AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಕೊಟ್ಟ ಮುಂಗಾರು ಕಂಗಾಲಾದ ಅನ್ನದಾತ! ಇತ್ತ ಬೆಳೆಯೂ ಇಲ್ಲದೆ, ಅತ್ತ ಜಾನುವಾರುಗಳಿಗೆ ಮೇವು ಇಲ್ಲದೆ ರೈತರ ಪರದಾಟ

ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಸಮರ್ಪಕ ಮಳೆ ಇಲ್ಲದೆ ಬಿತ್ತಿದ ಬೆಳೆಗಳು ಒಣಗಿಹೋಗತೊಡಗಿವೆ. ಪೂರ್ವ ಮುಂಗಾರು ಮಳೆಯನ್ನು ನಂಬಿಕೊಂಡು ಬಿತ್ತನೆ ಮಾಡಿದ ರೈತರು ಮಳೆಗಾಗಿ ಆಕಾಶದತ್ತ ನೋಡುವಂತಾಗಿದೆ. ಇನ್ನು ಕೆಲವು ಕಡೆ ಸಾಕಷ್ಟು ಮಳೆಯಿಲ್ಲದ ಕಾರಣ ಬಿತ್ತನೆ ಕಾರ್ಯವನ್ನೆ ಆರಂಭಿಸದೆ ಅನ್ನದಾತರು ಮಳೆಗಾಗಿ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ.

ಕೈ ಕೊಟ್ಟ ಮುಂಗಾರು ಕಂಗಾಲಾದ ಅನ್ನದಾತ! ಇತ್ತ ಬೆಳೆಯೂ ಇಲ್ಲದೆ, ಅತ್ತ ಜಾನುವಾರುಗಳಿಗೆ ಮೇವು ಇಲ್ಲದೆ ರೈತರ ಪರದಾಟ
ಚಾಮರಾಜನಗರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jul 06, 2023 | 7:07 AM

Share

ಚಾಮರಾಜನಗರ: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಗೆ ರೈತರು ಬಿತ್ತನೆ ಮಾಡುವುದು ಸಾಮಾನ್ಯ. ಅದರಂತೆ ಜಿಲ್ಲೆಯ ರೈತರು ಪೂರ್ವ ಮುಂಗಾರು ಮಳೆ(Monsoon Rain)ಗೆ ಜೋಳ, ಸೂರ್ಯಕಾಂತಿ, ಹೆಸರು, ಅಲಸಂದೆ, ಉದ್ದು, ನೆಲಗಡೆಲೆ ಸೇರಿದಂತೆ 41 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದರು. ಆದರೆ, ಈಗ ಮಳೆ ಕೊರತೆ ಎದುರಾಗಿದೆ. ಬೆಳೆ ಒಣಗಿ ಹೋಗುತ್ತಿದ್ದು ರೈತರು ದಿಕ್ಕು ತೋಚದಂತಾಗಿದ್ದಾರೆ. ಇನ್ನು ಪಂಪ್‌ಸೆಟ್​ಗಳಲ್ಲಿನ ನೀರು ಬಳಸಿಕೊಂಡು ಬೆಳೆ ತೆಗೆಯಲು ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಅದು ಸಹ ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಜಾನುವಾರುಗಳಿಗೆ ಮೇವಿನ ಕೊರತೆ

ನಿರೀಕ್ಷೆಯಂತೆ ಮಳೆ ಬಿದ್ದಿದ್ದರೆ ಇಷ್ಟೊತ್ತಿಗೆ ಬೆಳೆಗಳು ನಳನಳಿಸಬೇಕಿತ್ತು. ಜಾನುವಾರುಗಳ ಮೇವಿನ ಕೊರತೆಯನ್ನು ನೀಗಿಸಬೇಕಿತ್ತು. ಆದರೆ, ಇದುವರೆಗೂ ಜಿಲ್ಲೆಯ ಬಹುತೇಕ ಕಡೆ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗದೆ 71 ಸಾವಿರಕ್ಕು ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಇನ್ನೂ ಬಿತ್ತನೆ ಕಾರ್ಯ ಆರಂಭಿಸಿಲ್ಲ. ಪೂರ್ವ ಮುಂಗಾರಿಗೆ ಬಿತ್ತನೆ ಮಾಡಿದ್ದ 41 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಒಣಗಿ ಹೋಗುತ್ತಿರುವುದರಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದ್ದು, ರೈತರು ದಾರಿ ಕಾಣದಂತಾಗಿದ್ದಾರೆ.

ಇದನ್ನೂ ಓದಿ:Belagavi News: ಮುಂಗಾರು ಮಳೆ ವಿಳಂಬ; ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬರಗಾಲದ ಛಾಯೆ

ಜಿಲ್ಲೆಯಲ್ಲಿ ಜೂನ್ ಜುಲೈ ತಿಂಗಳಲ್ಲಿನ ವಾಡಿಕೆ ಮಳೆಯಲ್ಲಿ ಶೇ.22 ರಷ್ಟು ಕೊರತೆಯಾಗಿದೆ. ಈ ತಿಂಗಳ ಅಂತ್ಯ ಅಥವಾ ಜುಲೈ ತಿಂಗಳ ಈ ವಾರದಲ್ಲಿ ಮಳೆಯಾಗುವ ನಿರೀಕ್ಷೆ ಇತ್ತು, ಅದು ಹುಸಿಯಾಗಿದೆ. ರೈತರು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿಕೊಂಡರೆ, ವಿಮೆ ಪರಿಹಾರ ದೊರೆಯಲಿದ್ದು ಬೆಳೆ ವಿಮೆ ಮಾಡಿಸಿಕೊಳ್ಳಲು ರೈತರು ಮುಂದಾಗಬೇಕು ಎಂದು ಜಂಟಿ ನಿರ್ದೇಶಕ ಕೃಷಿ ಇಲಾಖೆ ಅಧಿಕಾರಿ ಮದುಸೂಧನ್ ಮನವಿ ಮಾಡಿದ್ದಾರೆ. ಆದರೆ, ರೈತರು ಮಳೆ ಬಂದರೂ ಒಣಗಿರುವ ಬೆಳೆಗಳಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎನ್ನುತ್ತಾರೆ. ಜಿಲ್ಲಾಡಳಿತ ಕೂಡಲೇ ಬೆಳೆ ಸಮೀಕ್ಷೆ ನಡೆಸಿ ರೈತರ ನೆರವಿಗೆ ಧಾವಿಸಬೇಕು, ಜಾನುವಾರುಗಳಿಗೆ ಮೇವಿನ ಕೊರೆತೆ ನೀಗಿಸಲು ಕ್ರಮವಹಿಸಬೇಕು ಎಂಬುದು ರೈತರ ಆಗ್ರಹವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:05 am, Thu, 6 July 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!