AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡ್ಲುಪೇಟೆ ರಸ್ತೆಯಲ್ಲಿ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ ಅಪಘಾತದ ವಿಡಿಯೋ

Chamarajanagar Police: ಲಾರಿ ಹರಿದಿದ್ರೆ ವ್ಯಕ್ತಿಯ ದೇಹ ನಜ್ಜುಗುಜ್ಜಾಗಬೇಕಿತ್ತು. ಆದ್ರೆ ಕೇವಲ ಮರ್ಮಾಂಗಕ್ಕೆ ಮಾತ್ರ ಪೆಟ್ಟಾಗಿರುವುದು ಹೇಗೆ ಎಂಬುದು ದಲಿತ ಮುಖಂಡರ ಪ್ರಶ್ನೆಯಾಗಿದೆ. ಕೊಲೆಗೈದು ಇದನ್ನ ಅಪಘಾತವೆಂದು ಬಿಂಬಿಸಿರುವುದಾಗಿ ಆರೋಪ ಮಾಡುತ್ತಿದ್ದಾರೆ. ಪೊಲೀಸರು ಸದ್ಯಕ್ಕೆ ರಮೇಶ್ ಮರಣೋತ್ತರ ಪರೀಕ್ಷೆಗಾಗಿ ಕಾದು ಕುಳಿತಿದ್ದಾರೆ.

ಗುಂಡ್ಲುಪೇಟೆ ರಸ್ತೆಯಲ್ಲಿ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ ಅಪಘಾತದ ವಿಡಿಯೋ
ಗುಂಡ್ಲುಪೇಟೆ ರಸ್ತೆಯಲ್ಲಿ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟ ಅಪಘಾತದ ವಿಡಿಯೋ
ಸೂರಜ್ ಪ್ರಸಾದ್ ಎಸ್.ಎನ್
| Updated By: ಸಾಧು ಶ್ರೀನಾಥ್​|

Updated on:Sep 05, 2023 | 10:09 AM

Share

ಚಾಮರಾಜನಗರ, ಸೆಪ್ಟೆಂಬರ್​ 5: ಕಳೆದೊಂದು ವಾರದ ಹಿಂದೆ ನಡೆದಿದ್ದ ಅಪಘಾತ (accident) ಪ್ರಕರಣಕ್ಕೆ ಈಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅಪಘಾತದ ದೃಶ್ಯಗಳು ದಾಖಲಾಗಿರುವ ಆ ವಿಡಿಯೋ ನೂರೆಂಟು ಅನುಮಾನಕ್ಕೆ ಎಡೆಮಾಡಿ ಕೊಟ್ಟಿದೆ. ಲಾರಿ ಹರಿದು ಮೃತ ಪಟ್ಟಿದ್ದ ವ್ಯಕ್ತಿಯ ವಿಡಿಯೋ (video) ಸೋಶಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಆದರೆ ಅದು ಅಪಘಾತವಲ್ಲ; ಬದಲಿಗೆ ಅದೊಂದು ಪ್ರಿ ಪ್ಲಾನ್ಡ್​​ ಮರ್ಡರ್ ಎಂದು ದಲಿತ ಮುಖಂಡರು ಈಗ ಆರೋಪಿಸುತ್ತಿದ್ದಾರೆ (chamarajanagar police).

ಕಳೆದ ವಾರದ ಹಿಂದೆ ಚಾಮರಾಜನಗರ ಗುಂಡ್ಲುಪೇಟೆ ರಸ್ತೆಯಲ್ಲಿ ಅಪಘಾತ ನಡೆದಿತ್ತು. ರಸ್ತೆಯಲ್ಲಿ ನಿಂತಿದ್ದ ರಮೇಶ್ ಎಂಬಾತನ ಮೇಲೆ ಲಾರಿ ಹರಿದಿತ್ತು. ಲಾರಿ ಹರಿದ ಪರಿಣಾಮ ರಸ್ತೆಯಲ್ಲೆ ಬಿದ್ದು ವಿಲ ವಿಲ ಒದ್ದಾಡಿ ಉಸಿರು ಚೆಲ್ಲಿದ್ದ ರಮೇಶ್. ಇದು ಅಪಘಾತವಲ್ಲ; ಮರ್ಮಾಂಗ ಕತ್ತರಿಸಿ ಕೊಲೆ ಮಾಡಲಾಗಿದೆ ಎಂದು ದಲಿತ ಮುಖಂಡರು ಆರೋಪಿಸುತ್ತಿದ್ದಾರೆ.

Also Read: ಪತ್ನಿ ವಿರುದ್ಧವೇ ಸುಳ್ಳು ದರೋಡೆ ಕೇಸ್ ದಾಖಲು: ಸ್ಯಾಂಟ್ರೋ ರವಿಗೆ ಸಾಥ್ ನೀಡಿದ್ದ ಪೊಲೀಸ್​ ಇನ್ಸ್​​ಪೆಕ್ಟರ್ ವಿರುದ್ಧ ಕೈಗೊಂಡ ಕ್ರಮವೇನು?

ಲಾರಿ ಹರಿದಿದ್ರೆ ವ್ಯಕ್ತಿಯ ದೇಹ ನಜ್ಜುಗುಜ್ಜಾಗಬೇಕಿತ್ತು. ಆದ್ರೆ ಕೇವಲ ಮರ್ಮಾಂಗಕ್ಕೆ ಮಾತ್ರ ಪೆಟ್ಟಾಗಿರುವುದು ಹೇಗೆ ಎಂಬುದು ದಲಿತ ಮುಖಂಡರ ಪ್ರಶ್ನೆಯಾಗಿದೆ. ಕೊಲೆಗೈದು ಇದನ್ನ ಅಪಘಾತವೆಂದು ಬಿಂಬಿಸಿರುವುದಾಗಿ ಆರೋಪ ಮಾಡುತ್ತಿದ್ದಾರೆ. ಮೃತನ ಕುಟುಂಬಸ್ಥರ ಮೇಲೆ ಒತ್ತಡ ಹಾಕಿ ಫೇಕ್ ಕಂಪ್ಲೆಂಟ್ ನೀಡಿರುವ ಆರೋಪ ಕೇಳಿಬಂದಿದೆ. ಪೊಲೀಸರು ಸದ್ಯಕ್ಕೆ ರಮೇಶ್ ಮರಣೋತ್ತರ ಪರೀಕ್ಷೆಗಾಗಿ ಕಾದು ಕುಳಿತಿದ್ದಾರೆ. ಮರಣೋತ್ತರ ಪರೀಕ್ಷೆಯಿಂದಷ್ಟೇ ಪ್ರಕರಣದಲ್ಲಿನ ಸತ್ಯಾಸತ್ಯತೆ ಆಚೆ ಬರಬೇಕಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಚಾಮರಾಜನಗರ ಟೌನ್ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:08 am, Tue, 5 September 23

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!