AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಚಾಮರಾಜನಗರ ವಿದ್ಯಾರ್ಥಿನಿ

ಮೃತ ವಿದ್ಯಾರ್ಥಿ ಚಾಮರಾಜನಗರ ಜಿಲ್ಲೆಯ ಜೆಎಸ್‌ಎಸ್ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದರು.

Karnataka 2nd PUC Result: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಚಾಮರಾಜನಗರ ವಿದ್ಯಾರ್ಥಿನಿ
ಸಾಂದರ್ಭಿಕ ಚಿತ್ರ
ನಯನಾ ಎಸ್​ಪಿ
|

Updated on:Apr 21, 2023 | 2:59 PM

Share

ಚಾಮರಾಜನಗರ: ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಯುವತಿಯೊಬ್ಬಳು ದ್ವಿತೀಯ ಪದವಿ ಪೂರ್ವ ಕಾಲೇಜು (PUC) ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ನಡೆದ ಪರೀಕ್ಷೆಗಳ ಫಲಿತಾಂಶವನ್ನು ಶುಕ್ರವಾರ (April 21) ಪ್ರಕಟಿಸಲಾಯಿತು. ಮೃತರನ್ನು ಜೆಎಸ್‌ಎಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಎಂದು ಗುರುತಿಸಲಾಗಿದೆ. ವಿಜಯಲಕ್ಷ್ಮಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದು ತಿಳಿದು ಬಂದಿದೆ. ಚಾಮರಾಜನಗರದ ವಿಜಯಲಕ್ಷ್ಮಿ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಗ್ರಾಮದ ನಿವಾಸಿ ವಿಜಯಲಕ್ಷ್ಮಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆಸಿಇಟಿ) ತಯಾರಿ ನಡೆಸಲು ಹಾಸ್ಟೆಲ್‌ನಲ್ಲಿ ತಂಗಿದ್ದರು. ನಗರ ಠಾಣೆ ಪೊಲೀಸರು ವಸತಿ ನಿಲಯಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಸದ್ಯಕ್ಕೆ ತನಿಖೆಗಳು ನಡೆಯುತ್ತಿವೆ.

ಪರಿಶೀಲನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮೇ 3 ರಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮೇ 3 ರಿಂದ ಅಧಿಕೃತ ವೆಬ್‌ಸೈಟ್‌ ಅಲ್ಲಿ ಪ್ರಾರಂಭವಾಗಲಿದೆ. ಸಪ್ಲಿಮೆಂಟರಿ ಪರೀಕ್ಷೆಯ ವೇಳಾಪಟ್ಟಿಯನ್ನು ಇನ್ನು ಪ್ರಕಟಿಸಿಲ್ಲ. ಆದರೆ ಸಪ್ಲಿಮೆಂಟರಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕೂಡ ಶೀಘ್ರದಲ್ಲೇ ಆರಂಭವಾಗಲಿದೆ. ವಿದ್ಯಾರ್ಥಿಗಳು ಇತ್ತೀಚಿನ ನವೀಕರಣಗಳಿಗಾಗಿ ಕರ್ನಾಟಕ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಅನ್ನು ಪರಿಶೀಲಿಸಲು ಸಲಹೆ ನೀಡಲಾಗುತ್ತದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಪರ್ಯಾಯ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪರಿಶೀಲಿಸುವುದು ಹೇಗೆ?

(ನಿಮಗೆ ಬೆಂಬಲ ಬೇಕಾದರೆ ಅಥವಾ ಆತ್ಮಹತ್ಯಾ ಆಲೋಚನೆಗಳನ್ನು ಹೊಂದಿರುವ ಯಾರಾದರೂ ತಿಳಿದಿದ್ದರೆ, ದಯವಿಟ್ಟು ನಿಮ್ಮ ಹತ್ತಿರದ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಿ ಅಥವಾ ಕುಟುಂಬಗಳಿಗೆ ಭಾವನಾತ್ಮಕ ಬೆಂಬಲವನ್ನು ನೀಡುವ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು. ಕರ್ನಾಟಕ: ಪರಿವರ್ತನ್ ಕೌನ್ಸೆಲಿಂಗ್ ಸಹಾಯವಾಣಿ ಸೇವೆಗಳು – +91 7676 602 602; ಸಹಾಯ – +91 080 25497777, 9886444075; ಸ-ಮುದ್ರಾ ಯುವ ಸಹಾಯವಾಣಿ – +91 9880396331; ಆರೋಗ್ಯ ಸಹಾಯವಾಣಿ -104.

Published On - 2:51 pm, Fri, 21 April 23