AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಮನಗೆದ್ದ ಕೊಳ್ಳೆಗಾಲದ ಕವಿ ಮಂಜುನಾಥ್​ಗೆ ಗಣರಾಜ್ಯೋತ್ಸವದ ಆಹ್ವಾನ

ಗಣರಾಜ್ಯೋತ್ಸವಕ್ಕೆ ದೆಹಲಿಯ ಕೆಂಪುಕೋಟೆ ಸಜ್ಜಾಗುತ್ತಿದ್ದು, ಈ ಬಾರಿ ದೇಶದ 1500 ರೈತ ದಂಪತಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಕಳೆದ ಬಾರಿ ಕೇವಲ ರೈತರಿಗಷ್ಟೇ ಆಹ್ವಾನ ನೀಡಲಾಗಿತ್ತು. ಈ ಬಾರಿ ಇತಿಹಾಸದಲ್ಲೇ ಮೊದಲ ಬಾರಿ ರೈತ ದಂಪತಿಗೆ ವಿಶೇಷ ಅತಿಥಿಗಳಾಗಿ ಆಹ್ವಾನ ನೀಡಲಾಗಿದೆ. ಇದರ ಜೊತೆಗೆ ಲಾಲಿ ಹಾಡು ಹಾಡಿ ಮೋದಿ ಅವರ ಮನ ಗೆದ್ದಿದ್ದ ಚಾಮರಾಜನಗರದ ಕವಿ ಮಂಜುನಾಥ್ ಅವರಿಗೂ ಆಹ್ವಾನ ನೀಡಲಾಗಿದೆ.

ಪ್ರಧಾನಿ ಮೋದಿ ಮನಗೆದ್ದ ಕೊಳ್ಳೆಗಾಲದ ಕವಿ ಮಂಜುನಾಥ್​ಗೆ ಗಣರಾಜ್ಯೋತ್ಸವದ ಆಹ್ವಾನ
ಮೋದಿ ಮನಗೆದ್ದ ಕೊಳ್ಳೆಗಾಲದ ಕವಿ ಮಂಜುನಾಥ್​ ಅವರಿಗೆ ಗಣರಾಜ್ಯೋತ್ಸವದ ಆಹ್ವಾನ ನೀಡಿದ ಕೇಂದ್ರ ಸರ್ಕಾರ
ಸೂರಜ್ ಪ್ರಸಾದ್ ಎಸ್.ಎನ್
| Edited By: Rakesh Nayak Manchi|

Updated on: Jan 19, 2024 | 12:46 PM

Share

ಚಾಮರಾಜನಗರ, ಜ.19: ಲಾಲಿ ಹಾಡು ಹಾಡಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮನ ಗೆದ್ದಿದ್ದ ಚಾಮರಾಜನಗರದ ಕವಿ ಮಂಜುನಾಥ್ ಅವರಿಗೆ ಕೇಂದ್ರ ಸರ್ಕಾರ ಗಣರಾಜ್ಯೋತ್ಸವಕ್ಕೆ (Republic Day) ಆಹ್ವಾನ ನೀಡಿದೆ. ಮಾತ್ರವಲ್ಲದೆ, ಇತಿಹಾಸದಲ್ಲೇ ಮೊದಲ ಬಾರಿಗೆ ರೈತ ದಂಪತಿಗೂ ಆಹ್ವಾನ ನೀಡಲಾಗಿದೆ. 1500 ರೈತ ದಂಪತಿಗಳಿಗೆ ಆಹ್ವಾನ ನೀಡಲಾಗಿದೆ. ಕಳೆದ ಬಾರಿ ಕೇವಲ ರೈತರಿಗಷ್ಟೇ ಗಣರಾಜ್ಯೋತ್ಸವದಲ್ಲಿ ಭಾಗಿಯಾಗುವ ಅವಕಾಶ ನೀಡಲಾಗಿತ್ತು.

ವೃತ್ತಿಯಲ್ಲಿ ಎಲ್ಐಸಿ ವಿಮಾ ಪಾಲಿಸಿದಾರನಾಗಿರುವ ಕೊಳ್ಳೆಗಾಲ ಕವಿ ಮಂಜುನಾಥ್ ಅವರು ಕೋವಿಡ್ ವೇಳೆ ಮಲಗು ಕಂದ ಮಲಗು ಕೂಸೆ, ಮಲಗು ನನ್ನ ಜಾಣ ಮರಿಯೇ ಎಂಬ ಸಾಲಿನಿಂದ ಜೋಗುಳ ಪದ ರಚಿಸಿದ್ದರು.

ಅಷ್ಟೇ ಅಲ್ಲದೆ, ಆನ್​ಲೈನ್​ನಲ್ಲಿ ರಂಗೋಲಿ, ದೇಶಭಕ್ತಿ ಗೀತೆ, ಲಾಲಿಹಾಡು ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಪುತ್ರನ ಒತ್ತಾಸೆಗೆ ಮಂಜುನಾಥ್ ಅವರು ಜೋಗುಳದ ಹಾಡು ರಚಿಸಿ ಹಾಡಿದ್ದರು. ಈ ಲೋರಿ ಹಾಡನ್ನು (ಲಾಲಿ ಹಾಡು) ಕೇಳಿದ ಪ್ರಧಾನಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ನಾನು ಈ ಹಾಡು ಕೇಳಿದ್ದೇನೆ, ನೀವೂ ಕೇಳಿ ಎಂದು ಮೋದಿ ಪ್ರಸ್ತಾಪಿಸಿದ್ದ ವೇಳೆ ಈ ರಚನೆಗೆ ಮನ್ ಕಿ ಬಾತ್ ಯುವ ಗಾಯಕರು ಧ್ವನಿ ನೀಡಿದ್ದರು.

ಇದನ್ನೂ ಓದಿ: ಮತ್ತೊಮ್ಮೆ ಗೆಲ್ಲುವ ಹಾದಿಯಲ್ಲಿರುವ ಮೋದಿ ಭಾರತಕ್ಕೆ ಅತ್ಯುತ್ತಮ ನಾಯಕ ಎಂದು ಹೊಗಳಿದ ಅಮೆರಿಕದ ಗಾಯಕಿ ಮೇರಿ ಮಿಲ್ಬೆನ್

ಈ ಲಾಲಿ ಹಾಡಿಗೆ ಆರು ಲಕ್ಷ ನಗದು ಬಹುಮಾನದ ಮನ್ನಣೆ ಕೂಡ ಸಿಕ್ಕಿತ್ತು. ಸದ್ಯ, ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಕವಿ ಮಂಜುನಾಥ್ ಅವರು ಪಡೆದಿದ್ದು, ಕೇಂದ್ರ ಸರ್ಕಾರವು ಟಿಕೆಟ್ ಬುಕ್ ಕೂಡ ಮಾಡಿದೆ. ಪತಿ ಮಂಜುನಾಥ್ ಜೊತೆ ಪತ್ನಿ ಕೂಡ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರೈತ ದಂಪತಿಗಳು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ರೈತ ದಂಪತಿಗಳಿಗೆ ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರು ಭೋಜನಕೂಟ ಆಯೋಜನೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​