ಮೈಸೂರು ದಸರಾ ಗಜಪಡೆಯಲ್ಲಿ ಗಮನ ಸೆಳೆಯುತ್ತಿವೆ ಬಂಡೀಪುರದ ಮೂರು ಆನೆಗಳು! ಏನಿವುಗಳ ವಿಶೇಷ?

ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಗಜಪಡೆ ಈಗಾಗಲೇ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಮೈಸೂರಿಗೆ ತಲುಪಿದೆ. ಈ ಬಾರಿಯ ಗಜಪಡೆಯಲ್ಲಿ ಬಂಡೀಪುರದಿಂದ ಮೂರು ಆನೆಗಳು ಸಹ ಸೇರಿವೆ. ಈ ಆನೆಗಳ ವಿಶೇಷಗಳೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಮೈಸೂರು ದಸರಾ ಗಜಪಡೆಯಲ್ಲಿ ಗಮನ ಸೆಳೆಯುತ್ತಿವೆ ಬಂಡೀಪುರದ ಮೂರು ಆನೆಗಳು! ಏನಿವುಗಳ ವಿಶೇಷ?
ಮೈಸೂರು ದಸರಾ ಗಜಪಡೆಯಲ್ಲಿ ಗಮನ ಸೆಳೆಯುತ್ತಿವೆ ಬಂಡೀಪುರದ ಆನೆಗಳು!
Edited By:

Updated on: Aug 23, 2024 | 7:42 AM

ಚಾಮರಾಜನಗರ, ಆಗಸ್ಟ್​ 23: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆ ಮೈಸೂರಿಗೆ ತಲುಪಿದೆ. ಇದರಲ್ಲಿ ಬಂಡೀಪುರದ ರಾಮಪುರ ಆನೆ ಕ್ಯಾಂಪ್​​ನ ಮೂರು ಆನೆಗಳು ಸೇರಿವೆ. ಈ ಪೈಕಿ ಅತಿ ಕಿರಿಯ ಆನೆ ರೋಹಿತ ಕೂಡ ಸೇರಿದೆ. ಕೇವಲ 22 ವರ್ಷದ ಪ್ರಾಯದ ರೋಹಿತ ಆನೆ ಶಿಸ್ತಿನ ಸಿಪಾಯಿ. ಉಳಿದಂತೆ ಹಿರಣ್ಯ, ಲಕ್ಷ್ಮೀ ಎಂಬ ಎರೆಡು ಹೆಣ್ಣಾನೆಗಳು ಕೂಡ ದಸರಾದಲ್ಲಿ ಪಾಲ್ಗೊಳ್ಳಲು ಅಭಿಮನ್ಯು ತಂಡದ ಜತೆಗೂಡಿವೆ.

2001 ರಲ್ಲಿ ತನ್ನ ತಾಯಿಂದ ಬೇರೆಯಾದ ರೋಹಿತ ಆನೆ ಹೆಡಿಯಾಲ ಅರಣ್ಯದಲ್ಲಿ ಒಂಟಿಯಾಗಿ ತಿರುಗಾಡುವಾಗ ಅರಣ್ಯಾಧಿಕಾರಿಗಳ ಕಣ್ಣಿಗೆ ಬಿದ್ದಿದ್ದ. ಆಗ ರೋಹಿತನಿಗೆ ಕೇವಲ 6 ತಿಂಗಳಷ್ಟೇ. ಆಗಿನಿಂದ ಬಂಡೀಪುರ ಆನೆ ಕ್ಯಾಂಪ್​​ನಲ್ಲಿ ರೋಹಿತನಿಗೆ ತರಬೇತಿ ನೀಡಲಾಗಿದ್ದು, 2001 ರಿಂದ ರೋಹಿತ ಕಾಡಿನಿಂದ ನಾಡಾನೆಯಾಗಿ ಬದಲಾಗಿದ್ದ.

ಶಿಸ್ತಿನ ಸಿಪಾಯಿ

ಮಾವುತ ಹೇಳುವ ಮಾತನ್ನು ಯಥಾವತ್ತಾಗಿ ಪಾಲಿಸುವ ಈ ರೋಹಿತ ಈಗ ಬರೋಬ್ಬರಿ 2.70 ಮೀಟರ್ ಎತ್ತರವಿದ್ದು 3200 ಕೆಜಿ ತೂಕವಿದೆ. ಇದರ ದಂತ ಭಾರಿ ಆಕರ್ಷಕವಾಗಿದ್ದು ಮುಂಬರುವ ದಸಾರಗಳಲ್ಲಿ ಅಂಬಾರಿ ಹೊರುವ ಎಲ್ಲ ಗುಣ ಲಕ್ಷಣಗಳು ಈ ರೋಹಿತ ಹೊಂದಿದ್ದಾನೆ.

ಇದನ್ನೂ ಓದಿ: ರಿಲ್ಯಾಕ್ಸ್ ಮೂಡ್​ನಲ್ಲಿರುವ ಮೈಸೂರು ದಸರಾ ಗಜಪಡೆ

ರೋಹಿತನ ಜತೆ ಲಕ್ಷ್ಮೀ ಹಾಗೂ ಹಿರಣ್ಯ ಕೂಡ ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದು ನಿಶಾನೆ ಆನೆಯಾಗಿ ಈ ಮೂರು ಆನೆಗಳನ್ನ ಬಳಸಿಕೊಳ್ಳುವ ಸಾದ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 am, Fri, 23 August 24

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us