AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕಾರ್ಯಾಚರಣೆಯಲ್ಲಿ ಸೆರೆ ಹಿಡಿಯಲಾಗಿದ್ದ ಆನೆ ಬಂಡೀಪುರದ ರಾಮಾಪುರ ಬಿಡಾರದಲ್ಲಿ ಸಾವು

ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್ ಕೊಂಬನ್ ಎಂಬ ಆನೆಗೆ ಅರಣ್ಯ ಇಲಾಖೆ ಅಧಿಕಾರಿಗಳು ರೇಡಿಯೋ ಕಾಲರ್ ಅಳವಡಿಸಿ ಬಂಡೀಪುರದ ಅರಣ್ಯಕ್ಕೆ ಬಿಟ್ಟಿದ್ದರು. ಈ ತಣ್ಣೀರ್ ಕೊಂಬನ್ ಆನೆ ಕೇರಳದ ವಯನಾಡು ವ್ಯಾಪ್ತಿಯ ಮಾನಂದವಾಡಿ ಪಟ್ಟಣದ ಜನನಿಬೀಡ ಪ್ರದೇಶಕ್ಕೆ ನುಗ್ಗಿತ್ತು. ಮುಂದೇನಾಯ್ತು ಈ ಸ್ಟೋರಿ ಓದಿ...

ಚಾಮರಾಜನಗರ: ಕಾರ್ಯಾಚರಣೆಯಲ್ಲಿ ಸೆರೆ ಹಿಡಿಯಲಾಗಿದ್ದ ಆನೆ ಬಂಡೀಪುರದ ರಾಮಾಪುರ ಬಿಡಾರದಲ್ಲಿ ಸಾವು
ಮೃತ ಆನೆ
ಸೂರಜ್ ಪ್ರಸಾದ್ ಎಸ್.ಎನ್
| Edited By: ವಿವೇಕ ಬಿರಾದಾರ|

Updated on: Feb 03, 2024 | 10:29 AM

Share

ಚಾಮರಾಜನಗರ, ಫೆಬ್ರವರಿ 03: ಬಂಡೀಪುರದ (Bandipur) ರಾಮಾಪುರ ಆನೆ (Elephant) ಬಿಡಾರದಲ್ಲಿ ಆನೆ ಮೃತಪಟ್ಟಿದೆ. ಹಾಸನದ (Hassan) ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್ ಕೊಂಬನ್ ಎಂಬ ಆನೆಗೆ ಅರಣ್ಯ ಇಲಾಖೆ ಅಧಿಕಾರಿಗಳು (Forest Department) ರೇಡಿಯೋ ಕಾಲರ್ ಅಳವಡಿಸಿ ಬಂಡೀಪುರದ ಅರಣ್ಯಕ್ಕೆ ಬಿಟ್ಟಿದ್ದರು. ಈ ತಣ್ಣೀರ್ ಕೊಂಬನ್ ಆನೆ ಕೇರಳದ ವಯನಾಡು ವ್ಯಾಪ್ತಿಯ ಮಾನಂದವಾಡಿ ಪಟ್ಟಣದ ಜನನಿಬೀಡ ಪ್ರದೇಶಕ್ಕೆ ನುಗ್ಗಿತ್ತು. ಈ ವಿಚಾರ ತಿಳಿದು ಕೇರಳದ ಅರಣ್ಯ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆನೆಗೆ ಡಾಟಿಂಗ್ ಮಾಡಿ ಸೆರೆ ಹಿಡಿದು, ಲಾರಿಯಲ್ಲಿ ಬಂಡೀಪುರದ ರಾಮಾಪುರ ಆನೆ ಶಿಬಿರಕ್ಕೆ ಶುಕ್ರವಾರ (ಫೆ.02) ರಾತ್ರಿ ಕರೆತಂದಿದ್ದರು.

ಲಾರಿ ನಿಲ್ಲಿಸುತ್ತಿದ್ದಂತೆ ಆನೆ ಕುಸಿದು ಬಿದ್ದು ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದ್ದಾರೆ. ಇಂದು (ಫೆ.03) ಆನೆಯ ಮರಣೋತ್ತರ ಪರೀಕ್ಷೆ ನಡೆಯಲಿದೆ. ಬಳಿಕ ಆನೆ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಟಿವಿ9ಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಳುವಾರೆಯಲ್ಲಿ ಬೀಡುಬಿಟ್ಟ ಬೀಟಮ್ಮ ಗ್ಯಾಂಗ್

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಕೆಸರಿಕೆ‌ ಗ್ರಾಮದ ಮುಳುವಾರೆಯಲ್ಲಿ ಬೀಟಮ್ಮ ಗ್ಯಾಂಗ್ (ಆನೆಗಳ ಹಿಂಡು) ಬೀಡುಬಿಟ್ಟದೆ. ಗ್ರಾಮದ ಕಾಫಿ ಮತ್ತು ಅಡಿಕೆ ತೋಟಕ್ಕೆ ನುಗ್ಗಿದ್ದು, ಲಕ್ಷಾಂತರ ಮೌಲ್ಯದ ಕಾಫಿ ಬೆಳೆ, ಅಡಿಕೆ‌ ಬೆಳೆ ನಾಶವಾಗಿದೆ. ಕಾಡಾನೆಗಳು ಕಾಫಿ ತೋಟದ ಮಧ್ಯದಲ್ಲಿ ಬೀಡು ಬಿಟ್ಟಿದ್ದು, ತೋಟಕ್ಕೆ ಹೋಗಲು ಜನರಿಗೆ ತೊಂದರೆಯಾಗುತ್ತಿದೆ.

ಇದನ್ನೂ ಓದಿ: ಬಂಡೀಪುರದಲ್ಲಿ ಚಿತ್ರ ಸೆರೆ ಹಿಡಿಯಲು ನಿಂತ ಪ್ರವಾಸಿಗರು: ಆನೆ ತುಳಿತದಿಂದ ಕೂದಲೆಳೆ ಅಂತರದಿಂದ ಪಾರಾದ ವ್ಯಕ್ತಿ

ಇನ್ನು ಈ ಬೀಟಮ್ಮ ಗ್ಯಾಂಗ್‌ನಿಂದ ಬೇರ್ಪಟ್ಟ ಒಂಟಿ ಸಲಗ ಮೂಡಿಗೆರೆ-ಚಿಕ್ಕಮಗಳೂರು ಮಾರ್ಗದ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ. ಹೀಗಾಗಿ ಅರಣ್ಯ ಇಲಾಖೆ ತೋರಣಮಾವು, ಕೋಡುವಳ್ಳಿ, ಗೌತಮೇಶ್ವರ, ಅಣೂರು, ದಿಣ್ಣೆಕೆರೆ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದೆ. ಅನಗತ್ಯವಾಗಿ ರಸ್ತೆಗಿಳಿಯಬೇಡಿ, ಮುಂಜಾನೆಯೇ ತೋಟಕ್ಕೆ ಹೋಗಬೇಡಿ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚರಿಕೆ ನೀಡುತ್ತಿದ್ದಾರೆ.

ಕಾಡಾನೆ ದಾಳಿಗೆ ರೈತ ಬಲಿ

ಮೈಸೂರು: ಕಾಡಾನೆ ದಾಳಿಗೆ ರೈತ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನ ಮುದಗನೂರು ಗ್ರಾಮದಲ್ಲಿ ನಡೆದಿದೆ. ಚಲುವಯ್ಯ (65) ಮೃತ ದುರ್ದೈವಿ. ಕಟಾವು ಮಾಡಿದ್ದ ರಾಗಿ ಬೆಳೆ ಕಂತೆ ಕಟ್ಟುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ. ನಿರಂತರ ಕಾಡು ಪ್ರಾಣಿ ಹಾವಳಿಯಿಂದ ಆತಂಕ ಹೆಚ್ಚಾಗಿದ್ದು, ಶಾಶ್ವತ ಪರಿಹಾರಕ್ಕಾಗಿ ಮುದಗನೂರು ಗ್ರಾಮಸ್ಥರ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ