AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leopard: ಗ್ರಾಮಸ್ಥರು ಮತ್ತು ಅರಣ್ಯಾಧಿಕಾರಿಗಳಿಗೆ ತಲೆ ನೋವಾಗಿದ್ದ ಚಿರತೆ ಕೊನೆಗೂ ಸೆರೆ

Chamarajanagar News: ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕುಂತೂರು ಬೆಟ್ಟದ ಗ್ರಾಮಸ್ಥರು ಮತ್ತು ಅರಣ್ಯಾಧಿಕಾರಿಗಳಿಗೆ ತಲೆ ನೋವಾಗಿದ್ದ ಚಿರತೆಯನ್ನು ಸ್ಪೆಷಲ್ ಲೆಪರ್ಡ್ ಟಾಸ್ಕ್ ಫೋರ್ಸ್ ನೇತೃತ್ವದಲ್ಲಿ ಕೂಂಬಿಂಗ್​ ಮೂಲಕ ಬುಧವಾರ ಸೆರೆ ಹಿಡಿಯಲಾಗಿದೆ.

Leopard: ಗ್ರಾಮಸ್ಥರು ಮತ್ತು ಅರಣ್ಯಾಧಿಕಾರಿಗಳಿಗೆ ತಲೆ ನೋವಾಗಿದ್ದ ಚಿರತೆ ಕೊನೆಗೂ ಸೆರೆ
ಸೆರೆಹಿಡಿಯಲಾದ ಚಿರತೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 02, 2023 | 3:55 PM

Share

ಚಾಮರಾಜನಗರ, ಆಗಸ್ಟ್​ 02: ಕಳೆದ ಒಂದು ವಾರದಿಂದ ಅರಣ್ಯಾಧಿಕಾರಿಗಳಿಗೆ ತಲೆ ನೋವಾಗಿದ್ದ ಚಿರತೆ (leopard) ಕೊನೆಗೂ ಬೋನಿಗೆ ಬಿದ್ದಿದೆ. ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕುಂತೂರು ಬೆಟ್ಟದಲ್ಲಿ ಸ್ಪೆಷಲ್ ಲೆಪರ್ಡ್ ಟಾಸ್ಕ್ ಫೋರ್ಸ್ ನೇತೃತ್ವದಲ್ಲಿ ಕೂಂಬಿಂಗ್​ ಮೂಲಕ ಚಿರತೆ ಸೆರೆ ಹಿಡಿಯಲಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಇತ್ತೀಚೆಗೆ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿ ಬಳಿ ಬಾಲಕನ ಮೇಲೆ ಚಿರತೆ ದಾಳಿ ಮಾಡಿದ್ದು, ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮದಲ್ಲಿ ಚಿರತೆ ದಾಳಿ ಹಿನ್ನಲೆ ಮಕ್ಕಳು ಶಾಲೆಗೆ ಹೋಗಲು ಭಯ ಪಡುವಂತ ವಾತಾವರಣ ಸೃಷ್ಠಿಯಾಗಿತ್ತು. ಮೈಸೂರಿನಿಂದ ಆಗಮಿಸಿದ್ದ ಟಾಸ್ಕ್​ಫೋರ್ಸ್​ ಮಲ್ಲಿಗೆಹಳ್ಳಿ ಸುತ್ತಮುತ್ತ 60 ಸಿಸಿಕ್ಯಾಮರಾ, 2 ದೊಡ್ಡ ಬೋನ್​ ಸೇರಿದಂತೆ 9 ಬೋನ್​ಗಳನ್ನು ಸಿಬ್ಬಂದಿ ಅಳವಡಿಸಿದ್ದರು.

ಇದನ್ನೂ ಓದಿ: ಮಾನವರ ಮೇಲೆ ಹೆಚ್ಚಾದ ಚಿರತೆ ದಾಳಿ: ಅರಣ್ಯಾಧಿಕಾರಿ ನೇತೃತ್ವದಲ್ಲಿ ಚಿರತೆ ಸೆರೆಗೆ ಮುಂದಾದ ಲೆಪರ್ಡ್ ಟಾಸ್ಕ್ ಫೋರ್ಸ್

ಅರಣ್ಯ ಇಲಾಖೆಯ 70ಕ್ಕೂ ಹೆಚ್ಚು ಸಿಬ್ಬಂದಿಯಿಂದ ಕೂಂಬಿಂಗ್​ ಕಾರ್ಯಚರಣೆ ಕೂಡ ಮಾಡಲಾಗಿತ್ತು. ಸದ್ಯ ಚಿರತೆ ಬೋನಿಗೆ ಬಿದ್ದಿದ್ದರಿಂದ ಗ್ರಾಮಸ್ಥರು ಸಂತಸಗೊಂಡಿದ್ದಾರೆ.

8 ಕುರಿಮರಿಗಳ ಮೇಲೆ ದಾಳಿ ಮಾಡಿದ ಚಿರತೆ

ಗಡಿನಾಡು ಚಾಮರಾಜನಗರದಲ್ಲಿ ಚಿರತೆ ದಾಳಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕಳೆದ 4 ವರ್ಷಗಳಿಂದ ಒಂದಲ್ಲ ಒಂದು ಕಡೆ ದಾಳಿ ನಡೆಯುತ್ತಿವೆ. ಅದೇ ರೀತಿ ಇತ್ತೀಚಿಗೆ ಕುರಿಕೊಟ್ಟಿಗೆ ಮೇಲೆ ದಾಳಿ ನಡೆಸಿದ ಚಿರತೆಯೊಂದು ಬರೋಬ್ಬರಿ 8 ಮರಿಗಳನ್ನ ತಿಂದಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ನಡೆದಿತ್ತು.

ಇದನ್ನೂ ಓದಿ: ಚಾಮರಾಜನಗರದಲ್ಲಿ ಮಕ್ಕಳನ್ನು ಭಾದಿಸುತ್ತಿದೆ ವಿಚಿತ್ರ ಚರ್ಮರೋಗ

ಅರಣ್ಯಾಧಿಕಾರಿಗಳಿಗೆ ಸುದ್ದಿ ತಿಳಿಸಿದರೂ ಸಕಾಲಕ್ಕೆ ಅಧಿಕಾರಿಗಳು ಆಗಮಿಸಿಲ್ಲ ಎಂದು ಅರಣ್ಯಾಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಕಳೆದ 4 ವರ್ಷದ ಹಿಂದೆಯೂ ಇದೆ ರೀತಿ ದಾಳಿಯಾಗಿತ್ತು. ಆಗ ಬೋನಿಟ್ಟ ಅರಣ್ಯಾಧಿಕಾರಿಗಳು ಚಿರತೆಯನ್ನ ಸೆರೆ ಹಿಡಿದು ಕಾಡಿಗೆ ಹೋಗಿ ಬಿಟ್ಟಿದ್ದರು. ಈಗ ಮತ್ತದೇ ರೀತಿಯ ಸಮಸ್ಯೆ ಎದುರಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:52 pm, Wed, 2 August 23

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More