AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಗಜಪಡೆಯಲ್ಲಿ ಗಮನ ಸೆಳೆಯುತ್ತಿವೆ ಬಂಡೀಪುರದ ಮೂರು ಆನೆಗಳು! ಏನಿವುಗಳ ವಿಶೇಷ?

ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಗಜಪಡೆ ಈಗಾಗಲೇ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಮೈಸೂರಿಗೆ ತಲುಪಿದೆ. ಈ ಬಾರಿಯ ಗಜಪಡೆಯಲ್ಲಿ ಬಂಡೀಪುರದಿಂದ ಮೂರು ಆನೆಗಳು ಸಹ ಸೇರಿವೆ. ಈ ಆನೆಗಳ ವಿಶೇಷಗಳೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಮೈಸೂರು ದಸರಾ ಗಜಪಡೆಯಲ್ಲಿ ಗಮನ ಸೆಳೆಯುತ್ತಿವೆ ಬಂಡೀಪುರದ ಮೂರು ಆನೆಗಳು! ಏನಿವುಗಳ ವಿಶೇಷ?
ಮೈಸೂರು ದಸರಾ ಗಜಪಡೆಯಲ್ಲಿ ಗಮನ ಸೆಳೆಯುತ್ತಿವೆ ಬಂಡೀಪುರದ ಆನೆಗಳು!
ಸೂರಜ್ ಪ್ರಸಾದ್ ಎಸ್.ಎನ್
| Updated By: Ganapathi Sharma|

Updated on:Aug 23, 2024 | 7:42 AM

Share

ಚಾಮರಾಜನಗರ, ಆಗಸ್ಟ್​ 23: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆ ಮೈಸೂರಿಗೆ ತಲುಪಿದೆ. ಇದರಲ್ಲಿ ಬಂಡೀಪುರದ ರಾಮಪುರ ಆನೆ ಕ್ಯಾಂಪ್​​ನ ಮೂರು ಆನೆಗಳು ಸೇರಿವೆ. ಈ ಪೈಕಿ ಅತಿ ಕಿರಿಯ ಆನೆ ರೋಹಿತ ಕೂಡ ಸೇರಿದೆ. ಕೇವಲ 22 ವರ್ಷದ ಪ್ರಾಯದ ರೋಹಿತ ಆನೆ ಶಿಸ್ತಿನ ಸಿಪಾಯಿ. ಉಳಿದಂತೆ ಹಿರಣ್ಯ, ಲಕ್ಷ್ಮೀ ಎಂಬ ಎರೆಡು ಹೆಣ್ಣಾನೆಗಳು ಕೂಡ ದಸರಾದಲ್ಲಿ ಪಾಲ್ಗೊಳ್ಳಲು ಅಭಿಮನ್ಯು ತಂಡದ ಜತೆಗೂಡಿವೆ.

2001 ರಲ್ಲಿ ತನ್ನ ತಾಯಿಂದ ಬೇರೆಯಾದ ರೋಹಿತ ಆನೆ ಹೆಡಿಯಾಲ ಅರಣ್ಯದಲ್ಲಿ ಒಂಟಿಯಾಗಿ ತಿರುಗಾಡುವಾಗ ಅರಣ್ಯಾಧಿಕಾರಿಗಳ ಕಣ್ಣಿಗೆ ಬಿದ್ದಿದ್ದ. ಆಗ ರೋಹಿತನಿಗೆ ಕೇವಲ 6 ತಿಂಗಳಷ್ಟೇ. ಆಗಿನಿಂದ ಬಂಡೀಪುರ ಆನೆ ಕ್ಯಾಂಪ್​​ನಲ್ಲಿ ರೋಹಿತನಿಗೆ ತರಬೇತಿ ನೀಡಲಾಗಿದ್ದು, 2001 ರಿಂದ ರೋಹಿತ ಕಾಡಿನಿಂದ ನಾಡಾನೆಯಾಗಿ ಬದಲಾಗಿದ್ದ.

ಶಿಸ್ತಿನ ಸಿಪಾಯಿ

ಮಾವುತ ಹೇಳುವ ಮಾತನ್ನು ಯಥಾವತ್ತಾಗಿ ಪಾಲಿಸುವ ಈ ರೋಹಿತ ಈಗ ಬರೋಬ್ಬರಿ 2.70 ಮೀಟರ್ ಎತ್ತರವಿದ್ದು 3200 ಕೆಜಿ ತೂಕವಿದೆ. ಇದರ ದಂತ ಭಾರಿ ಆಕರ್ಷಕವಾಗಿದ್ದು ಮುಂಬರುವ ದಸಾರಗಳಲ್ಲಿ ಅಂಬಾರಿ ಹೊರುವ ಎಲ್ಲ ಗುಣ ಲಕ್ಷಣಗಳು ಈ ರೋಹಿತ ಹೊಂದಿದ್ದಾನೆ.

ಇದನ್ನೂ ಓದಿ: ರಿಲ್ಯಾಕ್ಸ್ ಮೂಡ್​ನಲ್ಲಿರುವ ಮೈಸೂರು ದಸರಾ ಗಜಪಡೆ

ರೋಹಿತನ ಜತೆ ಲಕ್ಷ್ಮೀ ಹಾಗೂ ಹಿರಣ್ಯ ಕೂಡ ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದು ನಿಶಾನೆ ಆನೆಯಾಗಿ ಈ ಮೂರು ಆನೆಗಳನ್ನ ಬಳಸಿಕೊಳ್ಳುವ ಸಾದ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 am, Fri, 23 August 24

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?