಕೆ ಮಾತಾಡ್ತಾರೆ ಎಂದು ಹೇಳಿದ್ದಾರೆ. ನಗರದಲ್ಲಿ ಟವಿ9 ಜೊತೆ ಮಾತನಾಡಿದ ಅವರು. ​ಸಂತೋಷ್ ಜಿ ಕುರಿತು ಮಾತನಾಡುತ್ತಿದ್ದಾರೆ ಆದರೆ ಅವರಿಂದ ರಿಪ್ಲೆ ಇಲ್ಲ. ಶೇಖರ್​ ಅವರಿಗೆ ಯಾವುದೋ ಮೋಟಿವ್​ ಇದೆ ಅದಕ್ಕೆ ಮಾತಾಡ್ತಿದ್ದಾರೆ. ಇದೊಂತರ ಎಮೋಷನಲ್​ ಬ್ಲಾಕ್​ಮೇಲ್ ಇದ್ದಹಾಗೇ ಎಂದಿದ್ದಾರೆ.

3 ವರ್ಷದಿಂದ ಬಿಜೆಪಿಯಲ್ಲಿದ್ದೇನೆ. ಸಂಘ ಪರಿವಾರದ ಲಿಂಕ್​ ಇದೆ. ಒಂದು ವೇಳೆ ಶೇಖರ್​ ಹೇಳಿದ್ದು ನಿಜವಾದರೆ ಅದನ್ನ ಸಾಬೀತು ಪಡಿಸಲಿ. ಸಿಎಂ ಕೂಡ ಇದಕ್ಕೆ ರಿಯಾಕ್ಟ್ ಮಾಡುತ್ತಾರೆ, ಎಲ್ಲದರಲ್ಲೂ ರಾಜಕೀಯ ಸರಿಯಲ್ಲ. ಗೂಳಿಹಟ್ಟಿ ಶೇಖರ್ ಬಿಜೆಪಿ ತೊರೆದು ಬೇರೆ ಎಲ್ಲೋ ಹೋಗಲಿಕ್ಕೆ ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ನಮಗೂ ಆ ಅನುಭವ ಆಗಿದೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಈ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರತಿಕ್ರಿಯೆ ನೀಡಿದ್ದು, ಗೂಳಿಹಟ್ಟಿ ಶೇಖರ್​ ಹೇಳಿದಂತೆ ನಮಗೂ ಆ ಅನುಭವ ಆಗಿದೆ. ನಾನೂ ಬಿಜೆಪಿಯಲ್ಲಿ ಇದ್ದು ಬಂದವನು. ಕೆಲ ವಿಷಯಗಳಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ, ಆಹ್ವಾನವೂ ಇರಲಿಲ್ಲ. ಶೇಖರ್ ಹೇಳಿಕೆ ನಂತರ ಮನವರಿಕೆ ಆಗುತ್ತಿದೆ ಎಂದರು.

ಇದನ್ನೂ ಓದಿ: RSS ವಸ್ತು ಸಂಗ್ರಹಾಲಯ ಪ್ರವೇಶಕ್ಕೆ ಗೂಳಿಹಟ್ಟಿ ಶೇಖರ್​ಗೆ ನಿರಾಕರಣೆ: ಮೌನಕ್ಕೆ ಶರಣಾದ ಬಿಜೆಪಿ ನಾಯಕರು

ಕುಟುಂಬ ರಾಜಕಾರಣಕ್ಕೆ ನನ್ನ ಸಮ್ಮತಿ ಇಲ್ಲವೆಂದು ಪ್ರಧಾನಿ ಹೇಳುತ್ತಾರೆ. ಬಿ.ಎಸ್​.ಯಡಿಯೂರಪ್ಪ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿದ್ದಾರೆ. ಬಿಎಸ್ ಯಡಿಯೂರಪ್ಪರವರ ಒಬ್ಬ ಮಗ ಸಂಸದ, ಮತ್ತೊಬ್ಬ ಮಗ ರಾಜ್ಯಾಧ್ಯಕ್ಷ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್​​ನದು ಸಹ ಇದೇ ಪರಿಸ್ಥಿತಿ. ಹೆಚ್​ಡಿ ದೇವೇಗೌಡ ಕುಟುಂಬ ನೋಡಿದರೆ ಅರ್ಥವಾಗುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೆಸರು ‌ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ ನಾಗಪುರ ಕಚೇರಿಯಲ್ಲಿಲ್ಲ: ಗೂಳಿಹಟ್ಟಿ ಆರೋಪಕ್ಕೆ ಆರ್​ಎಸ್​ಎಸ್ ಸ್ಪಷ್ಟನೆ

ಬೈಕ್ ಸವಾರನ ಜೊತೆ ಭವಾನಿ ರೇವಣ್ಣ ವರ್ತನೆ ಸರಿ ಆದದ್ದು ಅಲ್ಲ. ದೇವೇಗೌಡರು ಇದನ್ನು ಖಂಡಿಸಬೇಕಿತ್ತು. ರೇವಣ್ಣ ಮತ್ತು ಅವರ ಪುತ್ರ ರಾಜೀನಾಮೆ ನೀಡಬೇಕಿತ್ತು. ಭವಾನಿ ರೇವಣ್ಣ ಯಾವುದೇ ಚುನಾವಣೆ ಸ್ಪರ್ಧೆ ಮಾಡದಂತೆ ನಿರ್ಣಯ ತೆಗೆದುಕೊಳ್ಳಬೇಕು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳು ಭ್ರಷ್ಟಾಚಾರದಿಂದ ಕೂಡಿವೆ. ಈ ಮೂರು ಪಕ್ಷಗಳು ಜನರನ್ನ ಲೂಟಿ ಮಾಡಿವೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!