AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡ್ಲುಪೇಟೆ ರಸ್ತೆಯಲ್ಲಿ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ ಅಪಘಾತದ ವಿಡಿಯೋ

Chamarajanagar Police: ಲಾರಿ ಹರಿದಿದ್ರೆ ವ್ಯಕ್ತಿಯ ದೇಹ ನಜ್ಜುಗುಜ್ಜಾಗಬೇಕಿತ್ತು. ಆದ್ರೆ ಕೇವಲ ಮರ್ಮಾಂಗಕ್ಕೆ ಮಾತ್ರ ಪೆಟ್ಟಾಗಿರುವುದು ಹೇಗೆ ಎಂಬುದು ದಲಿತ ಮುಖಂಡರ ಪ್ರಶ್ನೆಯಾಗಿದೆ. ಕೊಲೆಗೈದು ಇದನ್ನ ಅಪಘಾತವೆಂದು ಬಿಂಬಿಸಿರುವುದಾಗಿ ಆರೋಪ ಮಾಡುತ್ತಿದ್ದಾರೆ. ಪೊಲೀಸರು ಸದ್ಯಕ್ಕೆ ರಮೇಶ್ ಮರಣೋತ್ತರ ಪರೀಕ್ಷೆಗಾಗಿ ಕಾದು ಕುಳಿತಿದ್ದಾರೆ.

ಗುಂಡ್ಲುಪೇಟೆ ರಸ್ತೆಯಲ್ಲಿ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ ಅಪಘಾತದ ವಿಡಿಯೋ
ಗುಂಡ್ಲುಪೇಟೆ ರಸ್ತೆಯಲ್ಲಿ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟ ಅಪಘಾತದ ವಿಡಿಯೋ
ಸೂರಜ್ ಪ್ರಸಾದ್ ಎಸ್.ಎನ್
| Edited By: ಸಾಧು ಶ್ರೀನಾಥ್​|

Updated on:Sep 05, 2023 | 10:09 AM

Share

ಚಾಮರಾಜನಗರ, ಸೆಪ್ಟೆಂಬರ್​ 5: ಕಳೆದೊಂದು ವಾರದ ಹಿಂದೆ ನಡೆದಿದ್ದ ಅಪಘಾತ (accident) ಪ್ರಕರಣಕ್ಕೆ ಈಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅಪಘಾತದ ದೃಶ್ಯಗಳು ದಾಖಲಾಗಿರುವ ಆ ವಿಡಿಯೋ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಲಾರಿ ಹರಿದು ಮೃತ ಪಟ್ಟಿದ್ದ ವ್ಯಕ್ತಿಯ ವಿಡಿಯೋ (video) ಸೋಶಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆದರೆ ಅದು ಅಪಘಾತವಲ್ಲ; ಬದಲಿಗೆ ಅದೊಂದು ಪ್ರಿ ಪ್ಲಾನ್ಡ್​​ ಮರ್ಡರ್ ಎಂದು ದಲಿತ ಮುಖಂಡರು ಈಗ ಆರೋಪಿಸುತ್ತಿದ್ದಾರೆ (chamarajanagar police).

ಕಳೆದ ವಾರದ ಹಿಂದೆ ಚಾಮರಾಜನಗರ ಗುಂಡ್ಲುಪೇಟೆ ರಸ್ತೆಯಲ್ಲಿ ಅಪಘಾತ ನಡೆದಿತ್ತು. ರಸ್ತೆಯಲ್ಲಿ ನಿಂತಿದ್ದ ರಮೇಶ್ ಎಂಬಾತನ ಮೇಲೆ ಲಾರಿ ಹರಿದಿತ್ತು. ಲಾರಿ ಹರಿದ ಪರಿಣಾಮ ರಸ್ತೆಯಲ್ಲೆ ಬಿದ್ದು ವಿಲ ವಿಲ ಒದ್ದಾಡಿ ಉಸಿರು ಚೆಲ್ಲಿದ್ದ ರಮೇಶ್. ಇದು ಅಪಘಾತವಲ್ಲ; ಮರ್ಮಾಂಗ ಕತ್ತರಿಸಿ ಕೊಲೆ ಮಾಡಲಾಗಿದೆ ಎಂದು ದಲಿತ ಮುಖಂಡರು ಆರೋಪಿಸುತ್ತಿದ್ದಾರೆ.

Also Read: ಪತ್ನಿ ವಿರುದ್ಧವೇ ಸುಳ್ಳು ದರೋಡೆ ಕೇಸ್ ದಾಖಲು: ಸ್ಯಾಂಟ್ರೋ ರವಿಗೆ ಸಾಥ್ ನೀಡಿದ್ದ ಪೊಲೀಸ್​ ಇನ್ಸ್​​ಪೆಕ್ಟರ್ ವಿರುದ್ಧ ಕೈಗೊಂಡ ಕ್ರಮವೇನು?

ಲಾರಿ ಹರಿದಿದ್ರೆ ವ್ಯಕ್ತಿಯ ದೇಹ ನಜ್ಜುಗುಜ್ಜಾಗಬೇಕಿತ್ತು. ಆದ್ರೆ ಕೇವಲ ಮರ್ಮಾಂಗಕ್ಕೆ ಮಾತ್ರ ಪೆಟ್ಟಾಗಿರುವುದು ಹೇಗೆ ಎಂಬುದು ದಲಿತ ಮುಖಂಡರ ಪ್ರಶ್ನೆಯಾಗಿದೆ. ಕೊಲೆಗೈದು ಇದನ್ನ ಅಪಘಾತವೆಂದು ಬಿಂಬಿಸಿರುವುದಾಗಿ ಆರೋಪ ಮಾಡುತ್ತಿದ್ದಾರೆ. ಮೃತನ ಕುಟುಂಬಸ್ಥರ ಮೇಲೆ ಒತ್ತಡ ಹಾಕಿ ಫೇಕ್ ಕಂಪ್ಲೆಂಟ್ ನೀಡಿರುವ ಆರೋಪ ಕೇಳಿಬಂದಿದೆ. ಪೊಲೀಸರು ಸದ್ಯಕ್ಕೆ ರಮೇಶ್ ಮರಣೋತ್ತರ ಪರೀಕ್ಷೆಗಾಗಿ ಕಾದು ಕುಳಿತಿದ್ದಾರೆ. ಮರಣೋತ್ತರ ಪರೀಕ್ಷೆಯಿಂದಷ್ಟೇ ಪ್ರಕರಣದಲ್ಲಿನ ಸತ್ಯಾಸತ್ಯತೆ ಆಚೆ ಬರಬೇಕಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಚಾಮರಾಜನಗರ ಟೌನ್ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:08 am, Tue, 5 September 23

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು