AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ 20 ವರ್ಷ ಜೈಲು ಶಿಕ್ಷೆ

5 ವರ್ಷದ ಮಗಳ(Daughter) ಮೇಲೆ ಅತ್ಯಾಚಾರ ಎಸಗಿದ್ದ ತಂದೆ(Father)ಗೆ 20 ವರ್ಷ ಜೈಲು ಶಿಕ್ಷೆ ನೀಡಿ ಮಕ್ಕಳ ಸ್ನೇಹಿ ಮತ್ತು 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶರು ಆದೇಶಿಸಿದ್ದಾರೆ. ಹೌದು, ನೊಂದ ಬಾಲಕಿಯ ತಾಯಿಯನ್ನು ಮೂರನೇ ಮದುವೆಯಾಗಿದ್ದ ಆರೋಪಿ ಸೈಯದ್ ಮುಜಾಮಿಲ್( 45), ಈ ಕೃತ್ಯ ಎಸಗಿದ್ದ.

ಚಾಮರಾಜನಗರ: 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ತಂದೆಗೆ 20 ವರ್ಷ ಜೈಲು ಶಿಕ್ಷೆ
ಮಗಳ ಮೇಲೆಯೇ ಅತ್ಯಾಚಾರವೆಸಗಿದ್ದ ತಂದೆಗೆ ಜೈಲು ಶಿಕ್ಷೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Nov 07, 2023 | 5:12 PM

Share

ಚಾಮರಾಜನಗರ, ನ.07: 5 ವರ್ಷದ ಮಗಳ(Daughter) ಮೇಲೆ ಅತ್ಯಾಚಾರ ಎಸಗಿದ್ದ ತಂದೆ(Father)ಗೆ 20 ವರ್ಷ ಜೈಲು ಶಿಕ್ಷೆ ನೀಡಿ ಮಕ್ಕಳ ಸ್ನೇಹಿ ಮತ್ತು 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶರು ಆದೇಶಿಸಿದ್ದಾರೆ. ಹೌದು, ನೊಂದ ಬಾಲಕಿಯ ತಾಯಿಯನ್ನು ಮೂರನೇ ಮದುವೆಯಾಗಿದ್ದ ಆರೋಪಿ ಸೈಯದ್ ಮುಜಾಮಿಲ್( 45), ಹೆಂಡತಿ ಮನೆಯಲ್ಲಿಯೇ ಯಾರೂ ಇಲ್ಲದ ವೇಳೆ ಅತ್ಯಾಚಾರ ಎಸಗಿದ್ದ. ಈ ಘಟನೆಗೆ ಸಂಬಂಧಪಟ್ಟಂತೆ ಚಾಮರಾಜನಗರ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ವಿಚಾರಣೆ ಬಳಿಕ ಜೈಲು ಶಿಕ್ಷೆ ವಿಧಿಸಿ, ನೊಂದ ಬಾಲಕಿಗೆ 6 ಲಕ್ಷ ರೂಪಾಯಿ ಪರಿಹಾರ ಕೊಡಲೂ ಆದೇಶ  ನೀಡಿದ್ದಾರೆ.

ಇನ್ನು ಇಂತಹುದೇ ಘಟನೆಗೆ ಸಂಬಂಧಿಸಿದಂತೆ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಎಫ್​ಟಿಎಸ್​ಪಿ (ಪೋಕ್ಸೋ ಕೋರ್ಟ) ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಅಪರಾಧಿ ತಂದೆಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.ಹೌದು, ಜಿಲ್ಲೆಯ ಹರಿಹರ ತಾಲೂಕಿನ ನಿವಾಸಿ ಅಪರಾಧಿ ತಂದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದ ತಗಡಿನ ಶೀಟ್ ಮನೆಯಲ್ಲಿ ಮಗಳ ಮೇಲೆ ಬಟ್ಟೆ ಹಾಗೂ ತಿಂಡಿ ಕೊಡುತ್ತಾ ನಿರಂತರ ಅತ್ಯಾಚಾರ ನಡೆಸುತ್ತಿದ್ದ. ಈ ವಿಚಾರ ತಿಳಿದ ಬಳಿಕ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ದೆಹಲಿ: ಬಾಡಿಗೆ ಮನೆ ತೋರಿಸುವ ನೆಪದಲ್ಲಿ ಕರೆದೊಯ್ದು ಮಹಿಳೆ ಮೇಲೆ ಪ್ರಾಪರ್ಟಿ ಡೀಲರ್ ಮತ್ತವನ ಸ್ನೇಹಿತನಿಂದ ಸಾಮೂಹಿಕ ಅತ್ಯಾಚಾರ

ಈ ಕುರಿತು ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಶ್ರೀಪಾದ ಎನ್ ಅವರು ಆರೋಪಿ ತಂದೆಗೆ ಬರೊಬ್ಬರಿ 20 ವರ್ಷ ಜೈಲು ಶಿಕ್ಷೆ, 12 ಸಾವಿರ ದಂಡ ಹಾಗೂ ಸಂತ್ರಸ್ತೆಗೆ ಸರ್ಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತೀರ್ಪು ನೀಡಿದ್ದರು. ಇದಾದ ಬಳಿಕ ಇಂತಹ ಘಟನೆ ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದ್ದು, ಅಪ್ಪ-ಮಗಳ ಬಾಂಧವ್ಯಕ್ಕೆ ಚ್ಯುತಿ ಬರುವಂತಿದೆ. ಇನ್ನು ಆರೋಪಿ ತಂದೆಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದು, 5 ಲಕ್ಷ ದಂಡ ವಿಧಿಸಿದೆ. ಇನ್ನಾದರೂ ಇಂತಹ ಘಟನೆಗಳು ನಡೆಯದೆ ಇರಲಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್