ಕೈ ಕೊಟ್ಟ ಮುಂಗಾರು ಕಂಗಾಲಾದ ಅನ್ನದಾತ! ಇತ್ತ ಬೆಳೆಯೂ ಇಲ್ಲದೆ, ಅತ್ತ ಜಾನುವಾರುಗಳಿಗೆ ಮೇವು ಇಲ್ಲದೆ ರೈತರ ಪರದಾಟ

ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಸಮರ್ಪಕ ಮಳೆ ಇಲ್ಲದೆ ಬಿತ್ತಿದ ಬೆಳೆಗಳು ಒಣಗಿಹೋಗತೊಡಗಿವೆ. ಪೂರ್ವ ಮುಂಗಾರು ಮಳೆಯನ್ನು ನಂಬಿಕೊಂಡು ಬಿತ್ತನೆ ಮಾಡಿದ ರೈತರು ಮಳೆಗಾಗಿ ಆಕಾಶದತ್ತ ನೋಡುವಂತಾಗಿದೆ. ಇನ್ನು ಕೆಲವು ಕಡೆ ಸಾಕಷ್ಟು ಮಳೆಯಿಲ್ಲದ ಕಾರಣ ಬಿತ್ತನೆ ಕಾರ್ಯವನ್ನೆ ಆರಂಭಿಸದೆ ಅನ್ನದಾತರು ಮಳೆಗಾಗಿ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ.

ಕೈ ಕೊಟ್ಟ ಮುಂಗಾರು ಕಂಗಾಲಾದ ಅನ್ನದಾತ! ಇತ್ತ ಬೆಳೆಯೂ ಇಲ್ಲದೆ, ಅತ್ತ ಜಾನುವಾರುಗಳಿಗೆ ಮೇವು ಇಲ್ಲದೆ ರೈತರ ಪರದಾಟ
ಚಾಮರಾಜನಗರ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 06, 2023 | 7:07 AM

ಚಾಮರಾಜನಗರ: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಗೆ ರೈತರು ಬಿತ್ತನೆ ಮಾಡುವುದು ಸಾಮಾನ್ಯ. ಅದರಂತೆ ಜಿಲ್ಲೆಯ ರೈತರು ಪೂರ್ವ ಮುಂಗಾರು ಮಳೆ(Monsoon Rain)ಗೆ ಜೋಳ, ಸೂರ್ಯಕಾಂತಿ, ಹೆಸರು, ಅಲಸಂದೆ, ಉದ್ದು, ನೆಲಗಡೆಲೆ ಸೇರಿದಂತೆ 41 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ್ದರು. ಆದರೆ, ಈಗ ಮಳೆ ಕೊರತೆ ಎದುರಾಗಿದೆ. ಬೆಳೆ ಒಣಗಿ ಹೋಗುತ್ತಿದ್ದು ರೈತರು ದಿಕ್ಕು ತೋಚದಂತಾಗಿದ್ದಾರೆ. ಇನ್ನು ಪಂಪ್‌ಸೆಟ್​ಗಳಲ್ಲಿನ ನೀರು ಬಳಸಿಕೊಂಡು ಬೆಳೆ ತೆಗೆಯಲು ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಅದು ಸಹ ಸಾಧ್ಯವಾಗುತ್ತಿಲ್ಲ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಜಾನುವಾರುಗಳಿಗೆ ಮೇವಿನ ಕೊರತೆ

ನಿರೀಕ್ಷೆಯಂತೆ ಮಳೆ ಬಿದ್ದಿದ್ದರೆ ಇಷ್ಟೊತ್ತಿಗೆ ಬೆಳೆಗಳು ನಳನಳಿಸಬೇಕಿತ್ತು. ಜಾನುವಾರುಗಳ ಮೇವಿನ ಕೊರತೆಯನ್ನು ನೀಗಿಸಬೇಕಿತ್ತು. ಆದರೆ, ಇದುವರೆಗೂ ಜಿಲ್ಲೆಯ ಬಹುತೇಕ ಕಡೆ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗದೆ 71 ಸಾವಿರಕ್ಕು ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಇನ್ನೂ ಬಿತ್ತನೆ ಕಾರ್ಯ ಆರಂಭಿಸಿಲ್ಲ. ಪೂರ್ವ ಮುಂಗಾರಿಗೆ ಬಿತ್ತನೆ ಮಾಡಿದ್ದ 41 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಒಣಗಿ ಹೋಗುತ್ತಿರುವುದರಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದ್ದು, ರೈತರು ದಾರಿ ಕಾಣದಂತಾಗಿದ್ದಾರೆ.

ಇದನ್ನೂ ಓದಿ:Belagavi News: ಮುಂಗಾರು ಮಳೆ ವಿಳಂಬ; ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬರಗಾಲದ ಛಾಯೆ

ಜಿಲ್ಲೆಯಲ್ಲಿ ಜೂನ್ ಜುಲೈ ತಿಂಗಳಲ್ಲಿನ ವಾಡಿಕೆ ಮಳೆಯಲ್ಲಿ ಶೇ.22 ರಷ್ಟು ಕೊರತೆಯಾಗಿದೆ. ಈ ತಿಂಗಳ ಅಂತ್ಯ ಅಥವಾ ಜುಲೈ ತಿಂಗಳ ಈ ವಾರದಲ್ಲಿ ಮಳೆಯಾಗುವ ನಿರೀಕ್ಷೆ ಇತ್ತು, ಅದು ಹುಸಿಯಾಗಿದೆ. ರೈತರು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿಕೊಂಡರೆ, ವಿಮೆ ಪರಿಹಾರ ದೊರೆಯಲಿದ್ದು ಬೆಳೆ ವಿಮೆ ಮಾಡಿಸಿಕೊಳ್ಳಲು ರೈತರು ಮುಂದಾಗಬೇಕು ಎಂದು ಜಂಟಿ ನಿರ್ದೇಶಕ ಕೃಷಿ ಇಲಾಖೆ ಅಧಿಕಾರಿ ಮದುಸೂಧನ್ ಮನವಿ ಮಾಡಿದ್ದಾರೆ. ಆದರೆ, ರೈತರು ಮಳೆ ಬಂದರೂ ಒಣಗಿರುವ ಬೆಳೆಗಳಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎನ್ನುತ್ತಾರೆ. ಜಿಲ್ಲಾಡಳಿತ ಕೂಡಲೇ ಬೆಳೆ ಸಮೀಕ್ಷೆ ನಡೆಸಿ ರೈತರ ನೆರವಿಗೆ ಧಾವಿಸಬೇಕು, ಜಾನುವಾರುಗಳಿಗೆ ಮೇವಿನ ಕೊರೆತೆ ನೀಗಿಸಲು ಕ್ರಮವಹಿಸಬೇಕು ಎಂಬುದು ರೈತರ ಆಗ್ರಹವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:05 am, Thu, 6 July 23

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us