AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರ ಬೆಟ್ಟದಲ್ಲಿ ಮೆಟ್ಟಿಲು ನಿರ್ಮಾಣ ಕಾಮಗಾರಿ ಸ್ಥಗಿತ: ಪಾದಯಾತ್ರೆ ಮೂಲಕ ನಡೆದು ಬರುವ ಭಕ್ತರಿಗೆ ಶಾಕ್

ಅಂದಾಜು 25 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಟ್ಟಿಲುಗಳ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ತಾಳ ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೂ 7 ಕಿ.ಮೀ ಮೆಟ್ಟಿಲು ನಿರ್ಮಾಣಕ್ಕೆ ಕಾಮಗಾರಿ ಆರಂಭವಾಗಿತ್ತು. ಆದ್ರೆ ಇದೀಗಾ ಏಕಾಏಕಿ ಮೆಟ್ಟಿಲು ನಿರ್ಮಾಣ ಕಾಮಗಾರಿ ಸ್ಟಾಪ್ ಆಗಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಮೆಟ್ಟಿಲು ನಿರ್ಮಾಣ ಕಾಮಗಾರಿ ಸ್ಥಗಿತ: ಪಾದಯಾತ್ರೆ ಮೂಲಕ ನಡೆದು ಬರುವ ಭಕ್ತರಿಗೆ ಶಾಕ್
ಮಲೆ ಮಹದೇಶ್ವರ ದೇವಾಲಯ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Oct 25, 2023 | 10:10 PM

Share

ಚಾಮರಾಜನಗರ, ಅಕ್ಟೋಬರ್ 25: 77 ಮಲೆಯ ಒಡೆಯ ಮಲೆ ಮಹದೇಶ್ವರನ (Male Mahadeshwara Hills) ದರ್ಶನಕ್ಕೆ ಭಕ್ತರು ಗುಂಪು ಗುಂಪಾಗಿ ನಡೆದು ಹೋಗ್ತಾರೆ. ಹರಕೆ ಹೊತ್ತು ನಡೆದು ಹೋಗುವ ಭಕ್ತರೇ ಸಂಖ್ಯೆಯೇ ಹೆಚ್ಚು. ಅದರಲ್ಲೂ ದಟ್ಟ ಕಾನನದ ನಡುವೆ ಕಲ್ಲು, ಮುಳ್ಳು ಚುಚ್ಚುವ ನೋವಿನ ನಡುವೆಯೂ ದರ್ಶನಕ್ಕೆ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸ್ತಿದ್ದಾರೆ. ಇದನ್ನೆಲ್ಲಾ ಅರಿತ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಭಕ್ತರಿಗೆ ಹೊಸದಾಗಿ ಮೆಟ್ಟಿಲು ನಿರ್ಮಿಸುವ ಕೆಲಸಕ್ಕೆ ಮುಂದಾಗಿತ್ತು. ಇದೀಗ ಏಕಾಏಕಿ ಮೆಟ್ಟಿಲು ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿದೆ.

ಹೌದು, ಅದು ರಾಜ್ಯದ ದೇಗುಲಗಳ್ಳಲ್ಲೇ ಅತಿ ಹೆಚ್ಚು ಆದಾಯ ಬರುವ ಎರಡನೇ ದೇವಾಲಯ. ಅದು ಬೇರಾವುದೂ ಅಲ್ಲ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ದೇವಾಲಯ. ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಭಕ್ತರು ಭೇಟಿ ನೀಡಿ‌ ಮಾದಪ್ಪನ ದರ್ಶನ ಪಡೆದು ಧನ್ಯರಾಗುತ್ತಾರೆ. ಅದರಲ್ಲೂ ದೀಪಾವಳಿ, ಶಿವರಾತ್ರಿ ಹಬ್ಬದ ವೇಳೆಯಲ್ಲಿ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸ್ತಾರೆ. ಈ ಸಮಯದಲ್ಲಿ ಭಕ್ತರು ಹರಕೆ ಮಾಡಿಕೊಂಡು ಮಂಡ್ಯ,ಮೈಸೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಂದ ಮಲೆ ಮಹದೇಶ್ವರ ದೇವಸ್ಥಾನಕ್ಕೆ ದಟ್ಟ ಕಾಡಿನ ನಡುವೆ ಕಾಲ್ನಡಿಗೆಯಲ್ಲಿ ಸಾಗುತ್ತಾರೆ. ಕಾಡಿನ ನಡುವೆ ಕೆಲವು ಕಡೆ ದುರ್ಗಮ ಹಾದಿಗಳಿವೆ. ಈ ಹಾದಿಯಲ್ಲಿ ಭಕ್ತರು ನಡೆಯಲು ಸಾಕಷ್ಟು ಪ್ರಯಾಸ ಪಡುತ್ತಿದ್ರು.‌ ಇದನ್ನೆಲ್ಲಾ ಗಮನಿಸಿದ ಮಲೆ ಮಹದೇಶ್ವರ ಪ್ರಾಧಿಕಾರದವರು ಕಾಡಿನ ನಡುವೆ ದುರ್ಗಮ ಹಾದಿ ಇರುವ ಕಡೆ ಮೆಟ್ಟಿಲುಗಳನ್ನು ನಿರ್ಮಾಣ ಮಾಡೋ ಕೆಲಸಕ್ಕೆ ಮುಂದಾಗಿತ್ತು. ಅಂದಾಜು 25 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಟ್ಟಿಲುಗಳ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ತಾಳ ಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದವರೆಗೂ 7 ಕಿ.ಮೀ ಮೆಟ್ಟಿಲು ನಿರ್ಮಾಣಕ್ಕೆ ಕಾಮಗಾರಿ ಆರಂಭವಾಗಿತ್ತು. ಆದ್ರೆ ಇದೀಗಾ ಏಕಾಏಕಿ ಮೆಟ್ಟಿಲು ನಿರ್ಮಾಣ ಕಾಮಗಾರಿ ಸ್ಟಾಪ್ ಆಗಿದೆ.

ಇದನ್ನೂ ಓದಿ: ಮತ್ತೆ ಬದಲಾಗುತ್ತಾ ಜಿಲ್ಲೆಯ ಹೆಸರು: ಬಸವೇಶ್ವರ ಅಥವಾ ಬಸವ ಜಿಲ್ಲೆಯಾಗುತ್ತಾ ವಿಜಯಪುರ?

ಮೆಟ್ಟಿಲು ನಿರ್ಮಾಣ ಕಾಮಗಾರಿ ಬಗ್ಗೆ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿಯವರನ್ನು ಪ್ರಶ್ನಸಿದ್ರೆ, ಶೇ 60 ರಷ್ಟು ಕಾಮಗಾರಿ ಮುಗಿದಿದೆ. ಆದ್ರೆ ಸದ್ಯ ಮೆಟ್ಟಿಲು ಕಾಮಗಾರಿ ನಿಂತು ಹೋಗಿದೆ. ಗುತ್ತಿಗೆ ಪಡೆದಿದ್ದ ವ್ಯಕ್ತಿ ಕೆಲಸ ನಿಲ್ಲಿಸಿದ್ದಾನೆ. ಸಿಎಂ ಸಿದ್ದರಾಮಯ್ಯ ಗಮನಕ್ಕೂ ಕೂಡ ಬಂದಿದೆ. ಇದೀಗ ಮತ್ತೆ ಟೆಂಡರ್ ಕರೆದು ಬೇರೊಬ್ಬ ಗುತ್ತಿಗೆದಾರನಿಗೆ ಕಾಮಗಾರಿ ಕೆಲಸ ವಹಿಸ್ತೇವೆ ಅಂತಾ ಉತ್ತರಿಸ್ತಾರೆ. ಶೀಘ್ರವೇ ಕೆಲಸ ಮುಗಿಸಲು ಕ್ರಮ ವಹಿಸ್ತೇವೆ ಅಂತಾರೆ ಅಧಿಕಾರಿಗಳು.

ಒಟ್ಟಿನಲ್ಲಿ ಶಿವರಾತ್ರಿ, ದೀಪಾವಳಿ ವೇಳೆ ಮಲೆ ಮಾದಪ್ಪನ ದರ್ಶನಕ್ಕೆ ನಡೆದು ಭಕ್ತ ಸಾಗರವೇ ಬರುತ್ತೆ.ಈ ಬಾರಿಯಾದರೂ ಮೆಟ್ಟಿಲುಗಳ ಮೇಲೆ ನಡೆಯುವ ಭಕ್ತರ ಆಸೆಗೆ ಪ್ರಾಧಿಕಾರ ತಣ್ಣೀರು ಎರಚಿದೆ. ಈ ಬಾರಿಯೂ ಕಲ್ಲುಮುಳ್ಳುಗಳ ನಡುವೆ ಏಳು ಮಲೆ ಒಡೆಯನ ದರ್ಶನ ಪಡೆಯುವ ಸ್ಥಿತಿ ಬಂದಿದೆ.ಇನ್ನಾದ್ರೂ ಪ್ರಾಧಿಕಾರ ಭಕ್ತರ ಸಂಕಷ್ಟಕ್ಕೆ ಧಾವಿಸುತ್ತಾ, ಕಾಮಗಾರಿ ಬೇಗ ಆರಂಬಿಸಿ ಮುಗಿಸುತ್ತಾ ಅನ್ನೋದನ್ನು ಕಾದುನೋಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್