AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ: ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಜೆಡಿಎಸ್​​ನವರು ಯಾರ ಜತೆ ಹೋಗಿದ್ದಾರೆ. ಜೆಡಿಎಸ್​ ಅಂದರೆ ಜಾತ್ಯತೀತ ಅಂತಾರೆ, ಈಗ ಆ ಪರಿಸ್ಥಿತಿ ಇದೆಯಾ? ಮೊದಲು ಜಾತ್ಯತೀತ ಪದವನ್ನು ಜೆಡಿಎಸ್​​ ತೆಗೆದುಹಾಕಬೇಕು. ಜಾತ್ಯತೀತ ಅಂದರೆ ಅದರ ಅರ್ಥವೇನು ಅಂತ ಜೆಡಿಎಸ್​ ಹೇಳಲಿ ಎಂದು ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ: ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Sep 27, 2023 | 3:04 PM

Share

ಚಾಮರಾಜನಗರ, ಸೆಪ್ಟೆಂಬರ್​ 27: ಈಗ ಜೆಡಿಎಸ್​​ನವರು ಯಾರ ಜತೆ ಹೋಗಿದ್ದಾರೆ. ಜೆಡಿಎಸ್​ ಅಂದರೆ ಜಾತ್ಯತೀತ ಅಂತಾರೆ, ಈಗ ಆ ಪರಿಸ್ಥಿತಿ ಇದೆಯಾ? ಮೊದಲು ಜಾತ್ಯತೀತ ಪದವನ್ನು ಜೆಡಿಎಸ್​​ ತೆಗೆದುಹಾಕಬೇಕು. ಜಾತ್ಯತೀತ ಅಂದರೆ ಅದರ ಅರ್ಥವೇನು ಅಂತ ಜೆಡಿಎಸ್​ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಜಿಲ್ಲೆಯ ಹನೂರು ತಾಲೂಕಿನ ಕೋಣನಕೆರೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

2004ರಲ್ಲಿ ವೆಂಕಯ್ಯ ನಾಯ್ಡು ಭೇಟಿಗೆ ಫ್ಲೈಟ್ ಬುಕ್ಕಿಂಗ್​​​ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾನು ಅಡ್ವಾಣಿ ಭೇಟಿಯಾಗಿದ್ದು ನಿಜ, ವೆಂಕಯ್ಯ ನಾಯ್ಡುರನ್ನ ಅಲ್ಲ ಎಂದು ಹೇಳಿದ್ದಾರೆ.

ಮಾನ ಮರ್ಯಾದೆ ಬಿಟ್ಟು 2 ಪಕ್ಷದವರು ಕೂತು ಮಾತಾಡುತ್ತಿದ್ದಾರೆ: ವಾಟಾಳ್ ನಾಗರಾಜ್ 

ಸೆ.29ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್​ ಹಿನ್ನೆಲೆ ಬೆಂಗಳೂರಿನಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್​ ಪ್ರತಿಕ್ರಿಯಿಸಿದ್ದು, ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಮತ್ತು ಹೆಚ್​ಡಿ ಕುಮಾರಸ್ವಾಮಿ ರಾಜಕೀಯಕ್ಕಾಗಿ ಇಬ್ಬರೂ ಒಂದಾಗಿದ್ದಾರೆ.

ಇದನ್ನೂ ಓದಿ: ಅವತ್ತೇ ಅಮಿತ್ ಶಾ​​ ಮಾತಿಗೆ ಒಪ್ಪಿದ್ದರೆ 5 ವರ್ಷ ಸಿಎಂ ಆಗುತ್ತಿದ್ದೆ: ಶಾ ಕರೆ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ

ಮಾನ ಮರ್ಯಾದೆ ಬಿಟ್ಟು 2 ಪಕ್ಷದವರು ಕೂತು ಮಾತಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಮಂತ್ರಿಯಾದ್ಮೇಲೆ ಸರ್ವಾಧಿಕಾರಿಯಾಗಿದ್ದಾರೆ. ತಮಿಳುನಾಡಿನಲ್ಲಿ ಸರ್ಕಾರ ಬೆಂಬಲಿಸುತ್ತೆ ಆದರೆ ನಮ್ಮಲ್ಲಿ ಸುಮ್ಮನಾಗುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಶುಕ್ರವಾರ ಕರ್ನಾಟಕ ಬಂದ್ 100% ಯಶಸ್ವಿಯಾಗಲಿದೆ: ವಾಟಾಳ್ ನಾಗರಾಜ್ 

ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ಟೋಲ್​, ರೈಲು, ಹೆದ್ದಾರಿ, ವಿಮಾನ ಹಾರಾಟ ಬಂದ್ ಆಗಲಿದೆ. ಶುಕ್ರವಾರ ಕರ್ನಾಟಕ ಬಂದ್ 100% ಯಶಸ್ವಿಯಾಗಲಿದೆ. ರಾಜ್ಯಾದ್ಯಂತ ಎಲ್ಲಾ ಸಂಘಟನೆಗಳಿಂದ ಬಂದ್​ಗೆ ಬೆಂಬಲ ಸಿಗುತ್ತಿದೆ. ಶಾಂತಿಯುತವಾಗಿ ಚಳವಳಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:03 pm, Wed, 27 September 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್