ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ನೀಡಿದ ಸ್ನೇಹಮಹಿ ಕೃಷ್ಣಗೂ ಸಂಕಷ್ಟ..!

ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ನೀಡಿರುವ ಸ್ನೇಹಮಹಿಕೃಷ್ಣರ ವಿರುದ್ದವೇ ವಂಚನೆ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ ಇಂದು ಚಾಮರಾಜನಗರ ನ್ಯಾಯಾಲಯಕ್ಕೆ ಭೇಟಿ ನೀಡಿ ವಿಚಾರಣೆ ಎದುರಿಸಿದ್ದಾರೆ. ಅಸಲಿಗೆ ಇವರ ವಿರುದ್ದ ದಾಖಲಾಗಿರುವ ವಂಚನೆ ಪ್ರಕರಣ ಆದರೂ ಏನು ಅಂತೀರಾ ಈ ಸ್ಟೋರಿ ಓದಿ.

ಸಿಎಂ ಸಿದ್ದರಾಮಯ್ಯ ವಿರುದ್ದ ದೂರು ನೀಡಿದ ಸ್ನೇಹಮಹಿ ಕೃಷ್ಣಗೂ ಸಂಕಷ್ಟ..!
ಸ್ನೇಹಮಹಿ ಕೃಷ್ಣ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 27, 2024 | 10:27 PM

ಚಾಮರಾಜನಗರ, ಸೆ.27: ಸಿಎಂ ಸಿದ್ದರಾಮಯ್ಯ ವಿರುದ್ದ ಕೇಳಿ ಬಂದಿರುವ ಮುಡಾ ಹಗರಣ ಕೆಲ ತಿಂಗಳಿಂದ ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಅದರಂತೆ ಸಿಎಂ ವಿರುದ್ದ ದೂರು ನೀಡಿ ಕೊನೆಗೂ ಲೋಕಾಯುಕ್ತದಲ್ಲಿ ಎಫ್ ಐ ಆರ್ ದಾಖಲಾಗಿದೆ. ಈ ಪ್ರಕರಣದ ದೂರುದಾರ ಸ್ನೇಹಮಹಿ ಕೃಷ್ಣ(Snehamayi Krishna)ರವರ ವಿರುದ್ದವೇ ಈಗ ವಂಚನೆ ಆರೋಪ ಕೇಳಿ ಬಂದಿದೆ. ತನ್ನ ಸ್ನೇಹಿತ ಕರುಣಾಕರ್​ಗೆ 3 ಲಕ್ಷ ಹಣವನ್ನ ಸಾಲ ಪಡೆದು ಈಗ ವಂಚನೆ ಮಾಡಿದ್ದಾರೆಂದು ದೂರು ದಾಖಲಾಗಿದ್ದು, ಈ ಹಿನ್ನಲೆ ಇಂದು ಸ್ನೇಹಮಹಿ ಕೃಷ್ಣ ನ್ಯಾಯಾಲಯಕ್ಕೆ ಹಾಜರಾಗಿ ವಿಚಾರಣೆಯನ್ನ ಎದುರಿಸಿದ್ದಾರೆ.

ಅಸಲಿಗೆ ಕರುಣಾಕರ್ ವಿರುದ್ದ ಮೈಸೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಈ ವಿಚಾರವಾಗಿ ಸ್ನೇಹಮಹಿಕೃಷ್ಣರೇ ಕರುಣಾಕರ್​ಗೆ ಜಾಮೀನು ಕೊಡಿಸಿದ್ದರು. ಅದಾದ ಬಳಿಕ 50 ಸಾವಿರದಂತೆ ಒಟ್ಟು 3 ಲಕ್ಷ ಹಣವನ್ನ ಸಾಲದ ರೂಪದಲ್ಲಿ ನೀಡಿದ್ದರು. ಸಾಲ ಪಡೆದ ಬಳಿಕ ಪ್ರೊನೋಟ್ ಸಹ ಬರೆದು ಕೊಟ್ಟಿದ್ದರು. ಇತ್ತ ಬಡ್ಡಿಯೂ ನೀಡದೆ ಅತ್ತ ಹಣವನ್ನು ಹಿಂತಿರುಗಿಸದೆ ವಂಚನೆ ಮಾಡಿದ್ದಾರೆಂದು ಕರುಣಾಕರ್ ಈಗ ನ್ಯಾಯಾಲಯ ಮೆಟ್ಟಿಲೇರಿದ್ದು, ಇಂದು ಚಾಮರಾಜನಗರದ ನ್ಯಾಯಾಲಯಕ್ಕೆ ಹಾಜರಾಗಿ ವಿಚಾರಣೆಯನ್ನ ಎದುರಿಸಿದ್ದಾರೆ.

ಇದನ್ನೂ ಓದಿ:ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR: ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್

ಆದ್ರೆ, ಸ್ನೇಹಮಹಿಕೃಷ್ಣರ ವಾದವೇ ಬೇರೆ. ನಾನು ಪಡೆದಿದ್ದು ಕೇವಲ 50 ಸಾವಿರ ಹಣವಷ್ಟೇ ಬೇಕಂತಲೆ ಕರುಣಾಕರ್ ನನ್ನ ವಿರುದ್ದ ಸುಳ್ಳು ದೂರು ನೀಡಿದ್ದು, ನಾನು ಕಾನೂನು ಹೋರಾಟ ಮುಂದುವರೆಸುತ್ತೇನೆ ಎಂದು ಸಮರ್ಥಿಸಿಕೊಂಡಿದ್ದಾರೆ. ಒಟ್ಟಾರೆ ಸಿಎಂ ವಿರುದ್ದವೇ ದೂರು ನೀಡಿ ಸುದ್ದಿಯಲ್ಲಿದ್ದ ಸ್ನೇಹಮಹಿಕೃಷ್ಣರ ವಿರುದ್ದ ವಂಚನೆ ಆರೋಪ ಕೇಳಿ ಬಂದಿದ್ದು, ಸಾಕಷ್ಟು ಹಲ್ ಚಲ್ ಸೃಷ್ಟಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us