AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಂಚಿನ ಸೋಲಿಗ, ಬುಡಕಟ್ಟು ಜನಾಂಗದ ಡ್ರಾಪ್ ಔಟ್ ವಿದ್ಯಾರ್ಥಿಗಳಿಗಾಗಿ ಕೈಯಲ್ಲಿ ಪಠ್ಯ ಪುಸ್ತಕ ಹಿಡಿದ ಶಿಕ್ಷಕ ವರ್ಗ

SSLC ಡ್ರಾಪ್ ಔಟ್ ಆದ 30 ಮಂದಿ ಬುಡಕಟ್ಟು ವಿದ್ಯಾರ್ಥಿಗಳನ್ನು ದತ್ತು ಪಡೆದು ವಿಶೇಷ ತರಬೇತಿ ನೀಡುತ್ತಿರುವ ಚಾಮರಾಜನಗರ ಜಿಲ್ಲಾಡಳಿತ. ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಪಾಠ ಹೇಳಿ ಕೊಡಲು ಮುಂದಾದ ಶಿಕ್ಷಕರು.

ಕಾಡಂಚಿನ ಸೋಲಿಗ, ಬುಡಕಟ್ಟು ಜನಾಂಗದ ಡ್ರಾಪ್ ಔಟ್ ವಿದ್ಯಾರ್ಥಿಗಳಿಗಾಗಿ ಕೈಯಲ್ಲಿ ಪಠ್ಯ ಪುಸ್ತಕ ಹಿಡಿದ ಶಿಕ್ಷಕ ವರ್ಗ
ಕಾಡಂಚಿನ ವಿದ್ಯಾರ್ಥಿಗಳಿಗಾಗಿ ಕೈಯಲ್ಲಿ ಪಠ್ಯಪುಸ್ತಕ ಹಿಡಿದ ಶಿಕ್ಷಕರು
ಸೂರಜ್ ಪ್ರಸಾದ್ ಎಸ್.ಎನ್
| Edited By: ಸಾಧು ಶ್ರೀನಾಥ್​|

Updated on: Dec 07, 2023 | 4:53 PM

Share

ಚಾಮರಾಜನಗರ ಜಿಲ್ಲಾಡಳಿತ ನೂತನ ಪ್ರಯತ್ನಕ್ಕೆ ಮುಂದಾಗಿದೆ. 10ನೇ ತರಗತಿ (sslc) ಡ್ರಾಪ್ ಔಟ್ ಆದ ಬುಡಕಟ್ಟು ಜನಾಂಗದ (Soliga, tribal) ವಿದ್ಯಾರ್ಥಿಗಳಿಗೆ ದತ್ತು ಪಡೆದ ಜಿಲ್ಲಾಡಳಿತ ಉಚಿತ ವಸತಿ ಹಾಗೂ ತರಬೇತಿ ನೀಡುವ ಮೂಲಕ ಶೈಕ್ಷಣಿಕ ಕ್ರಾಂತಿಗೆ ಮುಂದಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ. ಕೈಯಲ್ಲಿ ಪಠ್ಯ ಪುಸ್ತಕ ಹಿಡಿದು ಕಲಿಕೆ ನಡೆಸುತ್ತಿರುವ ವಿದ್ಯಾರ್ಥಿಗಳು.. ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಪಾಠ ಹೇಳಿ ಕೊಡುತ್ತಿರುವ ಶಿಕ್ಷಕರು. ಶಿಕ್ಷಕರು ಯಾವ ರೀತಿ ತರಬೇತಿ ನೀಡುತ್ತಿದ್ದಾರೆಂದು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು. ಈ ಎಲ್ಲಾ ವಿದ್ಯಮಾನಗಳು ಕಣ್ಣಿಗೆ ರಾಚಿದ್ದು ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಹರದನಹಳ್ಳಿ ಗ್ರಾಮದಲ್ಲಿ (haradanahalli in chamrajnagar taluk).

ಹೌದು ಈ ರೀತಿ ಕೈ ಪಠ್ಯ ಹಿಡಿದು ಶಿಕ್ಷಕರು ಹೇಳಿ ಕೊಡುತ್ತಿರುವ ಪಾಠವನ್ನ ಕೇಳುತ್ತಿರುವ ಈ ವಿದ್ಯಾರ್ಥಿಗಳು ಮತ್ಯಾರು ಅಲ್ಲಾ ಕಾಡಂಚಿನ ಪ್ರದೇಶದಲ್ಲಿ ವಾಸವಿರುವ ಸೋಲಿಗ ಹಾಗೂ ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳು. ವ್ಯಾಸಾಂಗ ಮಾಡಲು ಹಣಕಾಸಿನ ಸಮಸ್ಯೆಯಿಂದ 10ನೇ ತರಗತಿಯನ್ನ ಬಿಟ್ಟು ಕೂಲಿ ನಾಲಿ ಮಾಡುತ್ತಿದ್ದ 30 ವಿದ್ಯಾರ್ಥಿಗಳನ್ನ ಜಿಲ್ಲಾಡಳಿತ ಗುರುತಿಸಿದ್ದು ಶಿಕ್ಷಣದಿಂದ ವಂಚಿತರಾದ ವಿದ್ಯಾರ್ಥಿಗಳನ್ನ ಆಯ್ದು ಅಂತಹವರಿಗೆ ಜಿಲ್ಲಾಡಳಿತ ವತಿಯಿಂದ ಉಚಿತ ವಸತಿ ಹಾಗೂ ತರಬೇತಿ ನೀಡಲಾಗುತ್ತಿದೆ.

ಚಾಮರಾಜನಗರ ಜಿಲ್ಲೆ ಶೇಕಡ 52 ರಷ್ಟು ಅರಣ್ಯ ಭೂಮಿಯನ್ನ ಹೊಂದಿದ್ದು 42 ರಷ್ಟು ಶೇಕಡ ಭೂ ಪ್ರದೇಶವನ್ನ ಹೊಂದಿದೆ. ಇದರಲ್ಲಿ ಹನೂರು ಗುಂಡ್ಲುಪೇಟೆ ಭಾಗದಲ್ಲಿ ಅತಿ ಹೆಚ್ಚಾಗಿ ಸೋಲಿಗ, ಬುಡಕಟ್ಟು, ಕಾಡು ಕುರುಬರ ಹಾಗೂ ಬೆಟ್ಟ ಕುರುಬರು ವಾಸವಾಗಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಈ ಜನಾಂಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ.

Also Read: ಉಡುಪಿ ಜಿಲ್ಲೆಯಲ್ಲಿ ಮಳೆ ಕಡಿಮೆ, ಬರಿದಾಗುತ್ತಿದೆ ಜೀವ ನದಿ ವಾರಾಹಿ, ಮುಂದಿನ ದಿನಗಳು ಹೇಗಪ್ಪಾ ಎಂಬುದು ಸ್ಥಳೀಯರ ಆತಂಕದ ಪ್ರಶ್ನೆ

ಇಂತಹ ಜನಾಂಗದ 10ನೇ ತರಗತಿ ಅನುತ್ತೀರ್ಣಗೊಂಡ ಹಾಗೂ 10ನೇ ತರಗತಿ ತ್ಯಜಿಸಿದ 110 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು ಅಂತ ವಿದ್ಯಾರ್ಥಿಗಳನ್ನ ಜಿಲ್ಲಾಡಳಿತ ಗುರುತಿಸಿದೆ. ಶೈಕ್ಷಣಿಕವಾಗಿ ಹಿಂದುಳಿದ ಇಂತಹ ವಿದ್ಯಾರ್ಥಿಗಳನ್ನ ಗುರುತಿಸಿರುವ ಜಿಲ್ಲಾಡಳಿತ ಮೊದಲ ಹಂತದಲ್ಲಿ 30 ವಿದ್ಯಾರ್ಥಿಗಳನ್ನ ದತ್ತು ಪಡೆದು ಅಂತಹ ವಿದ್ಯಾರ್ಥಿಗಳಿಗೆ ಉಚಿತ ವಸತಿ ಹಾಗೂ ಶಿಕ್ಷಣ ನೀಡುವ ಮೂಲಕ 10ನೇ ತರಗತಿಯ ತರಬೆತಿ ನೀಡಲಾಗುತ್ತಿದೆ.

ಸದ್ಯ ಜಿಲ್ಲಾಡಳಿತದ ಕಾರ್ಯ ವೈಖರಿ ಸಾಕಷ್ಟು ಜನಮನ್ನಣೆಗೆ ಪಾತ್ರವಾಗಿದೆ. ಬುಡಕಟ್ಟು ಸೋಲಿಗ ಮಕ್ಕಳಿಗೆ ಶೈಕ್ಷಣಿಕವಾಗಿ ಬಲ ತುಂಬಲು ಮುಂದಾಗಿದೆ. ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸಕ್ಕೆ ಫುಲ್ ಸ್ಟಾಪ್ ಇಟ್ಟ ಇಂತ ಮಕ್ಕಳ ಭವಿಷ್ಯ ಉಜ್ವಲವಾಗಲು ಜಿಲ್ಲಾಡಳಿತ ಮುಂದಾಗಿದ್ದು ಶಿಕ್ಷಣದಿಂದ ವಂಚಿತವಾದ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ಹೊಸ ಆಶಾಕಿರಣವಾಗಿದ್ದು, ಜನ ಮನ್ನಣೆಗೆ ಪಾತ್ರವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ