AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ: ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಜೆಡಿಎಸ್​​ನವರು ಯಾರ ಜತೆ ಹೋಗಿದ್ದಾರೆ. ಜೆಡಿಎಸ್​ ಅಂದರೆ ಜಾತ್ಯತೀತ ಅಂತಾರೆ, ಈಗ ಆ ಪರಿಸ್ಥಿತಿ ಇದೆಯಾ? ಮೊದಲು ಜಾತ್ಯತೀತ ಪದವನ್ನು ಜೆಡಿಎಸ್​​ ತೆಗೆದುಹಾಕಬೇಕು. ಜಾತ್ಯತೀತ ಅಂದರೆ ಅದರ ಅರ್ಥವೇನು ಅಂತ ಜೆಡಿಎಸ್​ ಹೇಳಲಿ ಎಂದು ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ: ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Sep 27, 2023 | 3:04 PM

Share

ಚಾಮರಾಜನಗರ, ಸೆಪ್ಟೆಂಬರ್​ 27: ಈಗ ಜೆಡಿಎಸ್​​ನವರು ಯಾರ ಜತೆ ಹೋಗಿದ್ದಾರೆ. ಜೆಡಿಎಸ್​ ಅಂದರೆ ಜಾತ್ಯತೀತ ಅಂತಾರೆ, ಈಗ ಆ ಪರಿಸ್ಥಿತಿ ಇದೆಯಾ? ಮೊದಲು ಜಾತ್ಯತೀತ ಪದವನ್ನು ಜೆಡಿಎಸ್​​ ತೆಗೆದುಹಾಕಬೇಕು. ಜಾತ್ಯತೀತ ಅಂದರೆ ಅದರ ಅರ್ಥವೇನು ಅಂತ ಜೆಡಿಎಸ್​ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಜಿಲ್ಲೆಯ ಹನೂರು ತಾಲೂಕಿನ ಕೋಣನಕೆರೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

2004ರಲ್ಲಿ ವೆಂಕಯ್ಯ ನಾಯ್ಡು ಭೇಟಿಗೆ ಫ್ಲೈಟ್ ಬುಕ್ಕಿಂಗ್​​​ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾನು ಅಡ್ವಾಣಿ ಭೇಟಿಯಾಗಿದ್ದು ನಿಜ, ವೆಂಕಯ್ಯ ನಾಯ್ಡುರನ್ನ ಅಲ್ಲ ಎಂದು ಹೇಳಿದ್ದಾರೆ.

ಮಾನ ಮರ್ಯಾದೆ ಬಿಟ್ಟು 2 ಪಕ್ಷದವರು ಕೂತು ಮಾತಾಡುತ್ತಿದ್ದಾರೆ: ವಾಟಾಳ್ ನಾಗರಾಜ್ 

ಸೆ.29ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್​ ಹಿನ್ನೆಲೆ ಬೆಂಗಳೂರಿನಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್​ ಪ್ರತಿಕ್ರಿಯಿಸಿದ್ದು, ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಮತ್ತು ಹೆಚ್​ಡಿ ಕುಮಾರಸ್ವಾಮಿ ರಾಜಕೀಯಕ್ಕಾಗಿ ಇಬ್ಬರೂ ಒಂದಾಗಿದ್ದಾರೆ.

ಇದನ್ನೂ ಓದಿ: ಅವತ್ತೇ ಅಮಿತ್ ಶಾ​​ ಮಾತಿಗೆ ಒಪ್ಪಿದ್ದರೆ 5 ವರ್ಷ ಸಿಎಂ ಆಗುತ್ತಿದ್ದೆ: ಶಾ ಕರೆ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ

ಮಾನ ಮರ್ಯಾದೆ ಬಿಟ್ಟು 2 ಪಕ್ಷದವರು ಕೂತು ಮಾತಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಮಂತ್ರಿಯಾದ್ಮೇಲೆ ಸರ್ವಾಧಿಕಾರಿಯಾಗಿದ್ದಾರೆ. ತಮಿಳುನಾಡಿನಲ್ಲಿ ಸರ್ಕಾರ ಬೆಂಬಲಿಸುತ್ತೆ ಆದರೆ ನಮ್ಮಲ್ಲಿ ಸುಮ್ಮನಾಗುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಶುಕ್ರವಾರ ಕರ್ನಾಟಕ ಬಂದ್ 100% ಯಶಸ್ವಿಯಾಗಲಿದೆ: ವಾಟಾಳ್ ನಾಗರಾಜ್ 

ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ಟೋಲ್​, ರೈಲು, ಹೆದ್ದಾರಿ, ವಿಮಾನ ಹಾರಾಟ ಬಂದ್ ಆಗಲಿದೆ. ಶುಕ್ರವಾರ ಕರ್ನಾಟಕ ಬಂದ್ 100% ಯಶಸ್ವಿಯಾಗಲಿದೆ. ರಾಜ್ಯಾದ್ಯಂತ ಎಲ್ಲಾ ಸಂಘಟನೆಗಳಿಂದ ಬಂದ್​ಗೆ ಬೆಂಬಲ ಸಿಗುತ್ತಿದೆ. ಶಾಂತಿಯುತವಾಗಿ ಚಳವಳಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:03 pm, Wed, 27 September 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ