AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ: ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಜೆಡಿಎಸ್​​ನವರು ಯಾರ ಜತೆ ಹೋಗಿದ್ದಾರೆ. ಜೆಡಿಎಸ್​ ಅಂದರೆ ಜಾತ್ಯತೀತ ಅಂತಾರೆ, ಈಗ ಆ ಪರಿಸ್ಥಿತಿ ಇದೆಯಾ? ಮೊದಲು ಜಾತ್ಯತೀತ ಪದವನ್ನು ಜೆಡಿಎಸ್​​ ತೆಗೆದುಹಾಕಬೇಕು. ಜಾತ್ಯತೀತ ಅಂದರೆ ಅದರ ಅರ್ಥವೇನು ಅಂತ ಜೆಡಿಎಸ್​ ಹೇಳಲಿ ಎಂದು ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ: ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Sep 27, 2023 | 3:04 PM

Share

ಚಾಮರಾಜನಗರ, ಸೆಪ್ಟೆಂಬರ್​ 27: ಈಗ ಜೆಡಿಎಸ್​​ನವರು ಯಾರ ಜತೆ ಹೋಗಿದ್ದಾರೆ. ಜೆಡಿಎಸ್​ ಅಂದರೆ ಜಾತ್ಯತೀತ ಅಂತಾರೆ, ಈಗ ಆ ಪರಿಸ್ಥಿತಿ ಇದೆಯಾ? ಮೊದಲು ಜಾತ್ಯತೀತ ಪದವನ್ನು ಜೆಡಿಎಸ್​​ ತೆಗೆದುಹಾಕಬೇಕು. ಜಾತ್ಯತೀತ ಅಂದರೆ ಅದರ ಅರ್ಥವೇನು ಅಂತ ಜೆಡಿಎಸ್​ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಜಿಲ್ಲೆಯ ಹನೂರು ತಾಲೂಕಿನ ಕೋಣನಕೆರೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

2004ರಲ್ಲಿ ವೆಂಕಯ್ಯ ನಾಯ್ಡು ಭೇಟಿಗೆ ಫ್ಲೈಟ್ ಬುಕ್ಕಿಂಗ್​​​ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾನು ಅಡ್ವಾಣಿ ಭೇಟಿಯಾಗಿದ್ದು ನಿಜ, ವೆಂಕಯ್ಯ ನಾಯ್ಡುರನ್ನ ಅಲ್ಲ ಎಂದು ಹೇಳಿದ್ದಾರೆ.

ಮಾನ ಮರ್ಯಾದೆ ಬಿಟ್ಟು 2 ಪಕ್ಷದವರು ಕೂತು ಮಾತಾಡುತ್ತಿದ್ದಾರೆ: ವಾಟಾಳ್ ನಾಗರಾಜ್ 

ಸೆ.29ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್​ ಹಿನ್ನೆಲೆ ಬೆಂಗಳೂರಿನಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್​ ಪ್ರತಿಕ್ರಿಯಿಸಿದ್ದು, ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಮತ್ತು ಹೆಚ್​ಡಿ ಕುಮಾರಸ್ವಾಮಿ ರಾಜಕೀಯಕ್ಕಾಗಿ ಇಬ್ಬರೂ ಒಂದಾಗಿದ್ದಾರೆ.

ಇದನ್ನೂ ಓದಿ: ಅವತ್ತೇ ಅಮಿತ್ ಶಾ​​ ಮಾತಿಗೆ ಒಪ್ಪಿದ್ದರೆ 5 ವರ್ಷ ಸಿಎಂ ಆಗುತ್ತಿದ್ದೆ: ಶಾ ಕರೆ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ

ಮಾನ ಮರ್ಯಾದೆ ಬಿಟ್ಟು 2 ಪಕ್ಷದವರು ಕೂತು ಮಾತಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಮಂತ್ರಿಯಾದ್ಮೇಲೆ ಸರ್ವಾಧಿಕಾರಿಯಾಗಿದ್ದಾರೆ. ತಮಿಳುನಾಡಿನಲ್ಲಿ ಸರ್ಕಾರ ಬೆಂಬಲಿಸುತ್ತೆ ಆದರೆ ನಮ್ಮಲ್ಲಿ ಸುಮ್ಮನಾಗುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಶುಕ್ರವಾರ ಕರ್ನಾಟಕ ಬಂದ್ 100% ಯಶಸ್ವಿಯಾಗಲಿದೆ: ವಾಟಾಳ್ ನಾಗರಾಜ್ 

ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ಟೋಲ್​, ರೈಲು, ಹೆದ್ದಾರಿ, ವಿಮಾನ ಹಾರಾಟ ಬಂದ್ ಆಗಲಿದೆ. ಶುಕ್ರವಾರ ಕರ್ನಾಟಕ ಬಂದ್ 100% ಯಶಸ್ವಿಯಾಗಲಿದೆ. ರಾಜ್ಯಾದ್ಯಂತ ಎಲ್ಲಾ ಸಂಘಟನೆಗಳಿಂದ ಬಂದ್​ಗೆ ಬೆಂಬಲ ಸಿಗುತ್ತಿದೆ. ಶಾಂತಿಯುತವಾಗಿ ಚಳವಳಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:03 pm, Wed, 27 September 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ