AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ, ಎಸ್​ಟಿ ಅನುದಾನ ದುರುಪಯೋಗವಾಗಲು ಬಿಡುವುದಿಲ್ಲ: ಹೆಚ್.​​ಸಿ. ಮಹದೇವಪ್ಪ

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಹಣದ ಕ್ರೂಡೀಕರಣಕ್ಕೆ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅದರಂತೆ ಗೃಹಲಕ್ಷ್ಮೀ ಯೋಜನೆ ಜಾರಿಗಾಗಿ ಎಸ್​​ಸಿ ಎಸ್​​ಟಿ ಅನುದಾನವನ್ನು ಬಳಕೆ ಮಾಡಲು ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಬಿಜೆಪಿ ಪ್ರತಿಭಟನೆಯೂ ನಡೆಸಿತ್ತು.

ಎಸ್​ಸಿ, ಎಸ್​ಟಿ ಅನುದಾನ ದುರುಪಯೋಗವಾಗಲು ಬಿಡುವುದಿಲ್ಲ: ಹೆಚ್.​​ಸಿ. ಮಹದೇವಪ್ಪ
ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್​​ಸಿ ಮಹದೇವಪ್ಪ
ಸೂರಜ್ ಪ್ರಸಾದ್ ಎಸ್.ಎನ್
| Edited By: Rakesh Nayak Manchi|

Updated on: Aug 20, 2023 | 6:37 PM

Share

ಚಾಮರಾಜನಗರ, ಆಗಸ್ಟ್ 20: ಯಾವುದೇ ಕಾರಣಕ್ಕೂ ಎಸ್​ಸಿ, ಎಸ್​ಟಿ ಅನುದಾನ ದುರುಪಯೋಗವಾಗಲು ಬಿಡುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್​​.ಸಿ.ಮಹಾದೇವಪ್ಪ (H.C.Mahadevappa) ಹೇಳಿದ್ದಾರೆ. ಚಾಮರಾಜನಗರದಲ್ಲಿ ನಡೆದ ಸಂವಿಧಾನ ಉಳಿವಿಗಾಗಿ ಭೀಮಸಂಕಲ್ಪ ಸಮಾವೇಶದಲ್ಲಿ ಈ ಹೇಳಿಕೆ ನೀಡಿದರು.

ಒಂದೊಂದೇ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಯೋಜನೆಗಳ ಸಮರ್ಪಕ ಜಾರಿಗಾಗಿ ಹಣದ ಕ್ರೂಡೀಕರಣಕ್ಕೆ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅದರಂತೆ ಗೃಹಲಕ್ಷ್ಮೀ ಯೋಜನೆ ಜಾರಿಗಾಗಿ ಎಸ್​​ಸಿ ಎಸ್​​ಟಿ ಅನುದಾನವನ್ನು ಬಳಕೆ ಮಾಡಲು ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಬಿಜೆಪಿ ಪ್ರತಿಭಟನೆಯೂ ನಡೆಸಿತ್ತು.

ಬೇರೆ ಯೋಜನೆಗಳಿಗೆ ಬಳಸಿಕೊಳ್ಳಲು ನಿಯಮ 7ಡಿ ಅಡಿ ಅವಕಾಶ ಇದೆ. ಈ ನಿಯಮವನ್ನು ಬಿಜೆಪಿ ಸರ್ಕಾರ ದುರುಪಯೋಗ ಮಾಡಿಕೊಂಡಿತ್ತು. ಬಿಜೆಪಿ ಸರ್ಕಾರ SCP, TSP ಹಣವನ್ನು ಬೇರೆ ಯೋಜನೆಗಳಿಗೆ ನೀಡುತ್ತಿತ್ತು. ನಾವು ಈಗ 7ಡಿ ನಿಯಮವನ್ನೇ ತೆಗೆದುಹಾಕುತ್ತಿದ್ದೇವೆ ಎಂದು ಸಚಿವರು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: Video: ಆ ಕಡೆ ಸೂರ್ಯನ ಪ್ರಕೋಪ -ಈ ಕಡೆ ಅಧಿಕಾರಿಗಳ ಬೇಜವಾಬ್ದಾರಿತನ: ಆತಂಕದ ಕ್ಷಣಗಳ ಎದುರಿಸಿದ ಸಚಿವ ಡಾಕ್ಟರ್​​ ಮಹದೇವಪ್ಪ

ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದೇ ನಾವೇ ಎಂದು ಹೇಳಿದ ಹೆಚ್​.ಸಿ.ಮಹದೇವಪ್ಪ, ಪರಿಶಿಷ್ಟ ಜಾತಿ ಗುತ್ತಿಗೆದಾರರಿಗೆ ಪ್ರತಿಭಟನೆ ಮಾಡುವಂತೆ ಹೇಳಿಕೊಟ್ಟಿದ್ದೆ. ಹೆಚ್​​.ಸಿ.ಮಹದೇವಪ್ಪಗೆ ಧಿಕ್ಕಾರ ಕೂಗಿ ಅಂತಾ ನಾನೇ ಹೇಳಿಕೊಟ್ಟಿದ್ದೆ. ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ದಲಿತರ ಪರ ಕೆಲಸ ಮಾಡಿಸುತ್ತಿದ್ದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ದಲಿತರ ಪರ ಕೆಲಸ ಮಾಡಿಸುತ್ತಿದೆ ಎಂದರು.

ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಸ್ಕೀಮ್ ಗಳಿಗೆ ಬೇರೆ ಯೋಜನೆ ಅಥವಾ ಇಲಾಖೆಗಳಿಗೆ ಮೀಸಲಾಗಿರಿಸಿರುವ ಹಣ ಬಳಸಲಾಗಿತ್ತಿದೆ ಎಂದು ವಿರೋಧ ಪಕ್ಷಗಳ ನಾಯಕರು ಅರೋಪ ಮಾಡಿದ್ದರು. ವಿಧಾನಸೌಧಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಎಸ್​​ಸಿಪಿ ಟಿಎಸ್​​​ಪಿ ಸಭೆಯ ಬಳಿಕ ಮಾತನಾಡಿದ್ದ ಮಹಾದೇವಪ್ಪ ಅವರಿಗೆ ಪತ್ರಕರ್ತರು ಮೀಸಲು ಹಣವನ್ನು ಗೃಹಲಕ್ಷ್ಮೀ ಬಳಸಲಾಗುತ್ತಿದೆಯೇ ಅಂತ ಪ್ರಶ್ನೆ ಕೇಳಿದ್ದರು.

ಸಚಿವರು ಉತ್ತರ ನೀಡುತ್ತಿದ್ದಾಗ, ಸರ್ ನೀವು ಸುಳ್ಳು ಹೇಳುತ್ತಿದ್ದೀರಿ ಅಂತ ನೇರವಾಗಿ ಆರೋಪಿಸಿದ್ದರು. ಇಲ್ಲ, ಹಾಗೇನೂ ಇಲ್ಲ, ಒಂದು ಇಲಾಖೆಗೆ ಬಿಡುಗಡೆ ಮಾಡಿದ ಅನುದಾನ ಬೇರೆ ಯೋಜನೆಗೆ ಬಳಸಲು ಸಾಧ್ಯವಿಲ್ಲ ಎಂದು ಸಚಿವರು ಪ್ರತಿಕ್ರಿಯಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More