AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಲೆಗೆ ಹೋಗುವ ಭಕ್ತರಿಗೆ ಶಾಕ್​​​! ಟ್ರಕ್ಕಿಂಗ್​ಗೆ ನಿರ್ಬಂಧ ವಿಧಿಸಿದ ಅರಣ್ಯ ಇಲಾಖೆ

ಅದು ದಟ್ಟ ಕಾನನದ ನಡುವೆ ಇರುವ ಆಧ್ಯಾತ್ಮಿಕ ಕ್ಷೇತ್ರ. ಭಕ್ತರು ತಮ್ಮ ಆರಾಧ್ಯ ದೇವರ ದರ್ಶನ ಮಾಡಲು ಕಾಲ್ನಡಿಗೆಯಲ್ಲಿ ಬೆಟ್ಟಗುಡ್ಡ ಹತ್ತಿಯೇ ಅಲ್ಲಿಗೆ ತೆರಳಬೇಕು. ತಲ-ತಲಾಂತರಗಳಿಂದ ಯಾವುದೇ ನಿರ್ಬಂಧ ಇಲ್ಲದೆ ದೇವರ ದರ್ಶನ ಪಡೆಯುತ್ತಿದ್ದ ಭಕ್ತರಿಗೆ ಇದೀಗ ಅರಣ್ಯ ಇಲಾಖೆ ಟ್ರಕ್ಕಿಂಗ್ ನಿಷೇಧ ಹೆಸರಿನಲ್ಲಿ ನಿರ್ಬಂಧ ಹೇರುವ ಮೂಲಕ ಲಕ್ಷಾಂತರ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದೆ ಎಂಬ ಆರೋಪ ಕೇಳಿ ಬಂದಿದೆ.

ನಾಗಮಲೆಗೆ ಹೋಗುವ ಭಕ್ತರಿಗೆ ಶಾಕ್​​​! ಟ್ರಕ್ಕಿಂಗ್​ಗೆ ನಿರ್ಬಂಧ ವಿಧಿಸಿದ ಅರಣ್ಯ ಇಲಾಖೆ
ನಾಗಮಲೆ ಟ್ರಕ್ಕಿಂಗ್​ ಬಂದ್​
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Feb 27, 2024 | 6:57 PM

Share

ಚಾಮರಾಜನಗರ, ಫೆ.27:  77 ಮಲೆಗಳನ್ನು ಹೊಂದಿರುವ ಮಹದೇಶ್ವರ ಬೆಟ್ಟದಲ್ಲಿ ನಾಗಮಲೆ(Nagamale)ಯು ಒಂದು. ಮಹದೇಶ್ವರ, ಈಗಿರುವ ನಡುಮಲೆಯಿಂದ ತೆರಳಿ ನಾಗಮಲೆಯಲ್ಲಿ ತಪಸ್ಸು ಮಾಡಿ ಇಲ್ಲಿಯೇ ನೆಲೆಸಿದ್ದಾನೆ ಎಂಬ ಪುರಾಣವಿದೆ. ತಪಸ್ಸು ಮಾಡುವಾಗ ಹಾವೊಂದು ಹೆಡೆ ಬಿಚ್ಚಿ ನೆರಳು ನೀಡಿತ್ತೆಂದು ಭಕ್ತರ ನಂಬಿಕೆಯಾಗಿದ್ದು, ಇದಕ್ಕೆ ಪೂರಕವಾಗಿ ಇಲ್ಲಿ ಹಾವಿನ ಹೆಡೆ ಆಕಾರದ ಬೃಹತ್ ಬಂಡೆ ಇದೆ. ಅದರಂತೆ ಭಕ್ತರ ಪಾಲಿನ ಧಾರ್ಮಿಕ ಕ್ಷೇತ್ರವಾಗಿರುವ ನಾಗಮಲೆ, ಒಂದು ರೀತಿಯಲ್ಲಿ ಚಾರಣ ಪ್ರದೇಶವೂ ಹೌದು. ಮಹದೇಶ್ವರ ಬೆಟ್ಟದಿಂದ 15 ಕಿಲೋಮೀಟರ್ ದೂರ ಇರುವ ನಾಗಮಲೆಗೆ ಕಾಲ್ನಡಿಗೆಯಲ್ಲೇ ಬೆಟ್ಟವನ್ನು ಹತ್ತಿ, ಇಳಿದು ಹೋಗಬೇಕು. ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರು ನಾಗಮಲೆಗು ಹೋಗುವುದು ವಾಡಿಕೆ. ದೇವರ ದರ್ಶನ ಪಡೆಯಲು ಭಕ್ತರು ನಾಗಮಲೆಗೆ ತೆರಳುತ್ತಾರೆಯೇ ಹೊರತು ಯಾರೂ ಸಹ ಟ್ರಕ್ಕಿಂಗ್ ಹೆಸರಿನಲ್ಲಿ ಹೋಗುವುದಿಲ್ಲ. ಆದರೆ, ಅರಣ್ಯ ಇಲಾಖೆ ಇಲ್ಲಿ ಚಾರಣ ನಿಷೇಧಿಸಿರುವುದರಿಂದ ನಾಗಮಲೆಯಲ್ಲಿ ನೆಲೆಸಿರುವ ಮಹದೇಶ್ವರನ ದರ್ಶನಕ್ಕೆ ಬ್ರೇಕ್ ಬಿದ್ದಿದೆ.

ಇನ್ನು ಚಾರಣ ನಿಷೇಧದಿಂದ ತೊಳಸೀಕೆರೆ, ಪಡಿಸಲನತ್ತ, ಇಂಡಿಗನತ್ತ, ನಾಗಮಲೆ ಗ್ರಾಮಸ್ಥರ ಸಂಕಷ್ಟಕ್ಕೆ ಕಾರಣವಾಗಿದೆ. ನಾಗಮಲೆ ಹೋಗುವ ಭಕ್ತರನ್ನ ನಂಬಿ ಅಂಗಡಿ, ಮುಗ್ಗಟ್ಟು ಹಾಗೂ ಜೀಪ್​ಗಳನ್ನು ತಂದಿದ್ದಾರೆ. ಮಹದೇಶ್ವರ ಬೆಟ್ಟದಿಂದ ಜೀಪ್ ಗಳ ಮೂಲಕ ನಾಗಮಲೆಯತ್ತ ಜನರನ್ನು ಕರೆದುಕೊಂಡು ಹೋಗುತ್ತಿದ್ದರು.ಇದೀಗ ಅವರ ಉದ್ಯೋಗ ಕಿತ್ತುಕೊಳ್ಳುವ ಜೊತೆಗೆ ಜನರ ಬದುಕನ್ನು ಮೂರಾಬಟ್ಟೆ ಮಾಡುವ ಕೆಲಸಕ್ಕೆ ಅರಣ್ಯ ಇಲಾಖೆ ಕೈ ಹಾಕಿದೆ. ಬರುವ ಭಕ್ತಾಧಿಗಳನ್ನು ನಂಬಿ ಜೀವನ ಮಾಡುತ್ತಿದ್ದೇವೂ, ಇದೀಗ ಮುಂದೇನು ಎಂದು ದಿಕ್ಕೆ ತೋಚದಂತಾಗಿದೆ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ:ಸದ್ಯಕ್ಕೆ ಚಾರಣಿಗರಿಗೆ ಕುಮಾರಪರ್ವತ ಬಂದ್​; ಆದೇಶ ಉಲ್ಲಂಘಿಸಿದ್ರೆ ಅರಣ್ಯ ಇಲಾಖೆ ಕಠಿಣ ಕ್ರಮದ ಎಚ್ಚರಿಕೆ

ಸದ್ಯಕ್ಕೆ ನಾಗಮಲೆಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದ್ದು, ಭಕ್ತರು ಹಾಗೂ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಚಾರಣಿಗರ ಮೇಲೆ ನಿಗಾಯಿಡಲೂ ಒಂದು ಬುಕ್ಕಿಂಗ್ ಆ್ಯಪ್ ತರಲೂ ಅರಣ್ಯ ಇಲಾಖೆ ಪ್ಲ್ಯಾನ್ ಮಾಡಿದೆ. ಆದ್ರೆ, ಸ್ಥಳೀಯ ಕುಟುಂಬಗಳ ಉದ್ಯೋಗಕ್ಕೆ ಕತ್ತರಿ ಹಾಕಿ ಬದುಕು ಮೂರಾಬಟ್ಟೆ ಮಾಡಲೂ ಹೊರಟಿದೆ. ಇನ್ನಾದರೂ ಎಚ್ಚೆತ್ತು ಅರಣ್ಯ ಇಲಾಖೆ, ಸ್ಥಳೀಯರ ಹಾಗೂ ಭಕ್ತರ ಪರ ನಿಲ್ಲುತ್ತಾ ಎನ್ನುವುದನ್ನು ಕಾದು ನೋಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?