AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ, ಎಸ್​ಟಿ ಅನುದಾನ ದುರುಪಯೋಗವಾಗಲು ಬಿಡುವುದಿಲ್ಲ: ಹೆಚ್.​​ಸಿ. ಮಹದೇವಪ್ಪ

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಹಣದ ಕ್ರೂಡೀಕರಣಕ್ಕೆ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅದರಂತೆ ಗೃಹಲಕ್ಷ್ಮೀ ಯೋಜನೆ ಜಾರಿಗಾಗಿ ಎಸ್​​ಸಿ ಎಸ್​​ಟಿ ಅನುದಾನವನ್ನು ಬಳಕೆ ಮಾಡಲು ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಬಿಜೆಪಿ ಪ್ರತಿಭಟನೆಯೂ ನಡೆಸಿತ್ತು.

ಎಸ್​ಸಿ, ಎಸ್​ಟಿ ಅನುದಾನ ದುರುಪಯೋಗವಾಗಲು ಬಿಡುವುದಿಲ್ಲ: ಹೆಚ್.​​ಸಿ. ಮಹದೇವಪ್ಪ
ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್​​ಸಿ ಮಹದೇವಪ್ಪ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 20, 2023 | 6:37 PM

Share

ಚಾಮರಾಜನಗರ, ಆಗಸ್ಟ್ 20: ಯಾವುದೇ ಕಾರಣಕ್ಕೂ ಎಸ್​ಸಿ, ಎಸ್​ಟಿ ಅನುದಾನ ದುರುಪಯೋಗವಾಗಲು ಬಿಡುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್​​.ಸಿ.ಮಹಾದೇವಪ್ಪ (H.C.Mahadevappa) ಹೇಳಿದ್ದಾರೆ. ಚಾಮರಾಜನಗರದಲ್ಲಿ ನಡೆದ ಸಂವಿಧಾನ ಉಳಿವಿಗಾಗಿ ಭೀಮಸಂಕಲ್ಪ ಸಮಾವೇಶದಲ್ಲಿ ಈ ಹೇಳಿಕೆ ನೀಡಿದರು.

ಒಂದೊಂದೇ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಯೋಜನೆಗಳ ಸಮರ್ಪಕ ಜಾರಿಗಾಗಿ ಹಣದ ಕ್ರೂಡೀಕರಣಕ್ಕೆ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅದರಂತೆ ಗೃಹಲಕ್ಷ್ಮೀ ಯೋಜನೆ ಜಾರಿಗಾಗಿ ಎಸ್​​ಸಿ ಎಸ್​​ಟಿ ಅನುದಾನವನ್ನು ಬಳಕೆ ಮಾಡಲು ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಬಿಜೆಪಿ ಪ್ರತಿಭಟನೆಯೂ ನಡೆಸಿತ್ತು.

ಬೇರೆ ಯೋಜನೆಗಳಿಗೆ ಬಳಸಿಕೊಳ್ಳಲು ನಿಯಮ 7ಡಿ ಅಡಿ ಅವಕಾಶ ಇದೆ. ಈ ನಿಯಮವನ್ನು ಬಿಜೆಪಿ ಸರ್ಕಾರ ದುರುಪಯೋಗ ಮಾಡಿಕೊಂಡಿತ್ತು. ಬಿಜೆಪಿ ಸರ್ಕಾರ SCP, TSP ಹಣವನ್ನು ಬೇರೆ ಯೋಜನೆಗಳಿಗೆ ನೀಡುತ್ತಿತ್ತು. ನಾವು ಈಗ 7ಡಿ ನಿಯಮವನ್ನೇ ತೆಗೆದುಹಾಕುತ್ತಿದ್ದೇವೆ ಎಂದು ಸಚಿವರು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: Video: ಆ ಕಡೆ ಸೂರ್ಯನ ಪ್ರಕೋಪ -ಈ ಕಡೆ ಅಧಿಕಾರಿಗಳ ಬೇಜವಾಬ್ದಾರಿತನ: ಆತಂಕದ ಕ್ಷಣಗಳ ಎದುರಿಸಿದ ಸಚಿವ ಡಾಕ್ಟರ್​​ ಮಹದೇವಪ್ಪ

ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದೇ ನಾವೇ ಎಂದು ಹೇಳಿದ ಹೆಚ್​.ಸಿ.ಮಹದೇವಪ್ಪ, ಪರಿಶಿಷ್ಟ ಜಾತಿ ಗುತ್ತಿಗೆದಾರರಿಗೆ ಪ್ರತಿಭಟನೆ ಮಾಡುವಂತೆ ಹೇಳಿಕೊಟ್ಟಿದ್ದೆ. ಹೆಚ್​​.ಸಿ.ಮಹದೇವಪ್ಪಗೆ ಧಿಕ್ಕಾರ ಕೂಗಿ ಅಂತಾ ನಾನೇ ಹೇಳಿಕೊಟ್ಟಿದ್ದೆ. ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ದಲಿತರ ಪರ ಕೆಲಸ ಮಾಡಿಸುತ್ತಿದ್ದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ದಲಿತರ ಪರ ಕೆಲಸ ಮಾಡಿಸುತ್ತಿದೆ ಎಂದರು.

ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಸ್ಕೀಮ್ ಗಳಿಗೆ ಬೇರೆ ಯೋಜನೆ ಅಥವಾ ಇಲಾಖೆಗಳಿಗೆ ಮೀಸಲಾಗಿರಿಸಿರುವ ಹಣ ಬಳಸಲಾಗಿತ್ತಿದೆ ಎಂದು ವಿರೋಧ ಪಕ್ಷಗಳ ನಾಯಕರು ಅರೋಪ ಮಾಡಿದ್ದರು. ವಿಧಾನಸೌಧಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಎಸ್​​ಸಿಪಿ ಟಿಎಸ್​​​ಪಿ ಸಭೆಯ ಬಳಿಕ ಮಾತನಾಡಿದ್ದ ಮಹಾದೇವಪ್ಪ ಅವರಿಗೆ ಪತ್ರಕರ್ತರು ಮೀಸಲು ಹಣವನ್ನು ಗೃಹಲಕ್ಷ್ಮೀ ಬಳಸಲಾಗುತ್ತಿದೆಯೇ ಅಂತ ಪ್ರಶ್ನೆ ಕೇಳಿದ್ದರು.

ಸಚಿವರು ಉತ್ತರ ನೀಡುತ್ತಿದ್ದಾಗ, ಸರ್ ನೀವು ಸುಳ್ಳು ಹೇಳುತ್ತಿದ್ದೀರಿ ಅಂತ ನೇರವಾಗಿ ಆರೋಪಿಸಿದ್ದರು. ಇಲ್ಲ, ಹಾಗೇನೂ ಇಲ್ಲ, ಒಂದು ಇಲಾಖೆಗೆ ಬಿಡುಗಡೆ ಮಾಡಿದ ಅನುದಾನ ಬೇರೆ ಯೋಜನೆಗೆ ಬಳಸಲು ಸಾಧ್ಯವಿಲ್ಲ ಎಂದು ಸಚಿವರು ಪ್ರತಿಕ್ರಿಯಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ