ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ: ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

| Updated By: ಗಂಗಾಧರ​ ಬ. ಸಾಬೋಜಿ

Updated on: Sep 27, 2023 | 3:04 PM

ಜೆಡಿಎಸ್​​ನವರು ಯಾರ ಜತೆ ಹೋಗಿದ್ದಾರೆ. ಜೆಡಿಎಸ್​ ಅಂದರೆ ಜಾತ್ಯತೀತ ಅಂತಾರೆ, ಈಗ ಆ ಪರಿಸ್ಥಿತಿ ಇದೆಯಾ? ಮೊದಲು ಜಾತ್ಯತೀತ ಪದವನ್ನು ಜೆಡಿಎಸ್​​ ತೆಗೆದುಹಾಕಬೇಕು. ಜಾತ್ಯತೀತ ಅಂದರೆ ಅದರ ಅರ್ಥವೇನು ಅಂತ ಜೆಡಿಎಸ್​ ಹೇಳಲಿ ಎಂದು ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ: ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ
Follow us on

ಚಾಮರಾಜನಗರ, ಸೆಪ್ಟೆಂಬರ್​ 27: ಈಗ ಜೆಡಿಎಸ್​​ನವರು ಯಾರ ಜತೆ ಹೋಗಿದ್ದಾರೆ. ಜೆಡಿಎಸ್​ ಅಂದರೆ ಜಾತ್ಯತೀತ ಅಂತಾರೆ, ಈಗ ಆ ಪರಿಸ್ಥಿತಿ ಇದೆಯಾ? ಮೊದಲು ಜಾತ್ಯತೀತ ಪದವನ್ನು ಜೆಡಿಎಸ್​​ ತೆಗೆದುಹಾಕಬೇಕು. ಜಾತ್ಯತೀತ ಅಂದರೆ ಅದರ ಅರ್ಥವೇನು ಅಂತ ಜೆಡಿಎಸ್​ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಜಿಲ್ಲೆಯ ಹನೂರು ತಾಲೂಕಿನ ಕೋಣನಕೆರೆ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಬಿ ಟೀಮ್ ಆಗಿದ್ದರೆ 5 ವರ್ಷ ಸಿಎಂ ಆಗಿರುತ್ತಿದೆ ಎಂಬ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

2004ರಲ್ಲಿ ವೆಂಕಯ್ಯ ನಾಯ್ಡು ಭೇಟಿಗೆ ಫ್ಲೈಟ್ ಬುಕ್ಕಿಂಗ್​​​ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾನು ಅಡ್ವಾಣಿ ಭೇಟಿಯಾಗಿದ್ದು ನಿಜ, ವೆಂಕಯ್ಯ ನಾಯ್ಡುರನ್ನ ಅಲ್ಲ ಎಂದು ಹೇಳಿದ್ದಾರೆ.

ಮಾನ ಮರ್ಯಾದೆ ಬಿಟ್ಟು 2 ಪಕ್ಷದವರು ಕೂತು ಮಾತಾಡುತ್ತಿದ್ದಾರೆ: ವಾಟಾಳ್ ನಾಗರಾಜ್ 

ಸೆ.29ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್​ ಹಿನ್ನೆಲೆ ಬೆಂಗಳೂರಿನಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್​ ಪ್ರತಿಕ್ರಿಯಿಸಿದ್ದು, ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಮತ್ತು ಹೆಚ್​ಡಿ ಕುಮಾರಸ್ವಾಮಿ ರಾಜಕೀಯಕ್ಕಾಗಿ ಇಬ್ಬರೂ ಒಂದಾಗಿದ್ದಾರೆ.

ಇದನ್ನೂ ಓದಿ: ಅವತ್ತೇ ಅಮಿತ್ ಶಾ​​ ಮಾತಿಗೆ ಒಪ್ಪಿದ್ದರೆ 5 ವರ್ಷ ಸಿಎಂ ಆಗುತ್ತಿದ್ದೆ: ಶಾ ಕರೆ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ

ಮಾನ ಮರ್ಯಾದೆ ಬಿಟ್ಟು 2 ಪಕ್ಷದವರು ಕೂತು ಮಾತಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಮಂತ್ರಿಯಾದ್ಮೇಲೆ ಸರ್ವಾಧಿಕಾರಿಯಾಗಿದ್ದಾರೆ. ತಮಿಳುನಾಡಿನಲ್ಲಿ ಸರ್ಕಾರ ಬೆಂಬಲಿಸುತ್ತೆ ಆದರೆ ನಮ್ಮಲ್ಲಿ ಸುಮ್ಮನಾಗುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಶುಕ್ರವಾರ ಕರ್ನಾಟಕ ಬಂದ್ 100% ಯಶಸ್ವಿಯಾಗಲಿದೆ: ವಾಟಾಳ್ ನಾಗರಾಜ್ 

ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಲಿದ್ದು, ಟೋಲ್​, ರೈಲು, ಹೆದ್ದಾರಿ, ವಿಮಾನ ಹಾರಾಟ ಬಂದ್ ಆಗಲಿದೆ. ಶುಕ್ರವಾರ ಕರ್ನಾಟಕ ಬಂದ್ 100% ಯಶಸ್ವಿಯಾಗಲಿದೆ. ರಾಜ್ಯಾದ್ಯಂತ ಎಲ್ಲಾ ಸಂಘಟನೆಗಳಿಂದ ಬಂದ್​ಗೆ ಬೆಂಬಲ ಸಿಗುತ್ತಿದೆ. ಶಾಂತಿಯುತವಾಗಿ ಚಳವಳಿ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:03 pm, Wed, 27 September 23