AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಸಿ, ಎಸ್​ಟಿ ಅನುದಾನ ದುರುಪಯೋಗವಾಗಲು ಬಿಡುವುದಿಲ್ಲ: ಹೆಚ್.​​ಸಿ. ಮಹದೇವಪ್ಪ

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಹಣದ ಕ್ರೂಡೀಕರಣಕ್ಕೆ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅದರಂತೆ ಗೃಹಲಕ್ಷ್ಮೀ ಯೋಜನೆ ಜಾರಿಗಾಗಿ ಎಸ್​​ಸಿ ಎಸ್​​ಟಿ ಅನುದಾನವನ್ನು ಬಳಕೆ ಮಾಡಲು ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಬಿಜೆಪಿ ಪ್ರತಿಭಟನೆಯೂ ನಡೆಸಿತ್ತು.

ಎಸ್​ಸಿ, ಎಸ್​ಟಿ ಅನುದಾನ ದುರುಪಯೋಗವಾಗಲು ಬಿಡುವುದಿಲ್ಲ: ಹೆಚ್.​​ಸಿ. ಮಹದೇವಪ್ಪ
ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್​​ಸಿ ಮಹದೇವಪ್ಪ
ಸೂರಜ್ ಪ್ರಸಾದ್ ಎಸ್.ಎನ್
| Edited By: Rakesh Nayak Manchi|

Updated on: Aug 20, 2023 | 6:37 PM

Share

ಚಾಮರಾಜನಗರ, ಆಗಸ್ಟ್ 20: ಯಾವುದೇ ಕಾರಣಕ್ಕೂ ಎಸ್​ಸಿ, ಎಸ್​ಟಿ ಅನುದಾನ ದುರುಪಯೋಗವಾಗಲು ಬಿಡುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್​​.ಸಿ.ಮಹಾದೇವಪ್ಪ (H.C.Mahadevappa) ಹೇಳಿದ್ದಾರೆ. ಚಾಮರಾಜನಗರದಲ್ಲಿ ನಡೆದ ಸಂವಿಧಾನ ಉಳಿವಿಗಾಗಿ ಭೀಮಸಂಕಲ್ಪ ಸಮಾವೇಶದಲ್ಲಿ ಈ ಹೇಳಿಕೆ ನೀಡಿದರು.

ಒಂದೊಂದೇ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಯೋಜನೆಗಳ ಸಮರ್ಪಕ ಜಾರಿಗಾಗಿ ಹಣದ ಕ್ರೂಡೀಕರಣಕ್ಕೆ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಅದರಂತೆ ಗೃಹಲಕ್ಷ್ಮೀ ಯೋಜನೆ ಜಾರಿಗಾಗಿ ಎಸ್​​ಸಿ ಎಸ್​​ಟಿ ಅನುದಾನವನ್ನು ಬಳಕೆ ಮಾಡಲು ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಬಿಜೆಪಿ ಪ್ರತಿಭಟನೆಯೂ ನಡೆಸಿತ್ತು.

ಬೇರೆ ಯೋಜನೆಗಳಿಗೆ ಬಳಸಿಕೊಳ್ಳಲು ನಿಯಮ 7ಡಿ ಅಡಿ ಅವಕಾಶ ಇದೆ. ಈ ನಿಯಮವನ್ನು ಬಿಜೆಪಿ ಸರ್ಕಾರ ದುರುಪಯೋಗ ಮಾಡಿಕೊಂಡಿತ್ತು. ಬಿಜೆಪಿ ಸರ್ಕಾರ SCP, TSP ಹಣವನ್ನು ಬೇರೆ ಯೋಜನೆಗಳಿಗೆ ನೀಡುತ್ತಿತ್ತು. ನಾವು ಈಗ 7ಡಿ ನಿಯಮವನ್ನೇ ತೆಗೆದುಹಾಕುತ್ತಿದ್ದೇವೆ ಎಂದು ಸಚಿವರು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ: Video: ಆ ಕಡೆ ಸೂರ್ಯನ ಪ್ರಕೋಪ -ಈ ಕಡೆ ಅಧಿಕಾರಿಗಳ ಬೇಜವಾಬ್ದಾರಿತನ: ಆತಂಕದ ಕ್ಷಣಗಳ ಎದುರಿಸಿದ ಸಚಿವ ಡಾಕ್ಟರ್​​ ಮಹದೇವಪ್ಪ

ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದೇ ನಾವೇ ಎಂದು ಹೇಳಿದ ಹೆಚ್​.ಸಿ.ಮಹದೇವಪ್ಪ, ಪರಿಶಿಷ್ಟ ಜಾತಿ ಗುತ್ತಿಗೆದಾರರಿಗೆ ಪ್ರತಿಭಟನೆ ಮಾಡುವಂತೆ ಹೇಳಿಕೊಟ್ಟಿದ್ದೆ. ಹೆಚ್​​.ಸಿ.ಮಹದೇವಪ್ಪಗೆ ಧಿಕ್ಕಾರ ಕೂಗಿ ಅಂತಾ ನಾನೇ ಹೇಳಿಕೊಟ್ಟಿದ್ದೆ. ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ದಲಿತರ ಪರ ಕೆಲಸ ಮಾಡಿಸುತ್ತಿದ್ದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ದಲಿತರ ಪರ ಕೆಲಸ ಮಾಡಿಸುತ್ತಿದೆ ಎಂದರು.

ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಸ್ಕೀಮ್ ಗಳಿಗೆ ಬೇರೆ ಯೋಜನೆ ಅಥವಾ ಇಲಾಖೆಗಳಿಗೆ ಮೀಸಲಾಗಿರಿಸಿರುವ ಹಣ ಬಳಸಲಾಗಿತ್ತಿದೆ ಎಂದು ವಿರೋಧ ಪಕ್ಷಗಳ ನಾಯಕರು ಅರೋಪ ಮಾಡಿದ್ದರು. ವಿಧಾನಸೌಧಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಎಸ್​​ಸಿಪಿ ಟಿಎಸ್​​​ಪಿ ಸಭೆಯ ಬಳಿಕ ಮಾತನಾಡಿದ್ದ ಮಹಾದೇವಪ್ಪ ಅವರಿಗೆ ಪತ್ರಕರ್ತರು ಮೀಸಲು ಹಣವನ್ನು ಗೃಹಲಕ್ಷ್ಮೀ ಬಳಸಲಾಗುತ್ತಿದೆಯೇ ಅಂತ ಪ್ರಶ್ನೆ ಕೇಳಿದ್ದರು.

ಸಚಿವರು ಉತ್ತರ ನೀಡುತ್ತಿದ್ದಾಗ, ಸರ್ ನೀವು ಸುಳ್ಳು ಹೇಳುತ್ತಿದ್ದೀರಿ ಅಂತ ನೇರವಾಗಿ ಆರೋಪಿಸಿದ್ದರು. ಇಲ್ಲ, ಹಾಗೇನೂ ಇಲ್ಲ, ಒಂದು ಇಲಾಖೆಗೆ ಬಿಡುಗಡೆ ಮಾಡಿದ ಅನುದಾನ ಬೇರೆ ಯೋಜನೆಗೆ ಬಳಸಲು ಸಾಧ್ಯವಿಲ್ಲ ಎಂದು ಸಚಿವರು ಪ್ರತಿಕ್ರಿಯಿಸಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ