ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ: ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಜೆಡಿಎಸ್​​ನವರು ಯಾರ ಜತೆ ಹೋಗಿದ್ದಾರೆ. ಜೆಡಿಎಸ್​ ಅಂದರೆ ಜಾತ್ಯತೀತ ಅಂತಾರೆ, ಈಗ ಆ ಪರಿಸ್ಥಿತಿ ಇದೆಯಾ? ಮೊದಲು ಜಾತ್ಯತೀತ ಪದವನ್ನು ಜೆಡಿಎಸ್​​ ತೆಗೆದುಹಾಕಬೇಕು. ಜಾತ್ಯತೀತ ಅಂದರೆ ಅದರ ಅರ್ಥವೇನು ಅಂತ ಜೆಡಿಎಸ್​ ಹೇಳಲಿ ಎಂದು ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ: ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ
Edited By:

Updated on: Sep 27, 2023 | 3:04 PM

ಚಾಮರಾಜನಗರ, ಸೆಪ್ಟೆಂಬರ್​ 27: ಈಗ ಜೆಡಿಎಸ್​​ನವರು ಯಾರ ಜತೆ ಹೋಗಿದ್ದಾರೆ. ಜೆಡಿಎಸ್​ ಅಂದರೆ ಜಾತ್ಯತೀತ ಅಂತಾರೆ, ಈಗ ಆ ಪರಿಸ್ಥಿತಿ ಇದೆಯಾ? ಮೊದಲು ಜಾತ್ಯತೀತ ಪದವನ್ನು ಜೆಡಿಎಸ್​​ ತೆಗೆದುಹಾಕಬೇಕು. ಜಾತ್ಯತೀತ ಅಂದರೆ ಅದರ ಅರ್ಥವೇನು ಅಂತ ಜೆಡಿಎಸ್​ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಜಿಲ್ಲೆಯ ಹನೂರು ತಾಲೂಕಿನ ಕೋಣನಕೆರೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

2004ರಲ್ಲಿ ವೆಂಕಯ್ಯ ನಾಯ್ಡು ಭೇಟಿಗೆ ಫ್ಲೈಟ್ ಬುಕ್ಕಿಂಗ್​​​ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾನು ಅಡ್ವಾಣಿ ಭೇಟಿಯಾಗಿದ್ದು ನಿಜ, ವೆಂಕಯ್ಯ ನಾಯ್ಡುರನ್ನ ಅಲ್ಲ ಎಂದು ಹೇಳಿದ್ದಾರೆ.

ಮಾನ ಮರ್ಯಾದೆ ಬಿಟ್ಟು 2 ಪಕ್ಷದವರು ಕೂತು ಮಾತಾಡುತ್ತಿದ್ದಾರೆ: ವಾಟಾಳ್ ನಾಗರಾಜ್ 

ಸೆ.29ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್​ ಹಿನ್ನೆಲೆ ಬೆಂಗಳೂರಿನಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್​ ಪ್ರತಿಕ್ರಿಯಿಸಿದ್ದು, ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಮತ್ತು ಹೆಚ್​ಡಿ ಕುಮಾರಸ್ವಾಮಿ ರಾಜಕೀಯಕ್ಕಾಗಿ ಇಬ್ಬರೂ ಒಂದಾಗಿದ್ದಾರೆ.

ಇದನ್ನೂ ಓದಿ: ಅವತ್ತೇ ಅಮಿತ್ ಶಾ​​ ಮಾತಿಗೆ ಒಪ್ಪಿದ್ದರೆ 5 ವರ್ಷ ಸಿಎಂ ಆಗುತ್ತಿದ್ದೆ: ಶಾ ಕರೆ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ

ಮಾನ ಮರ್ಯಾದೆ ಬಿಟ್ಟು 2 ಪಕ್ಷದವರು ಕೂತು ಮಾತಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಮಂತ್ರಿಯಾದ್ಮೇಲೆ ಸರ್ವಾಧಿಕಾರಿಯಾಗಿದ್ದಾರೆ. ತಮಿಳುನಾಡಿನಲ್ಲಿ ಸರ್ಕಾರ ಬೆಂಬಲಿಸುತ್ತೆ ಆದರೆ ನಮ್ಮಲ್ಲಿ ಸುಮ್ಮನಾಗುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಶುಕ್ರವಾರ ಕರ್ನಾಟಕ ಬಂದ್ 100% ಯಶಸ್ವಿಯಾಗಲಿದೆ: ವಾಟಾಳ್ ನಾಗರಾಜ್ 

ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ಟೋಲ್​, ರೈಲು, ಹೆದ್ದಾರಿ, ವಿಮಾನ ಹಾರಾಟ ಬಂದ್ ಆಗಲಿದೆ. ಶುಕ್ರವಾರ ಕರ್ನಾಟಕ ಬಂದ್ 100% ಯಶಸ್ವಿಯಾಗಲಿದೆ. ರಾಜ್ಯಾದ್ಯಂತ ಎಲ್ಲಾ ಸಂಘಟನೆಗಳಿಂದ ಬಂದ್​ಗೆ ಬೆಂಬಲ ಸಿಗುತ್ತಿದೆ. ಶಾಂತಿಯುತವಾಗಿ ಚಳವಳಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:03 pm, Wed, 27 September 23

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us